ಲಂಡನ್ನಿನಲ್ಲಿ ನಮ್ಮ ಶಾಸಕರ ಸ್ವಾತಂತ್ರ್ಯ ದಿನಾಚರಣೆ

ಸಂಯೋಜಕರಾದ ಕುಂಟಿಕಾನಮಠ ಕುಮಾರ್ ಅವರು ಅತಿಥಿಗಳನ್ನು ಸ್ವಾಗತಿಸುತ್ತ ಸ್ವಾತಂತ್ರ್ಯ ದಿನಾಚರಣೆಯಂದು ಭಾರತದಲ್ಲಿ ಶಾಲಾ ಸಮವಸ್ತ್ರ ಧರಿಸಿ ಹಳ್ಳಿ ಹಳ್ಳಿಗಳಿಗೆ ಮೆರವಣಿಗೆ ಹೋಗುತ್ತಿದ್ದ ದಿನಗಳನ್ನು ನೆನಪಿಸಿಕೊಂಡರು. ಸುಮಾರು ಮುನ್ನೂರ ಐವತ್ತು ವರುಷಗಳ ಕಾಲ ತನ್ನ ಕಪಿಮುಷ್ಟಿಯಲ್ಲಿ ನಮ್ಮ ದೇಶವನ್ನು ಆಳಿದ ಬ್ರಿಟನ್ ರಾಣಿಯ ಊರಾದ ಲಂಡನ್ ನಲ್ಲಿ, ನಮ್ಮ ರಾಜ್ಯದ ವಿಧಾನಸಭಾ ಸದಸ್ಯರೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸುವುದು ನಿಜವಾಗಿಯೂ ಒಂದು ಹೆಮ್ಮೆ ಎಂದು ಹೇಳಿದರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಜಗದೀಶ್ ಶೆಟ್ಟರ್ ಅವರು ಮಾತನಾಡುತ್ತ, ಸ್ವಾತಂತ್ರ್ಯ ದಿನಾಚರಣೆಯಂದು ಲಂಡನ್ ನಲ್ಲಿ ಕಾರ್ಯಕ್ರಮ ನಡೆಯುತ್ತಿರುವುದು ಬಹಳ ಹೆಮ್ಮೆಯ ವಿಷಯ. ಅನಿವಾಸಿ ಕನ್ನಡಿಗರ ಜೊತೆಯಲ್ಲಿ ರಾಜ್ಯದ ಅಭಿವೃದ್ಧಿಗೆ ತಾವು ಸಂಪೂರ್ಣ ಬೆಂಬಲ ಕೊಡುತ್ತೇವೆ ಎಂದರು. ಕರ್ನಾಟಕ ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿಯವರು ಎಲ್ಲ ಸದಸ್ಯರನ್ನು ಪರಿಚಯಿಸಿ ಸ್ವತಂತ್ರ ಭಾರತ ಇನ್ನು ದೊಡ್ಡದಾಗಿ, ವಿಶಾಲವಾಗಿ ಬೆಳೆಯಲಿ ಎಂದು ಹರಸಿದರು. ಕರ್ನಾಟಕದ ಬೆಳವಣಿಗೆಗೆ ಅನಿವಾಸಿ ಕನ್ನಡಿಗರು ಸಹಕರಿಸಬೇಕೆಂದು ಆಶಿಸಿದರು.
ಎಲ್ಲ ಸದಸ್ಯರು ಮತ್ತು ಅತಿಥಿಗಳು ರಾಷ್ಟ್ರಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ವಿಧಾನಸಭಾ ಪರಿಷತ್ ಸದಸ್ಯರುಗಳಾದ ಶ್ರೀನಾಥ್, ಚಂದ್ರಶೇಖರ ಕಂಬಾರ, ಶಿವಯೋಗಿ ಸ್ವಾಮಿ, ನಾರಾಯಣ ಸ್ವಾಮಿ, ವೈಏ ನಾರಾಯಣ ಸ್ವಾಮಿ, ಶ್ರೀಮತಿ ಮಲ್ಲಜಮ್ಮ,ಪ್ರಕಾಶ್ ರಾಥೋಡ್, ವಿಧಾನಸಭಾ ಸದಸ್ಯರುಗಳಾದ ಎನ್ ಏ ಹ್ಯಾರಿಸ್, ರಾಮಚಂದ್ರ, ಲಕ್ಷ್ಮೀ ನಾರಾಯಣ ಮೊದಲಾದ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಚಂದವಾಗಿ ಆಯೋಜಿಸಿ ಎಲ್ಲರನ್ನು ಸತ್ಕರಿಸಿದವರು ಅನಿವಾಸಿ ಕನ್ನಡಿಗ ಸಂಪತ್ ಯಡ್ವಾಡ. ಅತಿಥಿಗಳನ್ನು ಕರೆತಂದು ಸಭಾಂಗಣವನ್ನು ವಿನ್ಯಾಸ ಗೊಳಿಸಿದವರು ಅನಿವಾಸಿ ಕನ್ನಡಿಗ ಕೋಲಾರ ರಾಮಚಂದ್ರ ಅಯ್ಯರ್. ಕಾರ್ಯಕ್ರಮ ನಿರೂಪಣೆ, ಛಾಯಾಗ್ರಹಣದಲ್ಲಿ ಸಹಕರಿಸಿದವರು ಅನಿವಾಸಿ ಕನ್ನಡಿಗ ರಂಗನಾಥ್ ಮಿರ್ಜಿ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications