ಆಕಾಶ್ಗೆ ಕರ್ನಾಟಕ ಸಾಂಸ್ಕೃತಿಕ ಪ್ರಜ್ಞೆ ಪ್ರಶಸ್ತಿ

ಈಗ ಆಕಾಶ್ ಸಂಘದ ಸಾಂಸ್ಕೃತಿಕ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2001ರಲ್ಲಿ ಸ್ಥಾಪಿತವಾದ ಈ ಪ್ರಶಸ್ತಿಯನ್ನು ವರ್ಷಕ್ಕೊಮ್ಮೆ ಕನ್ನಡ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ಹೈಸ್ಕೂಲ್ ವಿಧ್ಯಾರ್ಥಿಗೆ ಕೊಡಲಾಗುತ್ತಿದೆ. ಇದಕ್ಕಾಗಿ ನಿಗದಿತ ವಿಷಯದ ಮೇಲೆ ಒಂದು ಪ್ರಬಂಧ ಬರೆಯಬೇಕು. 'ನಾನು ಕನ್ನಡಿಗ" ಎಂಬ ಪ್ರಶಸ್ತಿ ವಿಜೇತ ಪ್ರಬಂಧ ಬರೆದು ಆಕಾಶ್ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.
ಈ ವರ್ಷ, ಒಂದು ರಸಪ್ರಶ್ನೆ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ಮತ್ತು ಕನ್ನಡ ಕುರಿತ ಸಾಂಸ್ಕೃತಿಕ ಪ್ರಶ್ನೆಗಳಲ್ಲದೆ, ಕನ್ನಡ ಓದಿ ಕನ್ನಡದಲ್ಲೆ ಉತ್ತರಿಸಬೇಕಾಗಿತ್ತು. ಇಲ್ಲಿನ ಕನ್ನಡ ಕಲಿ ತರಗತಿಗಳಲ್ಲಿ ತರಬೇತಿ ಹೊಂದಿದ ಮಕ್ಕಳಿಗೆ ಇದು ಸುಲಭವೆ ಆಗಿತ್ತು.
ಆಕಾಶ್ ಬಗ್ಗೆ : ಕಳೆದ 17 ವರ್ಷಗಳಿಂದ, ಅಂದರೆ ಹುಟ್ಟಿದಂದಿನಿಂದ, ಆಕಾಶ್ ಕೆ.ಸಿ.ಎ.ದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸದ್ಯ, ಅದರ ಯುವ ಸಮಿತಿಯ ಅಧ್ಯಕ್ಷನೂ ಆಗಿ ಕನ್ನಡ ಸೇವೆ ಮುಂದುವರಿಸಿದ್ದಾರೆ. ಯುವ ಸದಸ್ಯರಿಗೆ ಬೇಕಾದ ಕಾರ್ಯಕ್ರಮಗಳನ್ನು ರೂಪಿಸಿ ಧನಸಂಗ್ರಹ ಕೂಡ ಮಾಡಿದ್ದಾರೆ. ಕನ್ನಡದಲ್ಲಿ ಎಮ್.ಸಿ. ಮಾಡಿದ್ದಾರೆ. ಸಂಘದ ಮ್ಯಾಗ್ಝೀನ್ 'ಸಂಗಮ'ದಲ್ಲಿ ಆಕಾಶ್ ಬರೆದಿರುವ ಅನೇಕ ಲೇಖನಗಳು ಪ್ರಕಟವಾಗಿವೆ.
ಅರ್ವೈನ್ ಜಾಗತಿಕ ಹಳ್ಳಿ ಹಬ್ಬಕ್ಕೆ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯೋಜಿಸುವಲ್ಲಿ ಸಹಾಯಹಸ್ತ ಚಾಚಿದ್ದಾರೆ ಆಕಾಶ್. ಸಂಗೀತದಲ್ಲಿ ತುಂಬ ಆಸಕ್ತಿ ಹೊಂದಿರುವ ಆಕಾಶ್, “ತಬಲ ಕಲಿಕೆ ಎಲ್ಲ ಕೆಲಸಗಳಲ್ಲಿ ಏಕಾಗ್ರತೆಯಿಂದ ತೊಡಗಿಸಿಕೊಳ್ಳಲು ನನಗೆ ತುಂಬಾ ಸಹಕಾರಿಯಾಗಿದೆ, ಅಲ್ಲದೆ ಸಮಾಧಾನ ಕೊಡುತ್ತದೆ" ಎಂದಿದ್ದಾರೆ.
ಆಕಾಶ್ಗೆ ಶುಭ ಸಂದೇಶ ಕಳುಹಿಸಿ: [email protected]
ಸಂಪರ್ಕಿಸಿ
Karnataka Samskritika Sangha : [email protected]
Kannada Kali : [email protected]
ಪೂರಕ ಓದಿಗೆ
'ಕನ್ನಡ ಕಲಿ' ಮತ್ತು 'ಸಂಗಮ'ಕ್ಕೆ ಲೇಖನಗಳ ಆಹ್ವಾನ
ಎದೆ ಉಬ್ಬಿಸಿ ಹೇಳುತ್ತೇನೆ 'ನಾನು ಕನ್ನಡಿಗ'
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications