ಮುಸ್ಲಿಂರಿಗೆ ಭಯಮುಕ್ತ ಭಾರತ ಇನ್ನೂ ಕನಸು!

ಇಂಡಿಯಾ ಫ್ರೆಟರ್ನಿಟಿ ಫೋರಮ್, ದಮಾಮ್ ಘಟಕ ಹಮ್ಮಿಕೊಂಡಿದ್ದ ಮೀಸಲಾತಿ ಮತ್ತು ಮುಸ್ಲಿಮರ ಹಕ್ಕುಗಳು ಎಂಬ ವಿಚಾರಗೋಷ್ಠಿ ಮತ್ತು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತಿದ್ದ ಅವರು ಭಾರತದ ಸಂವಿಧಾನ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಮತ್ತು ಧಾರ್ಮಿಕ ಭದ್ರತೆಯ ಜೊತೆಗೆ ಇಲ್ಲಿನ ಅಲ್ಪಸಂಖ್ಯಾತರು ಮತ್ತು ಶೋಷಿತ ವರ್ಗಗಳಿಗೆ ಸೂಕ್ತ ರಕ್ಷಣೆಯ ಭರವಸೆಯನ್ನು ನೀಡಿದ್ದರೂ ಇಲ್ಲಿ ಆಡಳಿತ ನಡೆಸುತ್ತಿರುವ ಮತ್ತು ಆಡಳಿತ ನಡೆಸಿದ ಪಕ್ಷಗಳು ಅನುಸರಿಸಿದ ಫ್ಯಾಸಿಸ್ಟ್ ಮತ್ತು ಸಂವಿಧಾನ ವಿರೋಧಿ ನೀತಿಗಳಿಂದಾಗಿ ಈ ಸಮುದಾಯದ ಜನರು ಇಂದಿಗೂ ಅಭದ್ರತೆಯ ನಡುವೆ ಬದುಕಬೇಕಾಗಿದೆ ಎಂದು ಹೇಳಿದರು.
ರಂಗನಾಥ್ ಮಿಶ್ರಾ ವರದಿಯನ್ವಯ ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಕೂಡಲೇ ಜಾರಿಗೆ ತರಬೇಕೆಂದು ಒತ್ತಾಯಿಸಿದ ಅವರು ಮುಸ್ಲಿಂ ಸಮುದಾಯದಲ್ಲಿ ಈ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.
ಇಂಡಿಯಾ ಫ್ರೆಟರ್ನಿಟಿ ಫೋರಮ್ ಉತ್ತರ ವಲಯದ ಅಧ್ಯಕ್ಷರಾದ ಮೌಲಾನ ಜಫರುಲ್ಲಾ ಖಾಸಿಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇಂಡಿಯಾ ಫ್ರೆಟರ್ನಿಟಿ ಫೋರಮ್ ದಮಾಮ್ ವಿಭಾಗದ ಸಂಯೋಜಕರಾದ ಜನಾಬ್ ಮೂಸಾ ಕುಟ್ಟಿ, ಆಲ್ ಇಂಡಿಯಾ ಇಮಾಂ ಕೌನ್ಸಿಲ್ ಸದಸ್ಯರಾದ ಜನಾಬ್: ಸಾದಿಕ್ ಫೈಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಜನಾಬ್ ಅಬ್ದುಲ್ ಖಾದರ್ ಕಿರಾತ್ ಪಾರಾಯಣ ಮಾಡಿದರೆ ಜನಾಬ್ ಮಹಮ್ಮದ್ ಶರೀಫ್ ಸ್ವಾಗತ ಭಾಷಣ ಮಾಡಿದರು. ಜನಾಬ್ ಮಹಮ್ಮದ್ ಅಶ್ರಫ್ ಜುಬೈಲ್ ಕಾರ್ಯಕ್ರಮ ನಿರೂಪಿಸಿದರೆ ಜನಾಬ್ ಮಹಮ್ಮದ್ ಅಶ್ರಫ್ ಧನ್ಯವಾದ ಸಮರ್ಪಿಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications