ಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ

ದಾಸಶ್ರೇಷ್ಠ ಪುರಂದರದಾಸರು ಹುಟ್ಟಿದ ದಿನವೇ ಆಗಲಿ, ಹರಿದಾಸ ದೀಕ್ಷೆ ಪಡೆದ ದಿನವೇ ಆಗಲೀ ತಿಳಿಯದು. ಅವರ ಶರೀರವನ್ನು ಅಗಲಿದ ದಿನ ಮಾತ್ರ ರಕ್ತಾಕ್ಷಿ ಸಂವತ್ಸರ, ಪುಷ್ಯ ಮಾಸದ ಅಮಾವಾಸ್ಯೆ ಕ್ರಿ.ಶ. 1564 ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ದಿನವನ್ನು ವಿಶ್ವದ ಬಹುತೇಕ ಕಡೆಗಳಲ್ಲಿ ಕರ್ನಾಟಕ ಸಂಗೀತ ಆರಾಧಕರು ಪುರಂದರರ ಪುಣ್ಯದಿನವೆಂದು ದಾಸವರೇಣ್ಯನಿಗೆ ಪುಷ್ಪಾಂಜಲಿ ಸಲ್ಲಿಸುತ್ತಾರೆ.
ಪುರಂದರರಿಗೆ ಸಲ್ಲಿಪ ಈ ಪುಷ್ಪಾಂಜಲಿಯು ಸಂಗೀತ ಕಲಿತ, ಕಲಿಯುವ, ಸಂಗೀತ ಕಲಾಭಿಮಾನಿಗಳು ಸಲ್ಲಿಪ "ಗುರುವಂದನೆ". ಈ ಗುರುವಂದನೆಯನು ಸಿಂಗಪುರ ಕನ್ನಡ ಸಂಘ ಹಾಗೂ ಸ್ಯಾಮ-ಸಂಸ್ಥೆಯ ಕಲಾವಿದರ ನೇತೃತ್ವದಲ್ಲಿ, 24 ಶನಿವಾರ ಸಂಜೆ ಡಿ.ಬಿ.ಎಸ್. ಸಭಾಂಗಣದಲ್ಲಿ "ದಾಸರು"-(ದೃಷ್ಟಿಯಲಿ ಕೃಷ್ಣ)-ನೃತ್ಯರೂಪಕ ಕಾರ್ಯಕ್ರಮ ಏರ್ಪಡಿಸಿತ್ತು.
ಕೃಷ್ಣನ ಬಾಲಲೀಲೆಗಳ ವರ್ಣನೆ, ಗೋಪಿಕೆಯರ ಒಡನಾಟ, ತಾಯಿ-ಮಗುವಿನ ಅನುಬಂಧ, ಕಾಳಿಂಗ ಮರ್ದನ ಕಣ್ಣಾರೆ ಕಂಡಂತೆ ತಮ್ಮ ರಚನೆಗಳಲಿ ವರ್ಣಿಸಿ.. ಏಕೆ, ಹೀಗೆ, ಇದೇನು, ಅದ್ಯಾಕೆ ಎಂದು ಅ ಭಗವಂತ ನಿನ್ನ ಲೀಲೆಗಳು ಇದೆಂತುಹುದೆಂದು ಪ್ರಶ್ನಿಸಿ.. ಕಡೆಯಲ್ಲಿ ಹರಿಯೇ ಈ ಭವಬಂಧನದಿಂದ ಮುಕ್ತಿ ನೀಡು ಎಂದು ಮೊರೆಯಿಟ್ಟು ಆ ವಿಠಲನಲ್ಲಿ ಲೀನಗೊಳ್ಳುವ ಪುರಂದರರ ರಚನೆಗಳ ನಾಟ್ಯ-ಗಾಯನವದಾಗಿತ್ತು.
ಕನ್ನಡ ಸಂಘದ ಕಲಾವಿದರಿಂದ ಗಾಯನ- ಸ್ಯಾಮ ಸಂಸ್ಥೆಯ ವಿದ್ಯಾರ್ಥಿನಿಯರ ನೃತ್ಯ-ರೂಪಕದಲಿ ದಾಸರ ಬುಕುಚ್ಚಿ ಮಾಡಲಾರೆ, ಅಮ್ಮಾ ಎತ್ತಿಕೊಳ್ಳಮ್ಮ, ಗುಮ್ಮನ ಕರೆಯದಿರೆ, ಜಗದೋದ್ದಾರನ, ಏನು ಮಾಡಲೋ ರಂಗ, ಏಕೆ ಬೆಳಗಾಯಿತು, ಚಿಕ್ಕವನೇ ಇವನು ಯಶೋದೆ, ಜಗನ್ಮೋಹನನೇ ಕೃಷ್ಣ, ಪಿಳ್ಳಂಗೋವಿಯ ಚೆಲ್ವ ಕೃಷ್ಣನ ಎಲ್ಲಿ ನೋಡಿದಿರಿ, ಆನೆಯು ಕರೆದರೆ ಆದಿಮೂಲ ಕೀರ್ತನೆಗಳು ಜನರ ಮನ ಗೆದ್ದವು.
ಗಾಯನ ಸಂಗೀತ ವಿದುಷಿ ಭಾಗ್ಯಮೂರ್ತಿ ಹಾಗೂ ತಂಡದವರಿಂದ ಕಲಾಪ್ರದರ್ಶನ ಏರ್ಪಡಿಸಲಾಗಿತ್ತು. ಇದಕ್ಕೆ ತಕ್ಕ ಸಾರಥ್ಯ ನೀಡಿದವರು ರಾಜ ಸುಬ್ರಹ್ಮಣ್ಯಂ-ಮೃದಂಗ, ತ್ಯಾಗರಾಜು-ಕೊಳಲು, ವಿದ್ಯಾ-ವಯಲಿನ್, ರಾಮ್ಕುಮಾರ್ ವಾಸುದೇವನ್-ವೀಣೆ. ಶ್ರೀಲಕ್ಷ್ಮಿ- ನಟುವಾಂಗ, ಪ್ರಕೃತಿ, ಸಾಧನ ರಾಜಾರಾಂ, ಭಾರತಿ ಮೂರ್ತಿ ಮತ್ತು ಅತಿರ ಅವರಿಂದ ನೃತ್ಯಗೈದರು. ಪುರಂದರ ವೇಷಧಾರಿಯಾಗಿ ವಿಶಾಲಾಕ್ಷಿ ವೈದ್ಯ, ನಿರೂಪಣೆ ಸರಯೂ ವೈದ್ಯ ಅವರಿಂದ ನಡೆಯಿತು.
ಪುರಂದರ ದಾಸರು ಹಿರಿಯ ಭಕ್ತ, ಹಾಡುಗಾರ, ಕೀರ್ತನಕಾರ. ಅವರ ಕೃತಿಗಳಲ್ಲಿ ಸಮಾಜ ವಿಮರ್ಶೆ, ಸಮಾಜ ಬೋಧನೆ, ದೇವರ ನಾಮ ಮಹಿಮೆ, ಅಂತರಂಗ ನಿವೇದನೆ, ಆಧ್ಯಾತ್ಮಿಕ ಕಲ್ಪನೆಗಳು ಕಂಡು ಬರುತ್ತದೆ. ದಾಸರ ಕೃತಿಗಳಲ್ಲಿ ಭಕ್ತನ ಸಂಪೂರ್ಣ ಸಮಪರ್ಣೆಯ ಸಾಕ್ಷಾತ್ಕಾರ ಸುಂದರ ರೂಪ ಕಂಡು ಬರುತ್ತದೆ. ಹಾಗೆಯೇ ಭಕ್ತಿ, ಶೃಂಗಾರ, ಹಾಸ್ಯ, ವಾತ್ಸಲ್ಯ, ವೈರಾಗ್ಯ, ನೀತಿಭೋಧೆ, ಜೀವನ ನಿಷ್ಠೆ ಇದೆ.
'ಕಲ್ಲು ಸಕ್ಕರೆ ಕೊಳ್ಳಿರೋ ನೀವೆಲ್ಲರೂ' ಎಂದು ಭಕ್ತಿ ಸಕ್ಕರೆಯ ಹಂಚಿ, ರಾಮನಾಮವ ನುಡಿ, ನುಡಿ, ಕಾಮಕ್ರೋಧಗಳ ಬಿಡಿ, ಬಿಡಿ-ಎಂದ್ನುಡಿದ ಪಿತಾಮಹನ ಆರಾಧನೆಯ ವೇದಿಕೆ ಹಾಡುಗಾರ ವೇದಿಕೆ. ಪ್ರತಿಯೋರ್ವ ಸಂಗೀತ ಪ್ರೇಮಿಯೂ ಹಿರಿಯ ವ್ಯಕ್ತಿಗೆ ಸಂಗೀತದ ಮೂಲಕ ಸಲ್ಲಿಸುವ ಪುರಂದರ ನಮನವೆಂಬ ಪೂಜೆ ಹೀಗೆಯೇ ಪ್ರತಿವರುಷವೂ ನಡೆಯುತ್ತಿರಲಿ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications