ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದುಬೈಯಲ್ಲಿ ಜೂ. 26ರಂದು ರಂಗ ಸಿರಿ ಉತ್ಸವ
ಉತ್ಸವದ ಅಂಗವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಲೇಖಕ ಗಿರೀಶ್ ಕಾರ್ನಾಡರ 'ಒಡಕಲು ಬಿಂಬ' ನಾಟಕ ಪ್ರಕಾಶ್ ರಾವ್ ಪಯ್ಯಾರ್ ಅವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಮುಖ್ಯ ಭೂಮಿಕೆಯಲ್ಲಿ ಗೋಪಿಕ ಮಯ್ಯ ಹಾಗೂ ಸರ್ವೊತ್ತಮ್ ಶೆಟ್ಟಿ ಅಭಿನಯಿಸಲಿದ್ದಾರೆ.
ನಾಗಿಣಿ ಭರಣ ಅವರ ಕೂಚುಪುಡಿ ನೃತ್ಯ ಮತ್ತು ರಂಗಗೀತೆಗಳ ವಿಶೇಷ ಕಾರ್ಯಕ್ರಮಗಳಿವೆ. ಪ್ರಖ್ಯಾತ ರಂಗ ನಿರ್ದೇಶಕ ಮತ್ತು ಚಲನಚಿತ್ರ ನಿರ್ದೇಶಕ ಟಿ.ಯಸ್.ನಾಗಾಭರಣ ಹಾಗೂ ಡಾ. ಬಿ.ವಿ ರಾಜಾರಾಂ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಮಾರಂಭಕ್ಕೆ ಯು.ಎ.ಇ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ರಂಗ ಸಿರಿ ಉತ್ಸವದ ಕಾರ್ಯಕಾರಿ ಸಮಿತಿ ಪ್ರಕಟಣೆಯಲ್ಲಿ ವಿನಂತಿಸಿ ಕೊಂಡಿದೆ.
Comments
Story first published: Thursday, June 25, 2009, 15:47 [IST]