480807kannada sahitya rangaವಸಂತ ಸಾಹಿತ್ಯೋತ್ಸವಕ್ಕೆ ಭರದ ಸಿದ್ಧತೆ/nri/engagements/2009/0521-kannada-sahitya-ranga-vasantha-sahityotsava.htmlಅಮೆರಿಕದಲ್ಲಿ ಕನ್ನಡ ಭಾಷಾ ಸಾಹಿತ್ಯದ ಅಧ್ಯಯನ ನಡೆಸುವುದು, ಕನ್ನಡದಲ್ಲಿ ಬರೆಯುವವರಿಗೆ ಪ್ರೋತ್ಸಾಹ ಕೊಡುವುದು, ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸುವುದು, ಆಗಿಂದಾಗ್ಗೆ ಸಾಹಿತ್ಯ ಗೋಷ್ಠಿಗಳನ್ನು ಏರ್ಪಡಿಸುವುದು, ದೇಶದ ನಾನಾ ಭಾಗಗಳಲ್ಲಿ ಸಾಹಿತ್ಯೋತ್ಸವಗಳನ್ನು ಆಚರಿಸಿ ವಿಚಾರ ವಿನಿಮಯ ಮಾಡಿಕೊಳ್ಳುವುದು, ಕರ್ನಾಟಕದಿಂದ ಹೆಸರಾಂತ ಬರಹಗಾರರನ್ನು ಕರೆಸಿಕೊಂಡು ಉಪನ್ಯಾಸಮಾಲೆಗಳನ್ನು ಏರ್ಪಡಿಸುವುದು, ಇವೇ ಮುಂತಾದ ಚಟುವಟಿಕೆಗಳಿಂದ ಪ್ರಸಿದ್ಧವಾಗಿರುವ ಸಂಸ್ಥೆ "ಕನ್ನಡ ಸಾಹಿತ್ಯ ರಂಗ."ಅಮೆರಿಕದ ರಾಜಧಾನಿ 36813http://kannada.oneindia.com/img/2009/05/21-veena-shanteshwar-vaidehi1.jpg480807kannada sahitya rangaಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg480807kannada sahitya rangaಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg480807kannada sahitya rangaರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg480807kannada sahitya rangaಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524520vasanta sahityotsavaಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg524520vasanta sahityotsavaಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg524520vasanta sahityotsavaರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg524520vasanta sahityotsavaಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524520vasanta sahityotsavaಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ/nri/article/2009/0623-4th-vasanta-sahityotsava-maryland.htmlಕನ್ನಡ ಸಾಹಿತ್ಯ ರಂಗ, ನ್ಯೂ ಜರ್ಸಿ ನಾಲ್ಕನೇ ವಸಂತ ಸಾಹಿತ್ಯೋತ್ಸವವನ್ನು ಇದೇ ಮೇ 30 ಮತ್ತು 31ರಂದು ಮೇರಿಲ್ಯಾಂಡಿನಲ್ಲಿ ಹಮ್ಮಿಕೊಂಡಿತ್ತು. ಪ್ರತಿಬಾರಿಯಂತೆ ಇದೊಂದು ಚಿಕ್ಕ, ಚೊಕ್ಕ ಸಮಾರಂಭ. ಅದರ ಕುರಿತು ಒಂದು ವಿಸ್ತೃತ ವರದಿ.ವರದಿ : ಎಚ್ ವೈ ರಾಜಗೋಪಾಲ್, ನಳಿನಿ ಮಯ್ಯ. ಶ್ರೀವತ್ಸ ಜೋಶಿ, ಜ್ಯೋತಿ ಮಹಾದೇವ, ಫಣೀಂದ್ರ ಮಂಕಾಲೆ, ತ್ರಿವೇಣಿ ಶ್ರೀನಿವಾಸ ರಾವ್, 37523http://kannada.oneindia.com/img/2009/06/23-vasanta-sahityotsava1.jpg524521kagineleಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg524521kagineleಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg524521kagineleರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg524521kagineleಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524521kagineleಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ/nri/article/2009/0623-4th-vasanta-sahityotsava-maryland.htmlಕನ್ನಡ ಸಾಹಿತ್ಯ ರಂಗ, ನ್ಯೂ ಜರ್ಸಿ ನಾಲ್ಕನೇ ವಸಂತ ಸಾಹಿತ್ಯೋತ್ಸವವನ್ನು ಇದೇ ಮೇ 30 ಮತ್ತು 31ರಂದು ಮೇರಿಲ್ಯಾಂಡಿನಲ್ಲಿ ಹಮ್ಮಿಕೊಂಡಿತ್ತು. ಪ್ರತಿಬಾರಿಯಂತೆ ಇದೊಂದು ಚಿಕ್ಕ, ಚೊಕ್ಕ ಸಮಾರಂಭ. ಅದರ ಕುರಿತು ಒಂದು ವಿಸ್ತೃತ ವರದಿ.ವರದಿ : ಎಚ್ ವೈ ರಾಜಗೋಪಾಲ್, ನಳಿನಿ ಮಯ್ಯ. ಶ್ರೀವತ್ಸ ಜೋಶಿ, ಜ್ಯೋತಿ ಮಹಾದೇವ, ಫಣೀಂದ್ರ ಮಂಕಾಲೆ, ತ್ರಿವೇಣಿ ಶ್ರೀನಿವಾಸ ರಾವ್, 37523http://kannada.oneindia.com/img/2009/06/23-vasanta-sahityotsava1.jpgnews"> ಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ | Vasanta Sahityotsava | Kannada Sahitya Ranga | Maryland | America - ಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ - Kannada Oneindia

ಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ

Veena Shanteshwar inaugurates Sahityotsava, Vaidehi and Rajgopal look on
ಕನ್ನಡ ಸಾಹಿತ್ಯ ರಂಗ, ನ್ಯೂ ಜರ್ಸಿ ನಾಲ್ಕನೇ ವಸಂತ ಸಾಹಿತ್ಯೋತ್ಸವವನ್ನು ಇದೇ ಮೇ 30 ಮತ್ತು 31ರಂದು ಮೇರಿಲ್ಯಾಂಡಿನಲ್ಲಿ ಹಮ್ಮಿಕೊಂಡಿತ್ತು. ಪ್ರತಿಬಾರಿಯಂತೆ ಇದೊಂದು ಚಿಕ್ಕ, ಚೊಕ್ಕ ಸಮಾರಂಭ. ಅದರ ಕುರಿತು ಒಂದು ವಿಸ್ತೃತ ವರದಿ.

ವರದಿ : ಎಚ್ ವೈ ರಾಜಗೋಪಾಲ್, ನಳಿನಿ ಮಯ್ಯ. ಶ್ರೀವತ್ಸ ಜೋಶಿ, ಜ್ಯೋತಿ ಮಹಾದೇವ, ಫಣೀಂದ್ರ ಮಂಕಾಲೆ, ತ್ರಿವೇಣಿ ಶ್ರೀನಿವಾಸ ರಾವ್, ವಲ್ಲೀಶ ಶಾಸ್ತ್ರಿ ಮತ್ತು ಶಂಕರ ಹೆಗಡೆ
ಚಿತ್ರಗಳು : ಹರಿದಾಸ ಲಹರಿ

ಡಾ. ವೀಣಾ ಶಾಂತೇಶ್ವರ ಅವರ ಪ್ರಧಾನ ಭಾಷಣ

ಸಮ್ಮೇಳನದ ಮುಖ್ಯ ಅತಿಥಿ ಡಾ. ವೀಣಾ ಶಾಂತೇಶ್ವರರನ್ನು ರಂಗದ ಕಾರ್ಯಕಾರೀ ಸಮಿತಿಯ ಅಧ್ಯಕ್ಷರಾದ ಎಚ್.ವೈ. ರಾಜಗೋಪಾಲರು ಸಭೆಗೆ ಪರಿಚಯ ಮಾಡಿಕೊಟ್ಟರು. ನಮ್ಮ ವಿಶೇಷ ಅತಿಥಿಯಾದ ವೈದೇಹಿಯವರನ್ನು ಶಶಿಕಲಾ ಚಂದ್ರಶೇಖರ್ ಅವರು ಪರಿಚಯ ಮಾಡಿಕೊಟ್ಟರು. ಈ ಪರಿಚಯಗಳಾದಮೇಲೆ ವೀಣಾ ಅವರು "ಕನ್ನಡ ಕಾದಂಬರಿ ಕಳೆದ ಕಾಲು ಶತಮಾನದಲ್ಲಿ" ಎಂಬ ತಮ್ಮ ಪ್ರಧಾನ ಭಾಷಣವನ್ನು ಮಂಡಿಸಿದರು. ಸುಮಾರು ಒಂದು ಗಂಟೆಯ ಕಾಲದ ಈ ಭಾಷಣದಲ್ಲಿ ಅವರು ಕನ್ನಡದಲ್ಲಿ ಕಾದಂಬರಿ ಎಂಬ ಸಾಹಿತ್ಯ ಪ್ರಕಾರ ಹೇಗೆ ಇಂಗ್ಲಿಷ್ ಸಾಹಿತ್ಯದ ಪ್ರಭಾವದಿಂದ ಜನಿಸಿತು, ಮೊದಲಲ್ಲಿ ವಾಸ್ತವವಾದದ ಮತ್ತು ರಮ್ಯ ಕಾದಂಬರಿಗಳನ್ನೊಳಗೊಂಡ ಅದರ ಸ್ವರೂಪ ಹೇಗಿತ್ತು ಎಂಬುದನ್ನು ಸ್ಥೂಲವಾಗಿ ವಿವರಿಸಿದರು. ನವ್ಯ ಯುಗದಲ್ಲಿ ಹೇಗೆ ಅದರ ಸ್ವರೂಪ ಮತ್ತು ಆಶಯಗಳು ಸಾಮಾಜಿಕ, ರಾಜಕೀಯ, ಧಾರ್ಮಿಕ ಪ್ರಜ್ಞಾವಂತಿಕೆ, ವೈಚಾರಿಕತೆ, ಜಾಗೃತಿ, ಅವುಗಳ ಮೂಲಕ ಸಾಧಿಸಬಹುದಾದ ಪ್ರಗತಿ-ಇವುಗಳಿಂದ ದೂರ ಸರಿದು ಮನುಷ್ಯನ ಅಂತರಾಳದ ವ್ಯಾಪಾರಗಳತ್ತ ತಿರುಗಿದುದನ್ನು ವಿವರಿಸಿದರು. ಆದರೆ ಕಾಲಗತಿ, ನಮ್ಮ ಅನುಭವಗಳು ವಿಸ್ತರಿಸಿದಂತೆ, ಈ ನವ್ಯಮಾರ್ಗದಲ್ಲೂ ಅತೃಪ್ತಿ ತೋರಿ ನವ್ಯೋತ್ತರ ಮಾರ್ಗ ಬಂದಿತು. ನವ್ಯರಂತೆಯೇ ಈ ನವ್ಯೋತ್ತರ ಮಾರ್ಗದವರೂ ಅಸ್ತಿತ್ವವಾದ(existentialism)ದಿಂದ ಪ್ರಭಾವಿತರಾದರೂ ನವ್ಯೋತ್ತರ ಲೇಖಕರು ಸಮಾಜವಾದೀ ಚಿಂತನೆಯತ್ತ ಹೆಚ್ಚಿಗೆ ಒಲವು ತೋರಿದರು. ಅವರ ಕಾದಂಬರಿಗಳು ಇತರ ಅನೇಕ ವಿಚಾರಧಾರೆಗಳಿಂದ ಪ್ರಭಾವಿತವಾಗಿವೆ. ನವ್ಯರ ಆಸ್ಥೆ ವ್ಯಕ್ತಿಕೇಂದ್ರಿತವಾದುದಾದರೆ, ನವ್ಯೋತ್ತರರ ಆಸ್ಥೆ ಮತ್ತೆ ಸಾಮಾಜಿಕ, ರಾಜಕೀಯ ಕಳಕಳಿಗಳತ್ತ ಸಾಗಿದೆ. "ಮನುಷ್ಯನ ಆಂತರಿಕ ಸ್ಥಿತಿಗಿಂತ ಸುತ್ತಲಿನ ಬಾಹ್ಯಸ್ಥಿತಿಯ ವಿಶ್ಲೇಷಣೆ ಹೆಚ್ಚು ಮುಖ್ಯ ಎಂದು ಈ ಲೇಖಕರಿಗೆ ಅನಿಸತೊಡಗಿತು. ಮನುಷ್ಯ ಸಂಬಂಧಗಳು, ಬದುಕಿನ ಸಾಂಸ್ಕೃತಿಕ ಹಿನ್ನೆಲೆ, ಅಭಿವ್ಯಕ್ತಿ ಸ್ವಾತಂತ್ರ್ಯ, ವೈಚಾರಿಕತೆ ಇವು ಮುಖ್ಯ ಮೌಲ್ಯಗಳನೆಸಿದವು. ಗಾಂಧಿ, ಮಾರ್ಕ್ಸ್, ಲೋಹಿಯಾ, ಜೆ.ಪಿ., ಗೋಪಾಲಗೌಡ ಇತಾದಿ ವ್ಯಕ್ತಿಗಳ ಚಿಂತನಾಕ್ರಮಗಳು ಈ ಲೇಖಕರನ್ನು ವಿಶೇಷವಾಗಿ ಪ್ರಭಾವಿಸಿದವು" ಎಂದು ಹೇಳಿದ ವೀಣಾರವರು ಅಲ್ಲಿಂದ ಮುಂದೆ ಆ ಘಟ್ಟದ ಮತ್ತು ಅದರಿಂದ ಮುಂದುವರೆದ ಪ್ರಸ್ತುತ ಕಾಲದವರೆಗಿನ ಹಲವಾರು ಕಾದಂಬರಿಗಳ ಸಂಕ್ಷಿಪ್ತ ಪರಿಚಯವನ್ನು ಕೇಳುಗರಿಗೆ ಮಾಡಿಕೊಟ್ಟರು.

ಡಾ. ವೀಣಾ ಅವರ ಭಾಷಣದ ವಸ್ತು ಪ್ರೌಢವಾಗಿದ್ದರೂ ಸಭಿಕರಿಗೆ ಸರಳವಾಗಿ ಅರ್ಥವಾಗುವ ಶೈಲಿಯಲ್ಲಿದ್ದು ಎಲ್ಲರ ಗಮನವನ್ನೂ ಸೆರೆಹಿಡಿದಿತ್ತು. ತಮ್ಮ ಭಾಷಣದ ಕಡೆಯಲ್ಲಿ ಕನ್ನಡ ಸಾಹಿತ್ಯ ರಂಗ ಹೊರತಂದಿರುವ ಪುಸ್ತಕವನ್ನು ಸ್ಥೂಲವಾಗಿ ಪರಿಶೀಲಿಸಿ, ಅದರಲ್ಲೂ ತಾವು ತಮ್ಮ ಭಾಷಣದಲ್ಲಿ ಪರಿಚಯಿಸಿದ ಹಲವಾರು ಪುಸ್ತಕಗಳ ದೀರ್ಘ ಅವಲೋಕನ ಇರುವುದನ್ನು ಗಮನಿಸಿ, ಅದರ ಬಗ್ಗೆ ತಮ್ಮ ಮೆಚ್ಚಿಕೆ ವ್ಯಕ್ತಪಡಿಸಿದರು.

ಇಂಥ ಶ್ರೀಮಂತ ಭಾಷಣಗಳನ್ನು ಕೇವಲ ಒಂದು ಬಾರಿ ಕೇಳಿ ಮತ್ತೆ ಮತ್ತೆ ಅವನ್ನು ಮನನ ಮಾಡುವ ಸಾಧ್ಯತೆ ಇಲ್ಲದೆ ಹೋಗುವ ದುಃಸ್ಥಿತಿ ಬಾರದಂತೆ, ಕನ್ನಡ ಸಾಹಿತ್ಯ ರಂಗ ಇದುವರೆಗೆ ನಡೆದ ಎಲ್ಲ ಸಮ್ಮೇಳನಗಳ ಪ್ರಧಾನ ಭಾಷಣಗಳನ್ನೂ ಅಚ್ಚುಹಾಕಿಸಿ ಸಮ್ಮೇಳನದಲ್ಲಿ ಭಾಗವಹಿಸಿದವರಿಗೆಲ್ಲಾ ಹಂಚಿದೆ. ಆಮೇಲೂ ಸಹ, ನಮ್ಮ ಪುಸ್ತಕಗಳನ್ನು ಕೊಳ್ಳುವವರಿಗೆಲ್ಲ ಆಯಾ ವಿಷಯಕ್ಕೆ ಸಂಬಂಧಿಸಿದ ಪ್ರಧಾನ ಭಾಷಣವನ್ನು ಉಚಿತವಾಗಿ ಕೊಡುವ ಯೋಜನೆಯಿದೆ. ದಯವಿಟ್ಟು ಓದುಗರು ಈ ಸದವಕಾಶವನ್ನು ಉಪಯೋಗಿಸಿಕೊಳ್ಳಬೇಕೆಂದು ಕೋರಲಾಗಿದೆ.

ಮುಂದೆ ಓದಿ : ಪುಸ್ತಕಗಳ ಬಿಡುಗಡೆ ಮತ್ತು ಮಾರಾಟ »

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+