ಸೌದಿ ಅನಿವಾಸಿ ಭಾರತೀಯರ ಸಹೋದರ ಸಂಗಮ

ಅವರು ಇಂಡಿಯಾ ಫ್ರೆಟರ್ನಿಟಿ ಫೋರಂ ತಬೂಕ್ ಘಟಕ ಇಲ್ಲಿನ ಸಹಾಬ್ ಹೋಟೆಲಿನಲ್ಲಿ ಏರ್ಪಡಿದ್ದ ಸಹೋದರ ಸಂಗಮ ಎಂಬ ಅನಿವಾಸಿ ಭಾರತೀಯರ ಸಾರ್ವಜನಿಕ ಸಭೆಯಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡುತಿದ್ದರು. ಭಾರತಕ್ಕೆ ಸ್ವಾತಂತ್ರ್ಯ ಬಂದು ಐದು ದಶಕಗಳೇ ಕಳೆದಿದ್ದರೂ ಇದುವರೆಗೆ ದೇಶ ಅಭಿವೃದ್ಧಿ ಹೊಂದಿಲ್ಲ. ಇದಕ್ಕೆ ಇಲ್ಲಿನ ಭ್ರಷ್ಟ ಆಡಳಿತ ವ್ಯವಸ್ಥೆ ಮತ್ತು ದೇಶದ ಜನರನ್ನು ಧರ್ಮದ ಆಧಾರದ ಮೇಲೆ ಒಡೆಯುತ್ತಿರುವ ಮಾನವತೆಯ ವಿರೋಧಿಗಳಾದ ಸಂಘ ಪರಿವಾರದ ತತ್ವ ಸಿದ್ಧಾಂತಗಳೇ ಕಾರಣ ಎಂದು ಹೇಳಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಭಾರತದ ಶೋಷಿತ ಮತ್ತು ದಮನಿತ ಸಮುದಾಯದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತಿದ್ದು ಸೌಹಾರ್ದ ಭಾರತವನ್ನು ಕಟ್ಟುವ ಒಂದು ಜನಾಂದೋಲನವಾಗಿ ರೂಪುಗೊಂಡಿದೆ ಎಂದು ಹೇಳಿದರು.
ಕಾರ್ಯಕ್ರಮದ ಮತ್ತೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಇಂಡಿಯಾ ಫ್ರೆಟರ್ನಿಟಿ ಫೋರಂ ಜಿದ್ದಾ ವಿಭಾಗದ ಜನಾಬ್ ಅಬ್ದುಲ್ ರಶೀದ್ ಮೌಲವಿ ಅಖಂಡ ಭಾರತವನ್ನು ಸುಮಾರು ಎಂಟುನೂರು ವರ್ಷ ಆಳಿದ ಮುಸ್ಲಿಮರು ಇಲ್ಲಿನ ಜಾತ್ಯತೀತ ಪರಂಪರೆಗೆ ಧಕ್ಕೆ ಬರದಂತೆ ಆಳ್ವಿಕೆ ನಡೆಸಿದರು. ಆದರೆ ಇಂದು ಇಲ್ಲಿ ಧರ್ಮದ ಹೆಸರಿನಲ್ಲಿ ಪರಸ್ಪರ ಕಚ್ಚಾಟ ನಡೆಸಿ ಅಧಿಕಾರ ಪಡೆಯುವಂತಹ ಕುತಂತ್ರ ರಾಜಕಾರಣವನ್ನು ಇಲ್ಲಿನ ಫ್ಯಾಸಿಸ್ಟ್ ಸಂಘಟನೆಗಳು ಮಾಡುತ್ತಿವೆ ಎಂದು ಹೇಳಿದರು.
ವೇದಿಕೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ ತಬೂಕ್ ಘಟಕದ ಕರ್ನಾಟಕ ವಿಭಾಗದ ಅಧ್ಯಕ್ಷರಾದ ಜನಾಬ್ ಅಬ್ದುಲ್ ಲತೀಫ್ ಉಪ್ಪಿನಂಗಡಿ. ಕೇರಳ ವಿಭಾಗದ ಅಧ್ಯಕ್ಷರಾದ ಜನಾಬ್ ಅಬ್ದುಲ್ ರಜ್ಹಾಕ್ ಪಾಲಕ್ಕಾಡ್ ಉಪಸ್ಥಿತರಿದ್ದರು. ಜನಾಬ್ ನೌಶಾದ್ ಮುಲ್ಕಿ ಕಿರಾಅತ್ ಪರಾಯಣ ಮಾಡಿದರೆ ಜನಾಬ್ ಶೌಕತ್ ಸ್ವಾಗತಿಸಿ ಜನಾಬ್ ಅಶ್ರಫ್ ಎಂ.ವಿ. ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಜನಾಬ್ ಅಶ್ರಫ್ ಮಂಜ್ರಾಬಾದ್ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಆರೋಗ್ಯ ಜಾಗೃತಿ ಅಭಿಯಾನದ ಅಂಗವಾಗಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿತ್ತು. ಜೊತೆಗೆ ಸಾರ್ವಜನಿಕರಿಗಾಗಿ ಕ್ರೀಡಾ ಮತ್ತು ರಸಪ್ರಶ್ನೆ ಕಾರ್ಯಕ್ರಮಗಳು ನಡೆದವು. ವಿಜೇತರಿಗೆ ಜನಾಬ್ ಕೆ.ಎಂ. ಶರೀಫ್ ಬಹುಮಾನ ವಿತರಿಸಿದರು.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications