ಅಕ್ಲೆಂಡಿನಲ್ಲಿ ವರ್ಣರಂಜಿತ ಗಣತಂತ್ರ ದಿನಾಚರಣೆ

ದಿನಾಂಕ 24ನೇ ಜನವರಿ 2010ರಂದು ಭಾನುವಾರ ಅಕ್ಲೆಂಡ್ ನಗರದ ಮನುಕಾವ್ ಟೆಲ್ಸ್ಟ್ರಾಕ್ಲಿಯರ್ ಪೆಸಿಫಿಕ್ ಸೆಂಟರ್ ನಲ್ಲಿ ಭಾರತೀಯ ಸಮಾಜ ಚಾರಿಟಬಲ್ ಟ್ರಸ್ಟ್ ನವರು ನಡೆಸಿದ ಭಾರತದ 60ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡ ನ್ಯೂಜಿಲೆಂಡ್ ಕನ್ನಡ ಕೂಟ ಸೇರಿದಂತೆ ಸುಮಾರು 25 ಸಂಘ ಸಂಸ್ಥೆಗಳು ಮೊದಲಿಗೆ ನಡೆದ ಆಕರ್ಷಕ ಪಥಸಂಚಲನದಲ್ಲಿ ಭಾಗವಹಿಸಿದವು. ಭಾಷೆ ಬೇರೆ, ಭಾವ ಒಂದೇ. ನಾವು ಭಾರತೀಯರು ಎಂಬುದು ಎಲ್ಲರ ಮನದಲ್ಲಿದ್ದು ನಡವಳಿಕೆಯಲ್ಲಿ ಪ್ರತಿಬಿಂಬಿಸಿತು.
ಮನುಕಾವ್ ನಗರ ಸಭೆಯ ಮಾಜಿ ಮೇಯರ್ ಸರ್ ಬ್ಯಾರಿ ಕರ್ಟೀಸ್ ಅವರು ಧ್ವಜಾರೋಹಣ ನಡೆಸಿದ ನಂತರ ನಡೆದ ಪಥಸಂಚಲನ, ಧ್ವಜ ವಂದನೆ ಎಲ್ಲದರಲ್ಲೂ ಉತ್ಸಾಹದಿಂದ ಭಾಗವಹಿಸಿದವರಿಗೆ ಭಾರತದ ವಿವಿಧ ಭಾಗಗಳ ಸಾಂಸ್ಕೃತಿಕ ವೈವಿಧ್ಯತೆಯ ಪರಿಚಯವೂ ಆಯಿತು. ಕನ್ನಡತಿ ಸುಶ್ಮಿತಾ ದೇಶಪಾಂಡೆ ಅವರ ಶಿವ ತಾಂಡವ ನೃತ್ಯಪ್ರದರ್ಶನ ಅತ್ಯಾಕರ್ಷಕವಾಗಿತ್ತು. ಭಾರತದ ವಿವಿಧ ಭಾಷೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರನ್ನೂ ರಂಜಿಸಿದ್ದಲ್ಲದೇ ಸ್ಥಳೀಯರ ಮೆಚ್ಚುಗೆಯನ್ನೂ ಗಳಿಸಿದವು.
ಈ ಸಂದರ್ಭದಲ್ಲಿ ನ್ಯೂಜಿಲೆಂಡ್ ನಿವಾಸಿಗಳಾಗಿದ್ದು ವಿಜ್ಞಾನ, ಸಮಾಜ ಸೇವೆ, ವೈದ್ಯಕೀಯ ನೆರವು ಮುಂತಾದ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಐವರು ಭಾರತೀಯರನ್ನು ಗೌರವಿಸಲಾಯಿತು. ಸುಮಾರು ನಲವತ್ತು ವರ್ಷಗಳ ಕಾಲ ಆಕ್ಲೆಂಡ್ ವಿಶ್ವವಿದ್ಯಾನಿಲಯದ ಗಣಿತ ಶಾಸ್ತ್ರ ಪ್ರಾಧ್ಯಾಪಕರಾಗಿ, ಕನ್ನಡ ಸಮುದಾಯದ ಹಿರಿಯ ಚೇತನ ಎಂದು ಗುರುತಿಸಲಾದ ದಿ. ಪ್ರಾಚಾರ್ಯ ಎಂ.ಕೆ. ವಾಮನ ಮೂರ್ತಿಯವರನ್ನು ಮರಣೋತ್ತರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀಮತಿ ಜೂನ್ ಹಿಲ್ಲರಿಯವರಿಂದ [ದಿ. ಸರ್ ಎಡ್ಮಂಡ್ ಹಿಲ್ಲರಿ ಅವರ ಪತ್ನಿ] ಈ ಪ್ರಶಸ್ತಿಯನ್ನು ಶ್ರೀಮತಿ ರತ್ನಾ ವಾಮನಮೂರ್ತಿಯವರು ಸ್ವೀಕರಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications