ದುಬೈ ಕನ್ನಡ ಸಮ್ಮೇಳನಕ್ಕೆ ಕಣವಿ ಅಧ್ಯಕ್ಷತೆ

ಸಮ್ಮೇಳನವು ದುಬೈ ಜಿಮ್ಸ್ ಪ್ರೈವೆಟ್ ಸ್ಕೂಲ್ ಸಭಾಗೃಹದಲ್ಲಿ ತಾ. 23.04.2010 ಶುಕ್ರವಾರ ಮುಂಜಾನೆ ಗಂಟೆ 10ರಿಂದ ಸಂಜೆ 6.30ರತನಕ ನಡೆಯಲಿದೆ. ಕನ್ನಡ ಸಾಹಿತ್ಯದ ವಿವಿಧ ನೆಲೆಗಳು ಎಂಬ ಎರಡು ಗೋಷ್ಠಿಗಳು, ಗಲ್ಫ್ ಕನ್ನಡಿಗರ ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ಹಾಗೂ ಕವಿ ಗೋಷ್ಠಿ ನಡೆಯಲಿದೆ. ಕರ್ನಾಟಕದಿಂದ ಆಗಮಿಸಲಿರುವ ಅತಿಥಿ ಕಲಾವಿದರು ಮನರಂಜನಾ ಕಾರ್ಯಕ್ರಮ ನೀಡಲಿದ್ದಾರೆ. ಸಮ್ಮೇಳನದಲ್ಲಿ ಕರ್ನಾಟಕದಿಂದ ಸಾಹಿತಿಗಳು, ರಾಜಕೀಯ ನಾಯಕರು, ಕಲಾವಿದರು, ಸರಕಾರಿ ಆಧಿಕಾರಿಗಳು ಹಾಗೂ ಇತರ ಗಣ್ಯರು ಆಗಮಿಸಲಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರವೇಶ ಮತ್ತು ಊಟೋಪಚಾರ ಉಚಿತ.
ಮುಂಬೈಯಲ್ಲಿ ಸಮಾನ ಮನಸ್ಕ ಯುವಕರು ಹೊರನಾಡಿನಲ್ಲಿ ಕನ್ನಡ ಚಟುವಟಿಕೆಗಳು ನಿಂತ ನೀರಾಗದೆ ಹರಿಯುವ ನದಿಯಾಗಬೇಕೆಂಬ ಉದ್ದೇಶದಿಂದ 1985ರಲ್ಲಿ ಅಸ್ತಿತ್ವಕ್ಕೆ ತಂದ ಧ್ವನಿ ಪ್ರತಿಷ್ಠಾನ ಈಗ ಬೆಳ್ಳಿ ಹಬ್ಬದ ಸಡಗರದಲ್ಲಿದೆ. ಧ್ವನಿ ಸಮಾಜದಲ್ಲಿ ಒಂದು ಸಂಸ್ಥೆಯಾಗಿ ಗುರುತಿಸಿಕೊಳ್ಳದೆ ಒಂದು ಸಾಮಾಜಿಕ ಪ್ರಕ್ರಿಯೆಯಾಗಬೇಕೆಂಬ ಉದ್ದೇಶದಿಂದ ಕಾರ್ಯಪ್ರವೃತ್ತವಾಗಿದ್ದು ಆ ನಿಟ್ಟಿನಲ್ಲಿ ಸತತ ಇಪ್ಪತೈದು ವರ್ಷಗಳಿಂದ ಕನ್ನಡ ಸೇವೆಯನ್ನು ಮಾಡುತ್ತಾ ಬಂದಿದೆ.
ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಅಗಮಿಸಿ ಯಶಸ್ವಿಗೊಳಿಸಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ. ಸಮ್ಮೇಳನದಲ್ಲಿ ಮನರಂಜನೆ ಕಾರ್ಯಕ್ರಮ ನೀಡಲು ಯು.ಎ.ಇ.ಯಲ್ಲಿರುವ ಎಲ್ಲಾ ಕನ್ನಡಿಗ ಸಂಘಟನೆಗಳಿಗೂ ಅವಕಾಶ ಕಲ್ಪಿಸಲಾಗುವುದು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ
ಜಯರಾಮ ಸೋಮಯಾಜಿ : 050 7952930, ಮುರುಗೇಶ್ ಗಾಜರೆ : 050 7256594, ಅನಂದ ಬೈಲೂರ್ : 050 4982189, ಸಂಪತ್ ಶೆಟ್ಟಿ : 050 9376796, ಡೊನಾಲ್ಡ್ ಕೊರಿಯ : 050 6941572, ಸರಳಾ ರಘು ಪ್ರಸಾದ್ : 050 2242033, ಮಧುಸೂದನ್ : 050 7643774, ದಾಸ್ : 050 7576238 ಅಥವಾ ಇ-ಮೈಲ್ [email protected] ಮೂಲಕ ಕೂಡಾ ಸಂಪರ್ಕಿಸಬಹುದಾಗಿದೆ.
ಭಾಗವಹಿಸಲು ಬಯಸುವ ಯು.ಎ.ಇ.ಯನ್ನು ಹೊರತುಪಡಿಸಿ ಇತರ ದೇಶದಲ್ಲಿರುವ ಅನಿವಾಸಿ ಕನ್ನಡಿಗರು : [email protected] ಸಂಪರ್ಕಿಸಬಹುದು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications