ಸೌದಿ ಅನಿವಾಸಿ ಭಾರತೀಯರ ಸಹೋದರ ಸಂಗಮ

ಅವರು ಇಂಡಿಯಾ ಫ್ರೆಟರ್ನಿಟಿ ಫೋರಂ ತಬೂಕ್ ಘಟಕ ಇಲ್ಲಿನ ಸಹಾಬ್ ಹೋಟೆಲಿನಲ್ಲಿ ಏರ್ಪಡಿದ್ದ ಸಹೋದರ ಸಂಗಮ ಎಂಬ ಅನಿವಾಸಿ ಭಾರತೀಯರ ಸಾರ್ವಜನಿಕ ಸಭೆಯಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡುತಿದ್ದರು. ಭಾರತಕ್ಕೆ ಸ್ವಾತಂತ್ರ್ಯ ಬಂದು ಐದು ದಶಕಗಳೇ ಕಳೆದಿದ್ದರೂ ಇದುವರೆಗೆ ದೇಶ ಅಭಿವೃದ್ಧಿ ಹೊಂದಿಲ್ಲ. ಇದಕ್ಕೆ ಇಲ್ಲಿನ ಭ್ರಷ್ಟ ಆಡಳಿತ ವ್ಯವಸ್ಥೆ ಮತ್ತು ದೇಶದ ಜನರನ್ನು ಧರ್ಮದ ಆಧಾರದ ಮೇಲೆ ಒಡೆಯುತ್ತಿರುವ ಮಾನವತೆಯ ವಿರೋಧಿಗಳಾದ ಸಂಘ ಪರಿವಾರದ ತತ್ವ ಸಿದ್ಧಾಂತಗಳೇ ಕಾರಣ ಎಂದು ಹೇಳಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಭಾರತದ ಶೋಷಿತ ಮತ್ತು ದಮನಿತ ಸಮುದಾಯದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತಿದ್ದು ಸೌಹಾರ್ದ ಭಾರತವನ್ನು ಕಟ್ಟುವ ಒಂದು ಜನಾಂದೋಲನವಾಗಿ ರೂಪುಗೊಂಡಿದೆ ಎಂದು ಹೇಳಿದರು.
ಕಾರ್ಯಕ್ರಮದ ಮತ್ತೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಇಂಡಿಯಾ ಫ್ರೆಟರ್ನಿಟಿ ಫೋರಂ ಜಿದ್ದಾ ವಿಭಾಗದ ಜನಾಬ್ ಅಬ್ದುಲ್ ರಶೀದ್ ಮೌಲವಿ ಅಖಂಡ ಭಾರತವನ್ನು ಸುಮಾರು ಎಂಟುನೂರು ವರ್ಷ ಆಳಿದ ಮುಸ್ಲಿಮರು ಇಲ್ಲಿನ ಜಾತ್ಯತೀತ ಪರಂಪರೆಗೆ ಧಕ್ಕೆ ಬರದಂತೆ ಆಳ್ವಿಕೆ ನಡೆಸಿದರು. ಆದರೆ ಇಂದು ಇಲ್ಲಿ ಧರ್ಮದ ಹೆಸರಿನಲ್ಲಿ ಪರಸ್ಪರ ಕಚ್ಚಾಟ ನಡೆಸಿ ಅಧಿಕಾರ ಪಡೆಯುವಂತಹ ಕುತಂತ್ರ ರಾಜಕಾರಣವನ್ನು ಇಲ್ಲಿನ ಫ್ಯಾಸಿಸ್ಟ್ ಸಂಘಟನೆಗಳು ಮಾಡುತ್ತಿವೆ ಎಂದು ಹೇಳಿದರು.
ವೇದಿಕೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ ತಬೂಕ್ ಘಟಕದ ಕರ್ನಾಟಕ ವಿಭಾಗದ ಅಧ್ಯಕ್ಷರಾದ ಜನಾಬ್ ಅಬ್ದುಲ್ ಲತೀಫ್ ಉಪ್ಪಿನಂಗಡಿ. ಕೇರಳ ವಿಭಾಗದ ಅಧ್ಯಕ್ಷರಾದ ಜನಾಬ್ ಅಬ್ದುಲ್ ರಜ್ಹಾಕ್ ಪಾಲಕ್ಕಾಡ್ ಉಪಸ್ಥಿತರಿದ್ದರು. ಜನಾಬ್ ನೌಶಾದ್ ಮುಲ್ಕಿ ಕಿರಾಅತ್ ಪರಾಯಣ ಮಾಡಿದರೆ ಜನಾಬ್ ಶೌಕತ್ ಸ್ವಾಗತಿಸಿ ಜನಾಬ್ ಅಶ್ರಫ್ ಎಂ.ವಿ. ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಜನಾಬ್ ಅಶ್ರಫ್ ಮಂಜ್ರಾಬಾದ್ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಆರೋಗ್ಯ ಜಾಗೃತಿ ಅಭಿಯಾನದ ಅಂಗವಾಗಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿತ್ತು. ಜೊತೆಗೆ ಸಾರ್ವಜನಿಕರಿಗಾಗಿ ಕ್ರೀಡಾ ಮತ್ತು ರಸಪ್ರಶ್ನೆ ಕಾರ್ಯಕ್ರಮಗಳು ನಡೆದವು. ವಿಜೇತರಿಗೆ ಜನಾಬ್ ಕೆ.ಎಂ. ಶರೀಫ್ ಬಹುಮಾನ ವಿತರಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications