ಅಕ್ಲೆಂಡಿನಲ್ಲಿ ವರ್ಣರಂಜಿತ ಗಣತಂತ್ರ ದಿನಾಚರಣೆ

ದಿನಾಂಕ 24ನೇ ಜನವರಿ 2010ರಂದು ಭಾನುವಾರ ಅಕ್ಲೆಂಡ್ ನಗರದ ಮನುಕಾವ್ ಟೆಲ್ಸ್ಟ್ರಾಕ್ಲಿಯರ್ ಪೆಸಿಫಿಕ್ ಸೆಂಟರ್ ನಲ್ಲಿ ಭಾರತೀಯ ಸಮಾಜ ಚಾರಿಟಬಲ್ ಟ್ರಸ್ಟ್ ನವರು ನಡೆಸಿದ ಭಾರತದ 60ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡ ನ್ಯೂಜಿಲೆಂಡ್ ಕನ್ನಡ ಕೂಟ ಸೇರಿದಂತೆ ಸುಮಾರು 25 ಸಂಘ ಸಂಸ್ಥೆಗಳು ಮೊದಲಿಗೆ ನಡೆದ ಆಕರ್ಷಕ ಪಥಸಂಚಲನದಲ್ಲಿ ಭಾಗವಹಿಸಿದವು. ಭಾಷೆ ಬೇರೆ, ಭಾವ ಒಂದೇ. ನಾವು ಭಾರತೀಯರು ಎಂಬುದು ಎಲ್ಲರ ಮನದಲ್ಲಿದ್ದು ನಡವಳಿಕೆಯಲ್ಲಿ ಪ್ರತಿಬಿಂಬಿಸಿತು.
ಮನುಕಾವ್ ನಗರ ಸಭೆಯ ಮಾಜಿ ಮೇಯರ್ ಸರ್ ಬ್ಯಾರಿ ಕರ್ಟೀಸ್ ಅವರು ಧ್ವಜಾರೋಹಣ ನಡೆಸಿದ ನಂತರ ನಡೆದ ಪಥಸಂಚಲನ, ಧ್ವಜ ವಂದನೆ ಎಲ್ಲದರಲ್ಲೂ ಉತ್ಸಾಹದಿಂದ ಭಾಗವಹಿಸಿದವರಿಗೆ ಭಾರತದ ವಿವಿಧ ಭಾಗಗಳ ಸಾಂಸ್ಕೃತಿಕ ವೈವಿಧ್ಯತೆಯ ಪರಿಚಯವೂ ಆಯಿತು. ಕನ್ನಡತಿ ಸುಶ್ಮಿತಾ ದೇಶಪಾಂಡೆ ಅವರ ಶಿವ ತಾಂಡವ ನೃತ್ಯಪ್ರದರ್ಶನ ಅತ್ಯಾಕರ್ಷಕವಾಗಿತ್ತು. ಭಾರತದ ವಿವಿಧ ಭಾಷೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರನ್ನೂ ರಂಜಿಸಿದ್ದಲ್ಲದೇ ಸ್ಥಳೀಯರ ಮೆಚ್ಚುಗೆಯನ್ನೂ ಗಳಿಸಿದವು.
ಈ ಸಂದರ್ಭದಲ್ಲಿ ನ್ಯೂಜಿಲೆಂಡ್ ನಿವಾಸಿಗಳಾಗಿದ್ದು ವಿಜ್ಞಾನ, ಸಮಾಜ ಸೇವೆ, ವೈದ್ಯಕೀಯ ನೆರವು ಮುಂತಾದ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಐವರು ಭಾರತೀಯರನ್ನು ಗೌರವಿಸಲಾಯಿತು. ಸುಮಾರು ನಲವತ್ತು ವರ್ಷಗಳ ಕಾಲ ಆಕ್ಲೆಂಡ್ ವಿಶ್ವವಿದ್ಯಾನಿಲಯದ ಗಣಿತ ಶಾಸ್ತ್ರ ಪ್ರಾಧ್ಯಾಪಕರಾಗಿ, ಕನ್ನಡ ಸಮುದಾಯದ ಹಿರಿಯ ಚೇತನ ಎಂದು ಗುರುತಿಸಲಾದ ದಿ. ಪ್ರಾಚಾರ್ಯ ಎಂ.ಕೆ. ವಾಮನ ಮೂರ್ತಿಯವರನ್ನು ಮರಣೋತ್ತರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀಮತಿ ಜೂನ್ ಹಿಲ್ಲರಿಯವರಿಂದ [ದಿ. ಸರ್ ಎಡ್ಮಂಡ್ ಹಿಲ್ಲರಿ ಅವರ ಪತ್ನಿ] ಈ ಪ್ರಶಸ್ತಿಯನ್ನು ಶ್ರೀಮತಿ ರತ್ನಾ ವಾಮನಮೂರ್ತಿಯವರು ಸ್ವೀಕರಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications