ಕೀವಿ ಕನ್ನಡಿಗರೆಲ್ಲರ ಪ್ರೀತಿಯ 'ಅಂಕಲ್' ಇನ್ನಿಲ್ಲ

ಆಕ್ಲೆಂಡ್ ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿದ್ದ ವಾಮನ ಮೂರ್ತಿಯವರು ಜನಿಸಿದ್ದು 5ನೇ ಸೆಪ್ಟೆಂಬರ್ 1934ರಂದು ಮಂಡ್ಯದಲ್ಲಿ. ಮೈಸೂರಿನಲ್ಲಿ ಶಾಲಾಭ್ಯಾಸ, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಗಣಿತ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಕೆಲ ಕಾಲ ತಮಿಳುನಾಡು ಹಾಗೂ ಅಮೆರಿಕದಲ್ಲಿ ಹೆಚ್ಚಿನ ವ್ಯಾಸಂಗ ಹಾಗೂ ಕೆಲಸ ಮಾಡಿ ನಂತರ ಆಕ್ಲೆಂಡಿನಲ್ಲಿ 1971ರಲ್ಲಿ ಬಂದು ನೆಲೆಸಿದರು.
ನ್ಯೂಜಿಲೆಂಡಿನ ಕನ್ನಡಿಗ ಸಮುದಾಯವನ್ನು ಒಂದು ವಿಸ್ತೃತ ಕುಟುಂಬ ಎಂದು ಭಾವಿಸಿದ್ದ ಅವರು ಎಲ್ಲ ರೀತಿಯಲ್ಲೂ ಹಿರಿಯರಾಗಿದ್ದು ಎಲ್ಲರಿಗೂ ಪ್ರೀತಿಯ ಅಂಕಲ್ ಆಗಿದ್ದರು. ಭಾರತೀಯ ಸಂಸ್ಕೃತಿ ಮತ್ತು ಕನ್ನಡದ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಅವರು ಇಲ್ಲಿಯೇ ಹುಟ್ಟಿ ಬೆಳೆಯುತ್ತಿರುವ ಮಕ್ಕಳಲ್ಲಿ ಇವುಗಳಲ್ಲಿ ಆಸಕ್ತಿ ಬೆಳೆಸುವ ಸಲುವಾಗಿ ನ್ಯೂಜಿಲೆಂಡ್ ಕನ್ನಡ ಕೂಟ ಮತ್ತು ಭಜನ್ ಸತ್ಸಂಗ ಮುಂತಾದ ಸಂಘ ಸಂಸ್ಥೆಗಳ ಸ್ಥಾಪನೆಗೆ ಪ್ರೇರಣೆಯಾದರು. ಕನ್ನಡ ಕೂಟದ ಸಂಸ್ಥಾಪಕ ಅಧ್ಯಕ್ಷರಾಗಿ ಹತ್ತು ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅವರು ಅದರ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದರು.

ಅಂಕಲ್ ವಾಮನ ಮೂರ್ತಿಯರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಈ ನಾಡಿನ ಎಲ್ಲ ಜನಾಂಗದವರಿಂದ ಶೋಕ ಸಂದೇಶಗಳ ಮಹಾಪೂರವೇ ಹರಿದು ಬರುತ್ತಿದೆ. ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಲು ಇದೇ ಬುಧವಾರ 8ನೆ ತಾರೀಕಿನಂದು ಅಕ್ಲೆಂಡಿನ ಮಹಾತ್ಮಾ ಗಾಂಧೀ ಕೇಂದ್ರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
-
India vs New Zealand: ಟಿ20 ವಿಶ್ವಕಪ್ ಫೈನಲ್ ವೀಕ್ಷಣೆ ಸಂಖ್ಯೆಯಲ್ಲಿ ಹೊಸ ದಾಖಲೆ -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್ -
ಟಿ20 ವಿಶ್ವಕಪ್ ಟ್ರೋಫಿಯನ್ನು ಮನೆಗೆ ತನ್ನಿ, ನಾವು ನಿಮ್ಮ ಪರ: ಜೆಮಿಮಾ ರೋಡ್ರಿಗಸ್ ವಿಶೇಷ ಸಂದೇಶ -
ಟಿ20 ವಿಶ್ವಕಪ್ ಫೈನಲ್: ಪ್ಲೇಯಿಂಗ್ 11ನಿಂದ ಅಭಿಷೇಕ್ ಶರ್ಮಾರನ್ನು ಕೈಬಿಡಿ: ಸುನಿಲ್ ಗವಾಸ್ಕರ್ ಸಲಹೆ -
ಟಿ20 ವಿಶ್ವಕಪ್ ಫೈನಲ್ನಲ್ಲಿ ಐತಿಹಾಸಿಕ ದಾಖಲೆ ಮಾಡಿದ ಟೀಂ ಇಂಡಿಯಾ -
ಟಿ20 ವಿಶ್ವಕಪ್ 2026 ಫೈನಲ್: ಕಿವೀಸ್ ಬೌಲರ್ಗಳ ವಿರುದ್ಧ ಟೀಂ ಇಂಡಿಯಾ ಬ್ಯಾಟರ್ಗಳ ದಂಡಯಾತ್ರೆ: ಮಿಂಚಿದ ಶಿವಂ ದುಬೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ












Click it and Unblock the Notifications