ಮುಸ್ಲಿಂರಿಗೆ ಭಯಮುಕ್ತ ಭಾರತ ಇನ್ನೂ ಕನಸು!

ಇಂಡಿಯಾ ಫ್ರೆಟರ್ನಿಟಿ ಫೋರಮ್, ದಮಾಮ್ ಘಟಕ ಹಮ್ಮಿಕೊಂಡಿದ್ದ ಮೀಸಲಾತಿ ಮತ್ತು ಮುಸ್ಲಿಮರ ಹಕ್ಕುಗಳು ಎಂಬ ವಿಚಾರಗೋಷ್ಠಿ ಮತ್ತು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತಿದ್ದ ಅವರು ಭಾರತದ ಸಂವಿಧಾನ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಮತ್ತು ಧಾರ್ಮಿಕ ಭದ್ರತೆಯ ಜೊತೆಗೆ ಇಲ್ಲಿನ ಅಲ್ಪಸಂಖ್ಯಾತರು ಮತ್ತು ಶೋಷಿತ ವರ್ಗಗಳಿಗೆ ಸೂಕ್ತ ರಕ್ಷಣೆಯ ಭರವಸೆಯನ್ನು ನೀಡಿದ್ದರೂ ಇಲ್ಲಿ ಆಡಳಿತ ನಡೆಸುತ್ತಿರುವ ಮತ್ತು ಆಡಳಿತ ನಡೆಸಿದ ಪಕ್ಷಗಳು ಅನುಸರಿಸಿದ ಫ್ಯಾಸಿಸ್ಟ್ ಮತ್ತು ಸಂವಿಧಾನ ವಿರೋಧಿ ನೀತಿಗಳಿಂದಾಗಿ ಈ ಸಮುದಾಯದ ಜನರು ಇಂದಿಗೂ ಅಭದ್ರತೆಯ ನಡುವೆ ಬದುಕಬೇಕಾಗಿದೆ ಎಂದು ಹೇಳಿದರು.
ರಂಗನಾಥ್ ಮಿಶ್ರಾ ವರದಿಯನ್ವಯ ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಕೂಡಲೇ ಜಾರಿಗೆ ತರಬೇಕೆಂದು ಒತ್ತಾಯಿಸಿದ ಅವರು ಮುಸ್ಲಿಂ ಸಮುದಾಯದಲ್ಲಿ ಈ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.
ಇಂಡಿಯಾ ಫ್ರೆಟರ್ನಿಟಿ ಫೋರಮ್ ಉತ್ತರ ವಲಯದ ಅಧ್ಯಕ್ಷರಾದ ಮೌಲಾನ ಜಫರುಲ್ಲಾ ಖಾಸಿಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇಂಡಿಯಾ ಫ್ರೆಟರ್ನಿಟಿ ಫೋರಮ್ ದಮಾಮ್ ವಿಭಾಗದ ಸಂಯೋಜಕರಾದ ಜನಾಬ್ ಮೂಸಾ ಕುಟ್ಟಿ, ಆಲ್ ಇಂಡಿಯಾ ಇಮಾಂ ಕೌನ್ಸಿಲ್ ಸದಸ್ಯರಾದ ಜನಾಬ್: ಸಾದಿಕ್ ಫೈಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಜನಾಬ್ ಅಬ್ದುಲ್ ಖಾದರ್ ಕಿರಾತ್ ಪಾರಾಯಣ ಮಾಡಿದರೆ ಜನಾಬ್ ಮಹಮ್ಮದ್ ಶರೀಫ್ ಸ್ವಾಗತ ಭಾಷಣ ಮಾಡಿದರು. ಜನಾಬ್ ಮಹಮ್ಮದ್ ಅಶ್ರಫ್ ಜುಬೈಲ್ ಕಾರ್ಯಕ್ರಮ ನಿರೂಪಿಸಿದರೆ ಜನಾಬ್ ಮಹಮ್ಮದ್ ಅಶ್ರಫ್ ಧನ್ಯವಾದ ಸಮರ್ಪಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications