ಯುಎಇ ಸಮ್ಮೇಳನ ಲಾಂಛನ ಬಿಡುಗಡೆ

ಲಾಂಛನ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅವರು ವಹಿಸಿದ್ದರು. ಧ್ವನಿ ಪ್ರತಿಷ್ಠಾನದ ಬೆಳ್ಳಿ ಹಬ್ಬದ ಆಚರಣೆಯ ಅಂಗವಾಗಿ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮಾರಂಭದಲ್ಲಿ ಸ್ವಾಗತ ಭಾಷಣ ಮಾಡಿದ ಪ್ರತಿಷ್ಠಾನ ಬಳಗದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರು ಧ್ವನಿ ನಡೆದು ಬಂದ ದಾರಿಯ ಸಿಂಹಾವಲೋಕನ ಮಾಡಿದರು. ಸಮ್ಮೇಳನ ಯಶಸ್ವಿಗೊಳಿಸಲು ಮಧ್ಯಪ್ರಾಚ್ಯದಲ್ಲಿರುವ ಸಕಲ ಕನ್ನಡ ಸಂಘ ಸಂಸ್ಥೆಗಳ ಸಹಕಾರವನ್ನು ಅವರು ಕೋರಿದರು.
ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷ ನೋವೆಲ್ ಅಲ್ಮೇಡಾ, ದುಬೈ ಕನ್ನಡ ಕೂಟದ ಅಧ್ಯಕ್ಷ ಅರುಣ್, ಗಲ್ಫ್ ಕನ್ನಡಿಗದ ಬಿ.ಜಿ. ಮೋಹನದಾಸ್, ಬಿಲ್ಲವ ಬಳಗದ ಮೋಹನ್ ಅತ್ತಾವರ, ಮಂಗಳೂರು ಕೊಂಕಣ್ಸ್ ಅಧ್ಯಕ್ಷ ಸಂತೋಷ್, ಉದ್ಯಮಿ ಜೇಮ್ಸ್ ಮೆಂಡೊನ್ಸಾ, ಸಾಹಿಲ್ ಅಂತರ್ಜಾಲದ ಅರ್ಶದ್ ಹುಸೇನ್ ಮುಂತಾದವರು ಉಪಸ್ಥಿತರಿದ್ದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಸುಂದರವಾದ ಲಾಂಛನ ರಚಿಸಿದ ಕಲಾವಿದ ಬಿ.ಕೆ.ಗಣೇಶ್ ರೈ ಅವರಿಗೆ ಹೂ ಗುಚ್ಚ ನೀಡಿ ಗೌರವಿಸಲಾಯಿತು.ಧ್ವನಿ ಪ್ರತಿಷ್ಠಾನದ ಕೋಶಾಧಿಕಾರಿ ಆನಂದ ಬೈಲೂರ್, ಸಲಹೆಗಾರ ಜಯರಾಂ ಸೋಮಯಾಜಿ ಹಾಗೂ ಕಾರ್ಯದರ್ಶಿ ಮಧುಸೂಧನ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೇದಿತ ಅರವಿಂದರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಮಾರಂಭ ಅರ್ಥರ್ ಪಿರೇರಾ ವಂದಿಸುವುದರೊಂದಿಗೆ ಮುಕ್ತಾಯವಾಯಿತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications