ಚೀನಿಯರ ನಾಡಿನಲ್ಲಿ ಚಿನ್ನದಂಥ ಕನ್ನಡ

ಸಂಘದ ಅಧ್ಯಕ್ಷರಾದ ಸದಾಶಿವ ಹೆಗಡೆಯವರ ಸ್ವಾಗತ ಭಾಷಣದಿಂದ ಹಿಡಿದು ರಾಷ್ಟ್ರಗೀತೆಯವರೆಗೆ ಎಲ್ಲವೂ ಅಚ್ಚು ಕಟ್ಟಾಗಿತ್ತು. ಏನಿತ್ತು, ಎನಿಲ್ಲ?ಅನ್ನುವುದೇ ತಿಳಿಯಲಾರದಷ್ಟು ಮಟ್ಟಿಗೆ ಅಲ್ಲಿ ವೈವಿದ್ಯತೆ ಮೈದಾಳಿತ್ತು.ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಭಾರತೀಯ ರಾಯಭಾರಿ ರಾಲ್ಟೆ ಮತ್ತು ಅವರ ಪತ್ನಿ, ಹಾಗೂ ಇನ್ನೋರ್ವ ಮುಖ್ಯ ಅಥಿತಿಗಳಾಗಿ ದೂರದ ಉತ್ತರ ಪ್ರದೇಶದ ವಾರಣಾಸಿಯ ಜಂಗಮವಾಡಿ ಮಠದ ಶಿವಾಚಾರ್ಯರಾದ ಶ್ರೀ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಅಷ್ಟೇ ಅಲ್ಲ, ವಿದೇಶಗಳಲ್ಲಿ ಕನ್ನಡ ಪ್ರೇಮ ಕಂಡು ಮೂಕ ವಿಸ್ಮಿತರಾದರು.
ಇದೇ ಸಂಧರ್ಭದಲ್ಲಿ ತಾಯ್ನಾಡಿನ ಅನಾಥ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ಆರಂಭಿಸಲಾದ "ಸಮುದಾಯ ಸಹಾಯ ಯೋಜನೆ" ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು ಉದ್ಘಾಟಿಸಿದರು. ಕೆ.ಎಸ್.ಎಚ್.ಕೆ ಕೇವಲ ಹೆಸರಿಗೆ ಸಂಘವಾಗದೆ ಅನಾಥರ, ಬಡವರಿಗೆ ಸಹಾಯ ನೀಡಲು ಸದಾ ಮಂಚೂಣಿಯಲ್ಲಿದ್ದು ಅನೇಕ ಕನ್ನಡ ಸಂಘಗಳಿಗೆ ಮಾದರಿಯಾಗಿದೆ.
ನಂತರ ಆರಂಭವಾಗಿದ್ದೇ ಸಾಂಸ್ಕ್ರತಿಕ ಕಾರ್ಯಕ್ರಮ. ಚಿಕ್ಕ ಮಕ್ಕಳು, ಮಕ್ಕಳ ತಾಯಂದಿರು, ಹುಡುಗರು, ಹಿರಿಯರು ಹೀಗೆ ಪ್ರತಿಯೊಬ್ಬರು ವೇದಿಕೆಯ ಮೇಲೆ ತಮ್ಮ ಪ್ರತಿಭಾ ಪ್ರದರ್ಶನ ನೀಡಿದರು. ಅದರಲ್ಲೂ ಮಕ್ಕಳ "ಧರಣಿ ಮಂಡಲ ಮಧ್ಯದೊಳಗೆ" ಸುಶ್ಮಾ ರವರ ನ್ರತ್ಯ, ಮಕ್ಕಳ ತಾಯಂದಿರ ನ್ರತ್ಯ, ಗಂಡಸರ ಜಾನಪದ ನ್ರತ್ಯ, ಭಾವಗೀತೆ ಹೀಗೆ ವೈವಿದ್ಯತೆಗಳ ಕಾರ್ಯಕ್ರಮ ಜನಮನ ಸೂರೆಗೊಂಡಿತು.
ಕಾರ್ಯಕ್ರಮದಲ್ಲಿ ಕವಿ ಕೆ ಎಸ್ ನರಸಿಂಹ ಸ್ವಾಮಿಯವರ ಬಗ್ಗೆ "ಕವಿ ಪರಿಚಯದಲ್ಲಿ" ತಿಳಿಸಲಾಯಿತು. ಇದೊಂದು ನೂತನ ಕಾರ್ಯಕ್ರಮವಾಗಿದ್ದು ಯುವ ಜನತೆಗೆ ಕನ್ನಡ ಕವಿಗಳ ಬಗೆಗೆ ಆಸಕ್ತಿ ಮೂಡಿಸುವ ಪ್ರಯತ್ನವೂ ಹೌದು. ಕೊನೆಯದಾಗಿ ಸಂಘದ ಕಾರ್ಯದರ್ಶಿಗಳಾದ ರೂಪಾ ಕಿರಣ ಅವರು ನೆರೆದ ನೂರಾರು ಕನ್ನಡಿಗರಿಗೆ ಧನ್ಯವಾದ ಸಮರ್ಪಿಸಿದರು. ಸುಮಾರು 4 ಘಂಟೆಗಳ ಕಾಲ ನಡೆದ ಕಾರ್ಯಕ್ರಮ ತಾವೆಲ್ಲರೂ ಕನ್ನಡ ನಾಡಿನಲ್ಲಿ ಇದ್ದೇವೆ ಎಂಬ ಭಾವನೆ ಮೂಡಿಸಿತು. ಕೆ ಎಸ್ ಎಚ್ ಕೆ ಕನ್ನಡ ದ ಬಗೆಗಿನ ಪ್ರೇಮ ನಿಜಕ್ಕೂ ಅಭಿನಂದನಾರ್ಹ. ವಿದೇಶದಲ್ಲಿದ್ದುಕೊಂಡು ದೇಶದ ಭಾಷೆಯನ್ನೇ ಮರೆಯುವ ಇಂದಿನ ಸಂದರ್ಭದಲ್ಲಿ ತಾಯ್ನಾಡಿನ ಭಾಷೆಯನ್ನು ಜೀವಂತವಾಗಿಡುವ ಇಂಥಹ ಕಾರ್ಯಕ್ರಮಗಳು ಅನಿವಾಸಿ ಕನವ್ನಡ ಸಮುದಾಯಕ್ಕೆ ಅನುಕರಣೀಯ.ಜೈ ಕನ್ನಡಾಂಬೆ, ಜೈ ಕರ್ನಾಟಕ ಮಾತೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications