ವಸುಂಧರಾ ದೊರೆಸ್ವಾಮಿ ಪ್ರಬುದ್ಧ ನೃತ್ಯ ಪ್ರದರ್ಶನ

ಡಾ ವಸುಂಧರಾ ದೊರೆಸ್ವಾಮಿ ಅವರು ತಮ್ಮ ಶಿಷ್ಯರಾದ ವಿದುಷಿ ವಾಣಿ ರಮೇಶ್ ಮತ್ತು ವಿದುಷಿ ಶೀಲಾ ಕುಮಾರ್ ಅವರ ನೃತ್ಯ ಶಾಲೆಯಲ್ಲಿ ಕಾರ್ಯಾಗಾರವನ್ನು ನಡೆಸಿಕೊಡಲು ಬಂದ ಸಂದರ್ಭದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತು. ನೃತ್ಯ ಕಾರ್ಯಕ್ರಮಕ್ಕೆ ಮನಸ್ಸು ಮತ್ತು ದೇಹವನ್ನು ತಯಾರುಮಾಡಿಕೊಳ್ಳುವ ಒಂದು ನೃತ್ಯ ಬಂಧ ಮೇಳ ಪ್ರಾಪ್ತಿ ಜತಿಯಿಂದ ಕಾರ್ಯಕ್ರಮ ಆರಂಭಗೊಂಡಿತು. ಮತ್ತೆ ನಡೆದದ್ದು ವಿಘ್ನ ವಿನಾಶಕ ಗಣಪತಿಯ ಪ್ರಾರ್ಥನೆ. ಅಂಬಲದ ಆರಾಧ್ಯ ದೈವ ಸುಬ್ರಹ್ಮಣ್ಯನನ್ನು ಸ್ತುತಿಸುವ ನೃತ್ಯಬಂಧ ಷಣ್ಮುಖ ಕೌತ್ವಂ ಮೂರನೆಯದಾಗಿ ಪ್ರಸ್ತುತಗೊಂಡಿತು. ಮಯೂರ ಗತಿಯನ್ನು ಅಳವಡಿಸಿ ನವಿಲನ್ನು ಏರಿ ಬರುವ ಷಣ್ಮುಖನ ಸೊಬಗು ನೆರೆದ ಎಲ್ಲರ ಕಣ್ತುಂಬಿತು.
ಮುಂದೆ ವಿದುಷಿ ಗೀತಾ ಸೀತಾರಾಂ ಅವರು ಕನ್ನಡದಲ್ಲಿ ರಚಿಸಿದ ಪದವರ್ಣ ವೇಣುಗೋಪಾಲ ಸ್ವಾಮಿಯ ಕರೆ ತಾರೆಲೆ ಇಡೀ ಕಾರ್ಯಕ್ರಮದ ಕೇಂದ್ರ ಬಿಂದುವಾಗಿತ್ತು. ಈ ಆತ್ಮ ಪರಮಾತ್ಮನಲ್ಲಿ ಲೀನವಾಗಲು ಹಂಬಲಿಸುವುದನ್ನು ನಾಯಕ ನಾಯಕಿ ಭಾವದ ಮೂಲಕ ಡಾ ವಸುಂಧರಾ ಅವರು ಮನೋಜ್ಞವಾಗಿ ಅಭಿನಯಿಸಿದರು. ಕನ್ನಡ ಭಾಷೆಯಲ್ಲಿ ರಚಿತವಾದ ಶಾಸ್ತ್ರೀಯ ಭರತನಾಟ್ಯದ ನೃತ್ಯ ಬಂಧಗಳು ಬಹಳ ವಿರಳವಾದದ್ದರಿಂದ ನವ್ಯ ವಾಗ್ಗೇಯಕಾರರ ಇಂಥ ಪ್ರಯತ್ನ ಪ್ರಶಂಸನಾರ್ಹ.
ಮುಂದಿನ ಹಂತದಲ್ಲಿ ಗಂಗಾವತರಣವನ್ನು ಚಿತ್ರಿಸುವ ಮಹಾದೇವ ಶಿವ ಶಂಭೋ ಮತ್ತು ಮಹಿಷಾಸುರ ಮರ್ದನದ ಕಥೆಯನ್ನು ಹೇಳುವ ಜಯದುರ್ಗೆ ದುರ್ಗತಿ ಪರಿಹಾರಿಣಿ ಹೃದಯ ಸ್ಪರ್ಶಿಯಾಗಿದ್ದವು. ಉಡುಪಿ ಶ್ರೀ ಕೃಷ್ಣ ಮಠದ ಆಸ್ಥಾನ ವಿದುಷಿಯಾಗಿರುವ ಡಾ ವಸುಂಧರಾ ಅವರು ತಿಲ್ಲಾನಕ್ಕಾಗಿ ಆಯ್ದ ಕೃತಿ ಶ್ರೀಮತಿ ನಾಗಮಣಿ ಶ್ರೀನಾಥ್ ಅವರು ರಚಿಸಿದ ಶಿವಶಕ್ತಿ ರಾಗದ ನೃತ್ಯ ಬಂಧ. ಇದರಲ್ಲಿ ಭಕ್ತ ಶ್ರೇಷ್ಠ ಸಂತ ಕನಕದಾಸರಿಗೆ ಕಡೆಗೋಲು ಹಗ್ಗ ಹಿಡಿದ ಮುದ್ದು ಬಾಲ ಕೃಷ್ಣ ದರ್ಶನ ನೀಡಿದ ಸಂದರ್ಭವನ್ನು ತೋರಿಸಿ ಮಂಗಲದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಧ್ವನಿ ಮುದ್ರಿತ ಹಿನ್ನೆಲೆ ಸಂಗೀತ ಒಂದೊಮ್ಮೆ ಕೈಕೊಟ್ಟು ರಸಾಭಾಸವಾಗಿ ಆಯೋಜಕರು ತಾಳ್ಮೆಕೆಟ್ಟರೂ ಸಂಯಮದಿಂದಿದ್ದ ಡಾ ವಸುಂಧರಾ ನೆರೆದಿದ್ದ ಎಲ್ಲ ಗಣ್ಯರು ಮತ್ತು ನನ್ನಂಥ ಎಲ್ಲ ಶಿಷ್ಯವೃಂದದವರಿಗೆ ಆದರ್ಶ ಪ್ರಾಯರಾಗಿ ಇಡೀ ಕಾರ್ಯಕ್ರಮವನ್ನು ಚೆಂದಗಾಣಿಸಿಕೊಟ್ಟರು. ಮುರುಗನ್ ದೇವಸ್ಥಾನದ ಅರ್ಚಕರು ದೇವರ ಪ್ರಸಾದ ಆಶೀರ್ವಾದಪೂರ್ವಕವಾಗಿ ನೀಡಿ ದೇವಾಲಯದ ಕಾರ್ಯಕರ್ತರು ಕಲಾವಿದೆಯನ್ನು, ಸಂಘಟಕರನ್ನು ಅಭಿನಂದಿಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications