37626purandara dasaಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37626purandara dasaಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ/nri/article/2009/0203-purandara-namana-in-singapore.htmlಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ 34444http://kannada.oneindia.com/img/2009/02/03-purandara4.jpg37626purandara dasaಹೊಸ ವಿವಾದದಲ್ಲಿ ಜೀ ಕನ್ನಡ 'ಪುರಂದರ ವಿಠಲ'/movies/tv/2009/10/27-zee-kannada-serial-purandara-vittala-in-trouble.htmlಜೀ ಕನ್ನಡ ವಾಹಿನಿಯ ಹೊಸ ಹಾಸ್ಯ ಧಾರಾವಾಹಿ ''ಪುರಂದರ ವಿಠಲ'' ಹೊಸ ವಿವಾದದಲ್ಲಿ ಸಿಕ್ಕಿಕೊಂಡಿದೆ. ಪುರಂದರದಾಸರ ಅಂಕಿತನಾಮವನ್ನು ಹಾಸ್ಯ ಧಾರಾವಾಹಿಯ ಶೀರ್ಷಿಕೆಯಾಗಿ ಬಳಸಿಕೊಂಡಿರುವುದರ ಬಗ್ಗೆ ''ಶ್ರೀ ಸುಮಧ್ವ ಸೇವಾ ಸಮಿತಿ ಟ್ರಸ್ಟ್' ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪುರಂದರ ವಿಠಲ ಹಾಸ್ಯ ಧಾರಾವಾಹಿ ನವೆಂಬರ್ 2ರಿಂದ ಪ್ರಸಾರವಾಗಲಿದೆ. ''ನಾರದ ಮಹರ್ಷಿಗಳ ಅಪರಾವತಾರ ಪುರಂದರದಾಸರು. 39898http://kannada.oneindia.com/img/2009/10/27-sihi-kahi-geetha1.jpg37626purandara dasaಮಾಡು ಸಿಕ್ಕದಲ್ಲಾ ಮಾಡಿನ ಗೂಡು ಸಿಕ್ಕದಲ್ಲ/movies/music/2009/11/24-purandara-dasa-maadu-sikkadalla-keerthana.htmlಮಾಡು ಸಿಕ್ಕದಲ್ಲ ಮಾಡಿನ ಗೂಡು ಸಿಕ್ಕದಲ್ಲ ಎಂಬುದು ಬದುಕಿನ ನಶ್ವರತೆಯನ್ನು ಸಾರುವ ದಾಸರ ಪದ. ಪುರಂದರ ದಾಸರು ರಚಿಸಿರುವ ಈ ಕೀರ್ತನೆ ಬದುಕಿನ ಬಗ್ಗೆ ನಾನಾ ಅರ್ಥಗಳನ್ನು ಹೊಮ್ಮಿಸುತ್ತದೆ. ಇತ್ತೀಚೆಗೆ ಟಿ.ಎನ್.ಸೀತಾರಾಮ್ ಅವರು ತಮ್ಮ ಮೆಗಾ ಧಾರಾವಾಹಿ ಶೀರ್ಷಿಕೆಯ ಜತೆಗೆ ದಾಸರ ಪದವನ್ನು ಬಳಸಿಕೊಂಡಿರುವುದು ವಿಶೇಷ. ಮಾಡು ಸಿಕ್ಕದಲ್ಲಾ , ಮಾಡಿನ ಗೂಡು ಸಿಕ್ಕದಲ್ಲ ಜೋಡು 40393http://kannada.oneindia.com/img/2009/11/24-purandara-dasa1.jpg213309karnataka musicಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ/nri/article/2009/0203-purandara-namana-in-singapore.htmlಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ 34444http://kannada.oneindia.com/img/2009/02/03-purandara4.jpg213309karnataka musicಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು/literature/people/2009/0325-veena-raja-rao-birth-centenary.htmlಸುಪ್ರಸಿದ್ದ ಮೈಸೂರು ಸಂಗೀತ ಪರಂಪರೆಗೆ ಸೇರಿದ ವೀಣೆ ರಾಜಾರಾಯರು (ಮಾರ್ಚ್ 26, 1909 - ನವೆಂಬರ್ 28, 1979) ಪ್ರಮುಖ ಪ್ರತಿಭೆಯ ಕಲಾವಿದರು. ಈ ಗುರುವಾರ ಮಾರ್ಚ್ 26ಕ್ಕೆ ಒಂದು ನೂರು ವರ್ಷಗಳ ಹಿಂದೆ ಮೈಸೂರಿನಲ್ಲಿ ಜನಿಸಿದ ರಾಜಾರಾಯರು ತಮ್ಮ ಪೂರ್ವಜರಂತೆ ವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಬೆಳಗಿದರು.ತಮ್ಮ ತಂದೆ ಆಸ್ಥಾನ ವಿದ್ವಾನ್ ಭೈರವಿ ಲಕ್ಶ್ಮಿನಾರಣಪ್ಪನವರಲ್ಲಿ ಶಿಷ್ಯವೃತ್ತಿ ಮಾಡಿ 35511http://kannada.oneindia.com/img/2009/03/25-veene-rajarao1.jpg213309karnataka musicಡೆಟ್ರಾಯಿಟ್‌ನಲ್ಲಿ ವೀಣೆ ರಾಜಾರಾಯರ ಸ್ಮರಣೆ/nri/article/2009/0408-veena-raja-rao-birth-centenary-detroit.htmlವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಖ್ಯಾತಿಯ ಮೇರುತುದಿ ಏರಿದ್ದ ಕನ್ನಡಾಭಿಮಾನಿ ವೀಣೆ ರಾಜಾರಾಯರ ಜನ್ಮ ಶತಮಾನೋತ್ಸವದ ಮೊದಲ ಆಚರಣೆ ಡೆಟ್ರಾಯಿಟ್‌ನಲ್ಲಿ ವೀಣೆ ಕಚೇರಿ ನಡೆಸುವ ಮುಖಾಂತರ ಮಾರ್ಚ್ 28ರಂದು ಸಂಭ್ರಮದಿಂದ ಆಚರಿಸಲಾಯಿತು. ರಾಜಾರಾಯರ ಬದುಕು, ಸಾಧನೆಗಳನ್ನು ಪರಿಚಯಿಸುವ ಒಂದು ಚಿತ್ರಪ್ರದರ್ಶನವು ರಸಿಕರ ಮೆಚ್ಚುಗೆ ಗಳಿಸಿತು ಮತ್ತು ಸಮಾರಂಭಕ್ಕೆ ಕಳೆನೀಡಿತ್ತು. 1930ರ ದಶಕದಿಂದ ಸಂಗ್ರಹಿಸಿರುವ ಅನೇಕ ಅಮೂಲ್ಯವಾದ ಬರವಣಿಗೆಗಳು ಮತ್ತು 35813http://kannada.oneindia.com/img/2009/04/08-veena-kinhal1.jpg213309karnataka musicಸಿಡ್ನಿಯಲ್ಲಿ ಎಂಎಸ್ ಶೀಲಾ ಅಮೋಘ ಗಾಯನ/nri/article/2009/0613-sydney-music-festival-ms-sheela.htmlಜೂನ್ 6 ಮತ್ತು 7ರಂದು ಸಿಡ್ನಿಯಲ್ಲಿ ಸಂಗೀತೋತ್ಸವವೊಂದು ಜರುಗಿತು - Sydney Music Festival. ಭಾರತದಿಂದ ಅನೇಕ ಪ್ರಸಿದ್ಧ ಸಂಗೀತಗಾರರು ಇದರಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಸಂಗೀತಕ್ಕೆ ಮೀಸಲಾದ ಉತ್ಸವ ಇದು. ಹಲವಾರು ಕಚೇರಿಗಳಾದವು. ಪಾಲ್ಗೊಂಡವರಲ್ಲಿ ಬಹುತೇಕ ಮಂದಿ ತಮಿಳರು. ಆದರೆ ಅತ್ಯಂತ ಸಂತೋಷದ ವಿಷಯವೆಂದರೆ ಸಭಿಕರು ಬಹುವಾಗಿ ಮೆಚ್ಚಿದ ಕಚೇರಿ ನೀಡಿದವರು ನಮ್ಮವರೇ ಆದ, ಕನ್ನಡಿಗರು, ಬೆಂಗಳೂರು 37322http://kannada.oneindia.com/img/2009/06/13-ms-sheela1.jpg213309karnataka musicಶ್ರೀಪಾದ ಸಂಗೀತ ಕಲಾ ಕೆಂದ್ರದ ಆರಂಭ/cj/archana-hebbar/2009/0813-shreepada-sangeeta-kala-kendra-bengaluru.htmlಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ 38612http://kannada.oneindia.com/img/2009/08/13-instruments2.jpg136015singaporeನೆನಪಿನ ತರಂಗಾಂತರಗಳು!/nri/article/2009/0121-a-walk-down-radio-memory-lane.htmlರೇಡಿಯೋ ಎಂದಾಕ್ಷಣ ಹಿಂದಿನ ಪೀಳಿಗೆಯ ಮಂದಿಯ ಕಂಗಳು ಅರಳಿ ಇಷ್ಟಗಲವಾಗುತ್ತವೆ. ರೇಡಿಯೋ ಶಬ್ದವೊಂದೇ ಸಾಕು ತರಂಗಾತರಗಳ ಅಲೆಅಲೆಯ ಮೇಲೆ ತೇಲಿಸಿಕೊಂಡು ಹೋಗಿ ಹಳೆಯ ನೆನಪುಗಳ ಲೋಕಕ್ಕೆ ಕರೆದೊಯ್ಯಲು. ಎಫ್ಎಂ, ಟೀವಿ ಇಲ್ಲದ ಕಾಲದಲ್ಲಿ ಎಲ್ಲರ ಅಚ್ಚುಮೆಚ್ಚಿನ ಸಂಗಾತಿಯಾಗಿದ್ದ ಆ ಪೆಟ್ಟಿಗೆ ನಿಮ್ಮ ಅಟ್ಟದ ಮೇಲಿದ್ದರೆ ಥಟ್ಟನೆ ಒಮ್ಮೆ ಹೋಗಿ ನೋಡಿ, ನೆನಪುಗಳ ತರಂಗಗಳು ಏಳದಿದ್ದರೆ ಕೇಳಿ!* ಗಿರೀಶ್ 34201http://kannada.oneindia.com/img/2009/01/21-radio1.jpg136015singaporeಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg136015singaporeಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ/nri/article/2009/0203-purandara-namana-in-singapore.htmlಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ 34444http://kannada.oneindia.com/img/2009/02/03-purandara4.jpg136015singaporeಆಕಾಶದಲ್ಲಿ ಗೃಹ ತಾರೆಗಳ ಮೇಳ/nri/article/2009/0211-phenomena-in-space-vasanth-kulkarni.htmlಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಖಗೋಳ ವೀಕ್ಷಣೆಯಂತಹ ಉಪಯುಕ್ತ ಹವ್ಯಾಸಗಳನ್ನು ಹೇಳಿ ಕೊಡಲು ಅನೇಕ ಸಂಸ್ಥೆಗಳು, ಉಪಕರಣಗಳು ಇತ್ಯಾದಿಗಳ ಸೌಲಭ್ಯವಿದ್ದರೂ, ಮಕ್ಕಳಿಗೆ ಮತ್ತು ಪಾಲಕರಿಗೆ ಸಮಯದ ಆಭಾವವಿದೆ. ಅಲ್ಲದೇ ಸಧ್ಯದ ನಮ್ಮ ಪರೀಕ್ಷಾಕೇಂದ್ರಿತ ಶಿಕ್ಷಣವು ಇಂತಹ ಹವ್ಯಾಸಗಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವದಿಲ್ಲ. ಅದರಿಂದ ಮಕ್ಕಳ ಪಾಲಕರೇ ಇಂತಹ ವಿಷಯಗಳಲ್ಲಿ ಆಸಕ್ತಿ ತಳೆದು ಮಕ್ಕಳಿಗೆ ಕೂಡ ಆಸಕ್ತಿ ಹುಟ್ಟುವಂತೆ 34597http://kannada.oneindia.com/img/2009/02/11-solar-eclipse1.jpg136015singaporeಬೆಳ್ಳಿಚುಕ್ಕಿ ಬೆಳ್ಳಿಚುಕ್ಕಿ ಬಿಂಕಾತೋರಿ ಬೆಳಗೋ ಮುಂಜಾನೆ/literature/articles/2009/0428-morning-star-venus.htmlಫಳಫಳನೆ ಹೊಳೆಯುವ ಶುಕ್ರನಿಗೂ ಭೂಮಿಗೂ ಭಾರೀ ನಂಟು. ಆಕಾರದಲ್ಲಿ ಸಾಮ್ಯತೆ ಮಾತ್ರವಲ್ಲ ಭಾವನಾತ್ಮಕವಾಗಿಯೂ ಭೂಮಿಯೊಡನೆ ಶುಕ್ರನ ನಂಟಿದೆ. ಹಿಂದಿನ ಕಾಲದಲ್ಲಿ ರೈತಾಪಿ ಜನ ಬೆಳಗು ಕಾಣುತ್ತಿದ್ದುದೇ ಶುಕ್ರನ ದರ್ಶನದಿಂದ. ಅಷ್ಟಕ್ಕೂ, ಸ್ತ್ರೀಯರು ಶುಕ್ರನಿಂದಲೇ ಬಂದವರೆಂದು ಪ್ರತೀತಿಯಿದೆಯಲ್ಲವೆ? ಇಂತಿಪ್ಪ ಶುಕ್ರನ ವಾತಾವರಣ ಹೇಗಿದೆ? ಮಾನವ ಅಲ್ಲಿ ಅಡಿಯಿಡಲು ಸಾಧ್ಯವೆ? ಲೇಖನ ಓದಿರಿ.* ವಸಂತ ಕುಲಕರ್ಣಿ, ಸಿಂಗಪುರಓದುಗ ಮಿತ್ರರೊಬ್ಬರು ಈ 36266http://kannada.oneindia.com/img/2009/04/28-venus1.jpgnews"> ಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ | Purandasa Dasa remembered in Singapore - ಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ - Kannada Oneindia

ಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ

Purandasa Dasa remembered in Singapore
ಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ ಸಂಗೀತವನ್ನು ಕಲಿಯಲು ಒಂದು ವ್ಯವಸ್ಥಿತ ಪದ್ಧತಿಯನ್ನು ಅಳವಡಿಸಿದರು. ಖರಹರಪ್ರಿಯ ರಾಗದಿಂದ ಸಂಗೀತವನ್ನು ಅಭ್ಯಾಸಮಾಡಲು ಆರಂಭಿಸುತ್ತಿದ್ದ ಹಿಂದಿನ ಕ್ರಮವನ್ನು ಬದಲಾಯಿಸಿ ಸುಲಭ ಕಲಿಕೆಗೆ ಅನುವಾಗುವಂತೆ ಮಾಯಾಮಾಳವ ಗೌಳರಾಗದಲ್ಲಿ ಸರಳೆವರಸೆ, ಜಂಟಿವರಸೆ, ಅಲಂಕಾರಗಳನ್ನು ರಚಿಸಿದರು. ಈ ನಿಯಮಾವಳಿಗಳನ್ನು ಅವರು ಸುಮಾರು 500 ವರುಷಗಳ ಹಿಂದೆ ಕರ್ನಾಟಕ ಸಂಗೀತದಲ್ಲಿ ಅಳವಡಿಸಿ "ಕರ್ನಾಟಕ ಸಂಗೀತ ಪಿತಾಮಹ" ಎಂದೆನಿಸಿಕೊಂಡರು.

ದಾಸಶ್ರೇಷ್ಠ ಪುರಂದರದಾಸರು ಹುಟ್ಟಿದ ದಿನವೇ ಆಗಲಿ, ಹರಿದಾಸ ದೀಕ್ಷೆ ಪಡೆದ ದಿನವೇ ಆಗಲೀ ತಿಳಿಯದು. ಅವರ ಶರೀರವನ್ನು ಅಗಲಿದ ದಿನ ಮಾತ್ರ ರಕ್ತಾಕ್ಷಿ ಸಂವತ್ಸರ, ಪುಷ್ಯ ಮಾಸದ ಅಮಾವಾಸ್ಯೆ ಕ್ರಿ.ಶ. 1564 ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ದಿನವನ್ನು ವಿಶ್ವದ ಬಹುತೇಕ ಕಡೆಗಳಲ್ಲಿ ಕರ್ನಾಟಕ ಸಂಗೀತ ಆರಾಧಕರು ಪುರಂದರರ ಪುಣ್ಯದಿನವೆಂದು ದಾಸವರೇಣ್ಯನಿಗೆ ಪುಷ್ಪಾಂಜಲಿ ಸಲ್ಲಿಸುತ್ತಾರೆ.

ಪುರಂದರರಿಗೆ ಸಲ್ಲಿಪ ಈ ಪುಷ್ಪಾಂಜಲಿಯು ಸಂಗೀತ ಕಲಿತ, ಕಲಿಯುವ, ಸಂಗೀತ ಕಲಾಭಿಮಾನಿಗಳು ಸಲ್ಲಿಪ "ಗುರುವಂದನೆ". ಈ ಗುರುವಂದನೆಯನು ಸಿಂಗಪುರ ಕನ್ನಡ ಸಂಘ ಹಾಗೂ ಸ್ಯಾಮ-ಸಂಸ್ಥೆಯ ಕಲಾವಿದರ ನೇತೃತ್ವದಲ್ಲಿ, 24 ಶನಿವಾರ ಸಂಜೆ ಡಿ.ಬಿ.ಎಸ್. ಸಭಾಂಗಣದಲ್ಲಿ "ದಾಸರು"-(ದೃಷ್ಟಿಯಲಿ ಕೃಷ್ಣ)-ನೃತ್ಯರೂಪಕ ಕಾರ್ಯಕ್ರಮ ಏರ್ಪಡಿಸಿತ್ತು.

ಕೃಷ್ಣನ ಬಾಲಲೀಲೆಗಳ ವರ್ಣನೆ, ಗೋಪಿಕೆಯರ ಒಡನಾಟ, ತಾಯಿ-ಮಗುವಿನ ಅನುಬಂಧ, ಕಾಳಿಂಗ ಮರ್ದನ ಕಣ್ಣಾರೆ ಕಂಡಂತೆ ತಮ್ಮ ರಚನೆಗಳಲಿ ವರ್ಣಿಸಿ.. ಏಕೆ, ಹೀಗೆ, ಇದೇನು, ಅದ್ಯಾಕೆ ಎಂದು ಅ ಭಗವಂತ ನಿನ್ನ ಲೀಲೆಗಳು ಇದೆಂತುಹುದೆಂದು ಪ್ರಶ್ನಿಸಿ.. ಕಡೆಯಲ್ಲಿ ಹರಿಯೇ ಈ ಭವಬಂಧನದಿಂದ ಮುಕ್ತಿ ನೀಡು ಎಂದು ಮೊರೆಯಿಟ್ಟು ಆ ವಿಠಲನಲ್ಲಿ ಲೀನಗೊಳ್ಳುವ ಪುರಂದರರ ರಚನೆಗಳ ನಾಟ್ಯ-ಗಾಯನವದಾಗಿತ್ತು.

ಕನ್ನಡ ಸಂಘದ ಕಲಾವಿದರಿಂದ ಗಾಯನ- ಸ್ಯಾಮ ಸಂಸ್ಥೆಯ ವಿದ್ಯಾರ್ಥಿನಿಯರ ನೃತ್ಯ-ರೂಪಕದಲಿ ದಾಸರ ಬುಕುಚ್ಚಿ ಮಾಡಲಾರೆ, ಅಮ್ಮಾ ಎತ್ತಿಕೊಳ್ಳಮ್ಮ, ಗುಮ್ಮನ ಕರೆಯದಿರೆ, ಜಗದೋದ್ದಾರನ, ಏನು ಮಾಡಲೋ ರಂಗ, ಏಕೆ ಬೆಳಗಾಯಿತು, ಚಿಕ್ಕವನೇ ಇವನು ಯಶೋದೆ, ಜಗನ್‌ಮೋಹನನೇ ಕೃಷ್ಣ, ಪಿಳ್ಳಂಗೋವಿಯ ಚೆಲ್ವ ಕೃಷ್ಣನ ಎಲ್ಲಿ ನೋಡಿದಿರಿ, ಆನೆಯು ಕರೆದರೆ ಆದಿಮೂಲ ಕೀರ್ತನೆಗಳು ಜನರ ಮನ ಗೆದ್ದವು.

ಗಾಯನ ಸಂಗೀತ ವಿದುಷಿ ಭಾಗ್ಯಮೂರ್ತಿ ಹಾಗೂ ತಂಡದವರಿಂದ ಕಲಾಪ್ರದರ್ಶನ ಏರ್ಪಡಿಸಲಾಗಿತ್ತು. ಇದಕ್ಕೆ ತಕ್ಕ ಸಾರಥ್ಯ ನೀಡಿದವರು ರಾಜ ಸುಬ್ರಹ್ಮಣ್ಯಂ-ಮೃದಂಗ, ತ್ಯಾಗರಾಜು-ಕೊಳಲು, ವಿದ್ಯಾ-ವಯಲಿನ್, ರಾಮ್‌ಕುಮಾರ್ ವಾಸುದೇವನ್-ವೀಣೆ. ಶ್ರೀಲಕ್ಷ್ಮಿ- ನಟುವಾಂಗ, ಪ್ರಕೃತಿ, ಸಾಧನ ರಾಜಾರಾಂ, ಭಾರತಿ ಮೂರ್ತಿ ಮತ್ತು ಅತಿರ ಅವರಿಂದ ನೃತ್ಯಗೈದರು. ಪುರಂದರ ವೇಷಧಾರಿಯಾಗಿ ವಿಶಾಲಾಕ್ಷಿ ವೈದ್ಯ, ನಿರೂಪಣೆ ಸರಯೂ ವೈದ್ಯ ಅವರಿಂದ ನಡೆಯಿತು.

ಪುರಂದರ ದಾಸರು ಹಿರಿಯ ಭಕ್ತ, ಹಾಡುಗಾರ, ಕೀರ್ತನಕಾರ. ಅವರ ಕೃತಿಗಳಲ್ಲಿ ಸಮಾಜ ವಿಮರ್ಶೆ, ಸಮಾಜ ಬೋಧನೆ, ದೇವರ ನಾಮ ಮಹಿಮೆ, ಅಂತರಂಗ ನಿವೇದನೆ, ಆಧ್ಯಾತ್ಮಿಕ ಕಲ್ಪನೆಗಳು ಕಂಡು ಬರುತ್ತದೆ. ದಾಸರ ಕೃತಿಗಳಲ್ಲಿ ಭಕ್ತನ ಸಂಪೂರ್ಣ ಸಮಪರ್ಣೆಯ ಸಾಕ್ಷಾತ್ಕಾರ ಸುಂದರ ರೂಪ ಕಂಡು ಬರುತ್ತದೆ. ಹಾಗೆಯೇ ಭಕ್ತಿ, ಶೃಂಗಾರ, ಹಾಸ್ಯ, ವಾತ್ಸಲ್ಯ, ವೈರಾಗ್ಯ, ನೀತಿಭೋಧೆ, ಜೀವನ ನಿಷ್ಠೆ ಇದೆ.

'ಕಲ್ಲು ಸಕ್ಕರೆ ಕೊಳ್ಳಿರೋ ನೀವೆಲ್ಲರೂ' ಎಂದು ಭಕ್ತಿ ಸಕ್ಕರೆಯ ಹಂಚಿ, ರಾಮನಾಮವ ನುಡಿ, ನುಡಿ, ಕಾಮಕ್ರೋಧಗಳ ಬಿಡಿ, ಬಿಡಿ-ಎಂದ್ನುಡಿದ ಪಿತಾಮಹನ ಆರಾಧನೆಯ ವೇದಿಕೆ ಹಾಡುಗಾರ ವೇದಿಕೆ. ಪ್ರತಿಯೋರ್ವ ಸಂಗೀತ ಪ್ರೇಮಿಯೂ ಹಿರಿಯ ವ್ಯಕ್ತಿಗೆ ಸಂಗೀತದ ಮೂಲಕ ಸಲ್ಲಿಸುವ ಪುರಂದರ ನಮನವೆಂಬ ಪೂಜೆ ಹೀಗೆಯೇ ಪ್ರತಿವರುಷವೂ ನಡೆಯುತ್ತಿರಲಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+