ಶಾರ್ಜಾ ಕನ್ನಡಸಂಘದ 7ನೇ ಹುಟ್ಟುಹಬ್ಬ

ವಾರ್ಷಿಕೋತ್ಸವ ನಿಮಿತ್ತ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಮಯೂರ ಪ್ರಶಸ್ತಿ ವಿತರಣೆ ಮತ್ತು ಮಕ್ಕಳ ದಿನಾಚರಣೆ ಕಲಾಪಗಳು ಆಕರ್ಷಣೆಯ ಕೇಂದ್ರಬಿಂದುವಾಗಲಿವೆ. ಸಂಸ್ಕೃತಿ, ಸಾಹಿತ್ಯ, ಸಂಗೀತ, ವಾಣಿಜ್ಯ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಕನ್ನಡಿಗ ಕನ್ನಡತಿಯರನ್ನು ಮಯೂರ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗುತ್ತದೆ. ಸಾಧನೆಯೊಂದೇ ಮಾನದಂಡವಾಗಿದ್ದು ಜಾತಿ ಮತ ಪ್ರದೇಶಗಳ ಸಂಕುಚಿತ ಧೋರಣೆಗಳು ಪ್ರಶಸ್ತಿಯ ಮಾನದಂಡವಾಗದು ಎಂದು ಕನ್ನಡಸಂಘದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರದಿಂದ ಆಯ್ದ ಗಣ್ಯರ ಸಮೂಹ ಭಾರತದಿಂದ ಶಾರ್ಜಾಗೆ ಬರಲಿದೆ. ಸಾಧಕರು ಪ್ರಶಸ್ತಿ ಸ್ವೀಕರಿಸುವುದಲ್ಲದೆ ಸಾಂಸ್ಕೃತಿಕ ಹಾಗೂ ಮನರಂಜನೆ ಕಾರ್ಯಕ್ರಮದಲ್ಲಿ ಸ್ವತಃ ಭಾಗಿಗಳಾಗಿ ಗಲ್ಫ್ ಕನ್ನಡಿಗರ ಹೃದಯ ಸೂರೆಗೊಳ್ಳಲಿದ್ದಾರೆ.
ಭಾರತದಿಂದ ಇಲ್ಲಿಗೆ ಆಗಮಿಸಲಿರುವ ಸಾಸ್ಕೃತಿಕ ರಾಯಭಾರಿಗಳ ಪಟ್ಟಿಯಲ್ಲಿ ಇರುವ ಹೆಸರುಗಳು ಇಂತಿವೆ : ಗಾಯಕರಾದ ರವೀಂದ್ರ ಪ್ರಭು, ಮತ್ತು ಅನಿತಾ ಸ್ಯಾಂಪ್ ಸನ್. ಸಂಗೀತಗಾರರಾದ ರೋಷನ್ ಬೆಲ್ಮನ್, ನವೀನ್ ಕೊಪ್ಪ ಮತ್ತು ಅರುಣ್ ಕಾರ್ಲೋ. ಡೊಳ್ಳ ನಂದಿಗುಡ್ಡೆ ಅವರಿಂದ ಹಾಸ್ಯರಸಾಯನದ ನೇತ್ರಾವತಿ ಹೊಳೆ ಹರಿಯಲಿದೆ. ಇದಲ್ಲದೆ, ಜೋಕು ಹೊಡೆಯುವವರು, ನೃತ್ಯ ಪಟುಗಳು ಮತ್ತು ಇನ್ನಿತರ ಹಾಡುಗಾರರ ದಂಡು ಕನ್ನಡ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಿವೆ.ಹೆಚ್ಚಿನ ವಿವರಗಳಿಗೆ ಕಾಲ್ ಮಾಡಿ : 050 4537298
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications