ಅಮೆರಿಕೆಯ ರಾಜಧಾನಿಯಲ್ಲಿ ಶಾಸಕರ ಔತಣಕೂಟ

ಸಂಜೆಯ ರವಿ ಮುಳುಗುತ್ತಾ ಕತ್ತಲಾದರೂ ಕರ್ನಾಟಕದಿಂದ ಬಂದ ಅತಿಥಿಗಳ ಸುಳಿವಿಲ್ಲ. ಬಂದ ಕನ್ನಡಿಗರು ಹರಟೆ ಹೊಡೆಯುತ್ತಾ ಅಂತೂ ಗಡಿಯಾರ 8ರ ಗಡಿ ದಾಟಿತ್ತು. ವಿಧಾನಸಭೆ ಸ್ಪೀಕರ್ ಬರುತ್ತಿದ್ದಾರಂತೆ, ವಿಧಾನ ಪರಿಷತ್ ಸಭಾಪತಿಯವರೂ ಬರುತ್ತಿದ್ದಾರಂತೆ. ಅವರಗಳ ಹೆಸರುಗಳನ್ನು ನೆನೆಸಿಕೊಂಡು ಕಡೆಗೂ ಜಗದೀಶ್ ಶೆಟ್ಟರ್ ಅವರನ್ನು ಗುರುತಿಸಿದರು. ಉದಯ ಟಿವಿಯಲ್ಲಿ ನೋಡಿದ್ದೇನೆ ಎಂದು ಒಬ್ಬರು ಹೇಳಿದರೆ, ಬಿಜೆಪಿಯಲ್ಲಿನ ಹಿರಿಯ ರಾಜಕಾರಣಿ ಎಂದು ಮತ್ತೊಬ್ಬರು ಉಲಿದರು. ಮುಖ್ಯಮಂತ್ರಿ ಚಂದ್ರು ಅವರೂ ಬರುತ್ತಿದ್ದಾರೆ ಎಂದು ತಿಳಿದು ಅವರ ಬಗ್ಗೆ ಎಲ್ಲರೂ ತಮಗೆ ಪರಿಚಯ ಇರುವ ರೀತಿ ಮಾತನಾಡಿಕೊಂಡರು.
ಅಂತೂ ಗಡಿಯಾರ 9 ಮುಟ್ಟುವ ಹೊತ್ತಿಗೆ ಶಾಸಕರ ದಂಡೇ ಬಂತು. ಎಲ್ಲರಿಗೂ ಆಶ್ಚರ್ಯ. 30ಕ್ಕೂ ಹೆಚ್ಚು ಜನರ ತಂಡ. ಮನೆಗೆ ಬಂದ ಅತಿಥಿಗಳ ಸಂಖ್ಯೆಯೂ 70ರಷ್ಟಿತ್ತು. ಹೀಗಾಗಿ ಒಟ್ಟಾಗಿ ಅತಿಥಿಗಳ ಸಂಖ್ಯೆ 100ರ ಹತ್ತಿರವಾಗಿತ್ತು. ಈ ಭೋಜನಕೂಟ ಅನೌಪಚಾರಿಕವಾಗಿದ್ದರೂ ನಾವಿಕ ಪದಾಧಿಕಾರಿಗಳಾದ ಡಾ|| ರಾಮಪ್ಪ, ಡಾ||ಕೇಶವ ಬಾಬು, ಸುರೇಶ್ ರಾಮಚಂದ್ರ ಹಾಗೂ ವಲ್ಲೀಶ ಶಾಸ್ತ್ರಿಗಳು, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ ಹಾಗೂ ವಿಧಾನ ಸಭಾಪತಿ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಈ ಶಾಸಕರ ನಿಯೋಗವನ್ನು ವಿಶೇಷವಾಗಿ ಸ್ವಾಗತಿಸಿದರು.
ಯಾವುದೇ ಅಧಿಕೃತ ಕಾರ್ಯಕ್ರಮವಿಲ್ಲದಿದ್ದರೂ ಎಲ್ಲರ ಕ್ಷಿಪ್ರ ಸ್ವಪರಿಚಯದೊಂದಿಗೆ ಅನೌಪಚಾರಿಕ ಕಾರ್ಯಕ್ರಮದೊಂದಿಗೆ ಪ್ರಾರಂಭವಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಶಾಸಕರ ಸಂಕ್ಷಿಪ್ತ ಪರಿಚಯ ಮಾಡಿಕೊಟ್ಟರು. ನಂತರ ಮಾತನಾಡಿದ ಶೆಟ್ಟರ್ ಹೊಸ ಸಂಘ ನಾವಿಕ ಮೂಲಕ ಕನ್ನಡ ಸೇವೆಗೆ ಮುಂದಾಗಿರುವುದನ್ನು ಶ್ಲಾಘಿಸಿ ಮುಂದಿನ ವರ್ಷ ಜುಲೈನಲ್ಲಿ ಬರುವ ಸಮ್ಮೇಳನಕ್ಕೆ ಶುಭಹಾರೈಸಿ ತಮ್ಮಿಂದಾಗುವ ಎಲ್ಲ ಸಹಕಾರವನ್ನು ಕೊಡುವುದಾಗಿ ಹೇಳಿದರು.
ಅದೇ ಮಾತನ್ನು ಮುಂದುವರಿಸಿದ ಮುಖ್ಯಮಂತ್ರಿ ಚಂದ್ರು ಅವರೂ ಸಹ ಎಲ್ಲ ಸಹಾಯವನ್ನು ಮಾಡುವುದಾಗಿ ಹೇಳಿದರು. ಆಗಮಿಸಿದ್ದ ಶಾಸಕರುಗಳು ಸಹ ಮಾತನಾಡಿ ಮಾತೃಭೂಮಿಯಿಂದ ದೂರವಾಗಿದ್ದರೂ ಕನ್ನಡದ ಬಗ್ಗೆ ಇಷ್ಟೊಂದು ಅಭಿಮಾನ ಇಟ್ಟಿರುವುದನ್ನು ಆಶ್ಚರ್ಯವಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ಅತಿಥಿ ಸತ್ಕಾರದಲ್ಲಿ ಸ್ಥಳೀಯ ಕನ್ನಡಿಗರಲ್ಲಿ ಸೈಎನಿಸಿಕೊಂಡಿರುವ ಸುರೇಶ್ ದಂಪತಿಗಳು ಏರ್ಪಡಿಸಿದ್ದ ಭರ್ಜರಿ ಭೋಜನಕೋಟ ಮುಗಿಸಿ ಬೈ ಹೇಳುವ ಹೊತ್ತಿಗೆ ಗಡಿಯಾರ ರಾತ್ರಿ 11ನ್ನು ಹೊಡೆಯುತ್ತಿತ್ತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications