ಸೌದಿ : ಭಾರತದ ಮುಸ್ಲಿಮರಿಗೆ ಅಸ್ತಿತ್ವದ ಸಮಸ್ಯೆ

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜನಾಬ್: ಕೆ.ಎಂ. ಶರೀಫ್ ಭಾರತದಲ್ಲಿ ಮುಸ್ಲಿಮರು ಮಾತ್ರವಲ್ಲ ಹಿಂದುಳಿದ ಜನರು ಮತ್ತು ಶೋಷಿತ ವರ್ಗದ ಜನತೆಯೂ ಸಹ ಬಡತನ, ನಿರುದ್ಯೋಗ, ಮತ್ತು ಅಸಮಾನತೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಜೊತೆಗೆ ಮುಸ್ಲಿಮರು ತಮ್ಮ ಅಸ್ತಿತ್ವದ ಕುರಿತ ಸಮಸ್ಯೆಯನ್ನು ಹಲವು ಪ್ರದೇಶಗಳಲ್ಲಿ ಎದುರಿಸಬೇಕಾಗಿ ಬರುತ್ತಿರುವುದು ಈ ದೇಶ ಆಳಿದ ಬೇಜವಾಬ್ಧಾರಿ ಕಪಟ ರಾಜಕೀಯ ಪಕ್ಷಗಳ ಆಡಳಿತದ ಕಾರಣದಿಂದಲೇ ಹೊರತು ಇನ್ನಾವುದೇ ಕಾರಣದಿಂದಲ್ಲ ಎಂದು ಹೇಳಿದರು.
ಭಾರತದ ಸಂವಿಧಾನ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದ್ದು ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಿದ ಈ ಸಂವಿಧಾನದಲ್ಲಿ ದೇಶದ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಶೋಷಿತ ಜನರಿಗೆ ಧಾರ್ಮಿಕ, ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ನೀಡಲಾಗಿದ್ದರೂ ಇದುವರೆಗೂ ಅದನ್ನು ಸಮರ್ಪಕವಾಗಿ ಜಾರಿಗೆ ತಂದಿಲ್ಲ. ಜೊತೆಗೆ ದೇಶದಲ್ಲಿ ದೇಶ ವಿರೋಧಿ ಮನೋಭಾವನೆಯಿಂದ ಕಾರ್ಯಾಚರಿಸುತ್ತಿರುವ ಕೆಲ ಫ್ಯಾಸಿಸ್ಟ್ ಸಂಘಟನೆಗಳು ಭಾರತದ ಸೌಹಾರ್ದ ಪರಂಪರೆಗೆ ಧಕ್ಕೆ ತರಲು ಯತ್ನಿಸುತಿದ್ದು ಇಂತಹ ಸಂಘಟನೆಗಳಿಂದಾಗಿ ದೇಶದಲ್ಲಿ ಶೋಷಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ದಿಗೆ ತೊಡಕುಂಟಾಗಿದೆ ಮಾತ್ರವಲ್ಲ ಇದು ಇವು ದೇಶದ ಅಭಿವೃದ್ಧಿಗೂ ಮಾರಕವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐ.ಎಫ್.ಎಫ್. ಕರ್ನಾಟಕ ವಿಭಾಗದ ಅಧ್ಯಕ್ಷರಾದ ಜನಾಬ್ ಅಬ್ದುಲ್ ಮಜೀದ್ ವಿಟ್ಲ ಅನಿವಾಸಿ ಭಾರತೀಯರ ಎಲ್ಲಾ ಸಮಸ್ಯೆಗಳಿಗೆ ಐ.ಎಫ್.ಎಫ್. ಜಾತಿ, ಮತ,ಧರ್ಮ ಮತ್ತು ಭಾಷೆಗಳ ಭೇದವಿಲ್ಲದೆ ಸ್ಪಂದಿಸುತ್ತಿದೆ. ಕಳೆದ ವರ್ಷ ಭಾರತೀಯ ರಾಯಭಾರಿ ಕಛೇರಿಯ ಸಹಕಾರದೊಂದಿಗೆ ಸುಮಾರು ಆರುನೂರು ಅನಿವಾಸಿ ಭಾರತೀಯರ ಸಮಸ್ಯೆಗಳಿಗೆ ಸ್ಪಂದಿಸಿದ್ದು ಜೊತೆಗೆ ಹಜ್ ಯಾತ್ರೆಗೆ ಬರುವ ಯಾತ್ರಾರ್ಥಿಗಳಿಗೆ ಸೇವೆಯನ್ನೂ ನೀಡುತ್ತಿದೆ ಎಂದು ಹೇಳಿದರು.
ಐ.ಎಫ್.ಎಫ್. ಸೌದಿ ಅರೇಬಿಯಾ ಸಂಯೋಜಕರಾದ ಜನಾಬ್: ಅಬ್ದುಲ್ ಬಷೀರ್ ಸಾಹೇಬ್ ಕಾರ್ಯಕ್ರಮವನ್ನು ಉದ್ಘಾಟಿಸಿದರೆ ಜನಾಬ್ ಜಾಫರ್ ಫೈಜಿ ಕಿರಾತ್ ವಾಚಿಸಿದರು. ಜನಾಬ್ ಹಾರಿಸ್ ಅಹಮದ್ ಸುರತ್ಕಲ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಜನಾಬ್ ಹಾರಿಸ್ ಕಲ್ಲಡ್ಕ ಮತ್ತು ದಾವೂದ್ ಸೂರಿಂಜೆ ಸುವ್ಯಾಶ್ರವಾಗಿ ಹಾಡಿದ ಮೌಲಾನಾ ಅಲ್ಲಮಾ ಇಕ್ಬಾಲ್ ರಚಿಸಿದ ಸಾರೆ ಜಹಾನ್ ಸೆ ಅಚ್ಛಾ ಹಿಂದುಸ್ಥಾನ್ ಹಮಾರಾ ಗೀತೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಜನಾಬ್ ಹಾರಿಸ್ ಅಂಗರಗುಂಡಿ ಕಾರ್ಯಕ್ರಮವನ್ನು ನಿರೂಪಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications