ವಿಷ್ಣು ಅಶ್ವತ್ಥ್ದ್ವಯರಿಗೆ ಸಿಡ್ನಿಯಲ್ಲಿ ಶ್ರದ್ಧಾಂಜಲಿ

ಬಾಲಾಜಿಯವರು ಸಭಿಕರನ್ನು ಬರಮಾಡಿಕೊಂಡರು; ಶ್ಯಾಮಸಿಂಗ್ ಅವರು ಹಣತೆಹಚ್ಚಿ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಮೊದಲಿಗೆ ಸಿಡ್ನಿ ಶ್ರೀನಿವಾಸ್ ಅವರು ತಮ್ಮ ಗೆಳೆಯ ಹಾಡಿನ ಮೋಡಿಗಾರ ಸಿ ಆಶ್ವತ್ಥ್ ಅವರ ಬಗ್ಗೆ ಮಾತನಾಡಿ ಸಂಗೀತ ಸಂಯೋಜಿಸುವಲ್ಲಿ, ಜನರಿಗೆ ಸಂಗೀತ ಒದಗಿಸುವಲ್ಲಿ ಅಶ್ವತ್ಥ್ ಅವರ ವೈಶಿಷ್ಟ್ಯವನ್ನು ಕೊಂಡಾಡಿದರು. ಅಲ್ಲದೆ ಅಶ್ವತ್ಥ್ ಅವರೊಡನೆ ಕಳೆತ ಕೆಲ ಅವಿಸ್ಮರಣೀಯ ಗಳಿಗೆಗಳನ್ನು ಅವರು ಮೆಲುಕು ಹಾಕಿದರು.
ರೇಣುಕಾ ಜನಾರ್ಧನ ಅವರು ಸಾಹಸಸಿಂಹ ವಿಷ್ಣುವರ್ಧನ್ ಅವರ ಸಾಧನೆಗಳ ಬಗ್ಗೆ ಮಾತನಾಡಿದರು. ನಂತರ ದಕ್ಷಿಣಾ ಮೂರ್ತಿ ಅವರು ಪೋಷಕ ಪಾತ್ರಗಳಿಗೆ ಜೀವ ತುಂಬುತ್ತಿದ್ದ ನಟ ಕೆಎಸ್ ಅಶ್ವತ್ಥ್ ಅವರ ಬಗ್ಗೆ ಮಾತನಾಡಿ, ಸ್ವಾತಂತ್ರ ಸಂಗ್ರಾಮದಲ್ಲಿ ಅವರ ಪಾಲು, ಚಲನಚಿತ್ರ ಕ್ಷೇತ್ರಕ್ಕೆ ಅವರ ನೀಡಿದ ಅಪಾರ ಕೊಡುಗೆಗಳ ಗುಣಗಾನ ಮಾಡಿದರು. ದಿವಾಕರ ಹೇರಳೆ, ಶ್ಯಾಮ್ ಸಿಂಗ್ ಮಾತನಾಡಿ ಈ ಮೂವರ ಜತೆ ಕಳೆದ ಸ್ಮರಣೀಯ ಅನುಭವಗಳನ್ನು ಸಭಿಕೆರೊಡನೆ ಹಂಚಿಕೊಂಡರು.
ಹಿಂದೆ ಈ ಸಂಸ್ಥೆ ಸಿಡ್ನಿಯಲ್ಲಿ ವಿಷ್ಣುವರ್ಧನ್ ಅಭಿನಯಿಸಿರುವ "ಹಬ್ಬ" ಮತ್ತು ಕೆಎಸ್ ಅಶ್ವತ್ಥ್ ಅಭಿನಯಿಸಿರುವ "ಶಬ್ಧವೇಧಿ" ಚಿತ್ರಗಳನ್ನು ಪ್ರದರ್ಶಿಸಿತ್ತು. ಅಲ್ಲದೆ ಹೋದ ಮಾರ್ಚ್ ತಿಂಗಳಲ್ಲಿ ಸಿ ಅಶ್ವತ್ಥ್ ಮತ್ತು ತಂಡದವರು ಇದೇ ಸಂಸ್ಥೆಯ ಆಶ್ರಯದಲ್ಲಿ ಸಿಡ್ನಿ ಮತ್ತು ಮೆಲ್ಬೊರ್ನ್ ಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದರು. ಅದಿನ್ನೂ ಜನರ ನೆನಪಿನಲ್ಲಿ ಅಚ್ಚಳಿಯದೇ ನಿಂತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications