ಶಾರ್ಜಾ ಕನ್ನಡಸಂಘದ 7ನೇ ಹುಟ್ಟುಹಬ್ಬ

ವಾರ್ಷಿಕೋತ್ಸವ ನಿಮಿತ್ತ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಮಯೂರ ಪ್ರಶಸ್ತಿ ವಿತರಣೆ ಮತ್ತು ಮಕ್ಕಳ ದಿನಾಚರಣೆ ಕಲಾಪಗಳು ಆಕರ್ಷಣೆಯ ಕೇಂದ್ರಬಿಂದುವಾಗಲಿವೆ. ಸಂಸ್ಕೃತಿ, ಸಾಹಿತ್ಯ, ಸಂಗೀತ, ವಾಣಿಜ್ಯ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಕನ್ನಡಿಗ ಕನ್ನಡತಿಯರನ್ನು ಮಯೂರ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗುತ್ತದೆ. ಸಾಧನೆಯೊಂದೇ ಮಾನದಂಡವಾಗಿದ್ದು ಜಾತಿ ಮತ ಪ್ರದೇಶಗಳ ಸಂಕುಚಿತ ಧೋರಣೆಗಳು ಪ್ರಶಸ್ತಿಯ ಮಾನದಂಡವಾಗದು ಎಂದು ಕನ್ನಡಸಂಘದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರದಿಂದ ಆಯ್ದ ಗಣ್ಯರ ಸಮೂಹ ಭಾರತದಿಂದ ಶಾರ್ಜಾಗೆ ಬರಲಿದೆ. ಸಾಧಕರು ಪ್ರಶಸ್ತಿ ಸ್ವೀಕರಿಸುವುದಲ್ಲದೆ ಸಾಂಸ್ಕೃತಿಕ ಹಾಗೂ ಮನರಂಜನೆ ಕಾರ್ಯಕ್ರಮದಲ್ಲಿ ಸ್ವತಃ ಭಾಗಿಗಳಾಗಿ ಗಲ್ಫ್ ಕನ್ನಡಿಗರ ಹೃದಯ ಸೂರೆಗೊಳ್ಳಲಿದ್ದಾರೆ.
ಭಾರತದಿಂದ ಇಲ್ಲಿಗೆ ಆಗಮಿಸಲಿರುವ ಸಾಸ್ಕೃತಿಕ ರಾಯಭಾರಿಗಳ ಪಟ್ಟಿಯಲ್ಲಿ ಇರುವ ಹೆಸರುಗಳು ಇಂತಿವೆ : ಗಾಯಕರಾದ ರವೀಂದ್ರ ಪ್ರಭು, ಮತ್ತು ಅನಿತಾ ಸ್ಯಾಂಪ್ ಸನ್. ಸಂಗೀತಗಾರರಾದ ರೋಷನ್ ಬೆಲ್ಮನ್, ನವೀನ್ ಕೊಪ್ಪ ಮತ್ತು ಅರುಣ್ ಕಾರ್ಲೋ. ಡೊಳ್ಳ ನಂದಿಗುಡ್ಡೆ ಅವರಿಂದ ಹಾಸ್ಯರಸಾಯನದ ನೇತ್ರಾವತಿ ಹೊಳೆ ಹರಿಯಲಿದೆ. ಇದಲ್ಲದೆ, ಜೋಕು ಹೊಡೆಯುವವರು, ನೃತ್ಯ ಪಟುಗಳು ಮತ್ತು ಇನ್ನಿತರ ಹಾಡುಗಾರರ ದಂಡು ಕನ್ನಡ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಿವೆ.ಹೆಚ್ಚಿನ ವಿವರಗಳಿಗೆ ಕಾಲ್ ಮಾಡಿ : 050 4537298
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications