ಟಿಎಸ್ ನಾಗಾಭರಣ ಅವರಿಗೆ ಧ್ವನಿ-ಶ್ರೀರಂಗ ಪ್ರಶಸ್ತಿ

ಜೂನ್ 26, 2009 ಸಂಜೆ 5 ಗಂಟೆಗೆ ದುಬೈಯ ಅಲ್ ನಾಸರ್ ಲೀಸರ್ಲ್ಯಾಂಡ್ ನ ನಶ್ವನ್ ಸಭಾಗೃಹದಲ್ಲಿ ನಡೆಯಲಿರುವ ಧ್ವನಿ ಪ್ರತಿಷ್ಠಾನದ 24ನೇ ಹುಟ್ಟುಹಬ್ಬ 'ರಂಗ ಸಿರಿ ಉತ್ಸವ-2009'ದಲ್ಲಿ ಪ್ರಶಸ್ತಿ ಪ್ರದಾನವು ನೆರವೇರಲಿದೆ. ಸಮಾರಂಭಕ್ಕೆ ಕರ್ನಾಟಕದಿಂದ ಅತಿಥಿಗಳಾಗಿ ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ರಾಜಾರಾಂ, ಡಾ. ಸಿ. ಸೋಮಶೇಕರ್ ಹಾಗೂ ಜರಗನಹಳ್ಳಿ ಶಿವಶಂಕರ ಭಾಗವಹಿಸಲಿರುವರೆಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ದಟ್ಸ್ ಕನ್ನಡಕ್ಕೆ ತಿಳಿಸಿದ್ದಾರೆ.
ನಾಗಾಭರಣ ಕುರಿತು : ಶಾಲಾ ದಿನಗಳಲ್ಲಿಯೇ ನಾಟಕದ ಗೀಳು ಹಚ್ಚಿ ಕೊಂಡಿದ್ದ ನಾಗಾಭರಣ ಅವರು ಅಧುನಿಕ ರಂಗಭೂಮಿಯ ಬ್ರಹ್ಮ ಎಂದೇ ಕರೆಯಲ್ಪಡುವ ಪ್ರಖ್ಯಾತ ನಾಟಕಗಾರ ಆದ್ಯ ರಂಗಾಚಾರ್ಯರಿಂದ ಪ್ರೇರಣೆ ಪಡೆದವರು. ಕಾಲೇಜಿನಲ್ಲಿಓದುತ್ತಿರುವಾಗ ಶ್ರೀರಂಗರ 'ಏವಂ ಇಂದ್ರಜಿತ್' ಮತ್ತು 'ಶೋಕ ಚಕ್ರ' ನಾಟಕಗಳನ್ನು ನಿರ್ದೇಶಿಸಿದ್ದರು. ಇವರು ರಂಗಕರ್ಮಿಯಾಗಿ ಪರದೆಯ ಹಿಂದೆ ಹಾಗು ಮುಂದೆ ದುಡಿದು ಅನುಭವನ್ನು ಗಳಿಸಿಕೊಂಡರು.
ನಂತರದ ದಿನಗಳಲ್ಲಿ ರಂಗ ಭೂಮಿಯ ಮೇಲೆ ಹಿರಿಯ ರಂಗ ನಾಟಕಗಾರದ ಬಿ.ವಿ.ಕಾರಂತ್, ಚಂದ್ರಶೇಖರ ಕಂಬಾರ, ಗಿರೀಶ್ ಕಾರ್ನಾಡರ ಜೊತೆಗೆ ದುಡಿಯುವ ಭಾಗ್ಯ ನಾಗಭರಣ ಅವರಿಗೆ ಒದಗಿ ಬಂದಿತ್ತು. ನಾಗಭರಣ ಅವರು ನಿರ್ದೇಶಿಸಿದ ಹಾಗೂ ನಟಿಸಿರುವ ನಾಟಕಗಳಲ್ಲಿ ಸಾಂಗ್ಯಾ ಬಾಳ್ಯಾ, ಕತ್ತಲೆ ಬೆಳಕು, ಜೋಕುಮಾರ ಸ್ವಾಮಿ, ಸತ್ತವರ ನೆರಳು, ಕೃಷ್ಣ ಪಾರಿಜಾತ, ಈಡಿಪಸ್, ಟಿಂಗರ ಬುಡ್ಡಣ್ಣ, ಮುಂದೆನ ಸಖಿ ಮುಂದೇನ, ಹಯವದನ, ನೀಗಿಕೊಂಡ ಸಂಸ, ಬಕ... ಹೀಗೆ ಪಟ್ಟಿ ಬೆಳೆಯುತ್ತಲೆ ಹೋಗುತ್ತದೆ.
ಸಿನೆಮ ಮಾದ್ಯಮದಲ್ಲಿ ಕೂಡ ತನ್ನದೇ ಆದ ಚಾಪು ಒತ್ತಿರುವ ನಾಗಭರಣ ಅವರು ಸುಮಾರು 32 ಸಿನೆಮಾಗಳನ್ನು ನಿರ್ದೇಶಿಸಿದ್ದು ಎಂಟು ರಾಷ್ಟ್ರೀಯ ಪ್ರಶಸ್ತಿ ಹಾಗೂ 14 ರಾಜ್ಯ ಪ್ರಶಸ್ತಿಗಳನ್ನು ಪಡೆದು ಕೊಂಡಿರುವರು. ಇದಲ್ಲದೆ ಹಲವಾರು ದೇಶ ವಿದೇಶಗಳ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವರು. ಇವರ ಏಳು ಚಿತ್ರಗಳು ಅಂತಾರಾಷ್ಟ್ರೀಯ ಫಿಲ್ಮ್ ಪನೋರಮಾಕ್ಕೆ ಪ್ರದರ್ಶಿತಗೊಂಡಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications