ಮಲ್ಲಿಗೆ ಕನ್ನಡ ಸಂಘದ ಯುಗಾದಿ ಸಂಭ್ರಮ

ಅಶ್ವಿನಿ ಕುಲಕರ್ಣಿ ತೆರೆಯ ಮೇಲಿನ ಸೂತ್ರಧಾರನಿಗೆ ಸುಶ್ರಾವ್ಯವಾಗಿ ವಂದಿಸಿದ ನಂತರ, ಏಳೆಂಟು ಮಕ್ಕಳು ಸಂಕಟ ನಾಶನ ಗಣಪತಿಯನ್ನು ಭರತನಾಟ್ಯದ ಮೂಲಕ ಅರ್ಚಿಸಿದರು. ನಂತರ ಇಲ್ಲಿಯ ಅರಳುಮಲ್ಲಿಗೆ ಕನ್ನಡ ಶಾಲೆಯ ಹಿರಿಯ ಮಕ್ಕಳು, ಹಳ್ಳಿ ಮಕ್ಕಳ ವೇಷದಲ್ಲಿ "ಕೋಳೀಕೆ ರಂಗ" ಹಾಡ್ದಾಗ, ಸೇರ್ದೋರೆಲ್ಲಾ ಬಾಯ್ಬಿಟ್ಕೊಂಡ್ಬೆರ್ಗಾಗ್ಬಿಟ್ರು. ಅತ್ಯಂತ ಕ್ಲಿಷ್ಟಕರ ಹಾಡನ್ನು ಇಲ್ಲಿನ ಹುಡುಗರ ನಾಲಿಗೆಯಲ್ಲಿ ಸುಲಲಿತವಾಗಿ ನುಡಿಸಿದವರು ಜಯಶ್ರೀ ಮೂರ್ತಿ. ಆದರೆ, ಹಾಡಿನ ಹಿಮ್ಮೇಳಕ್ಕೆ ಹಾಕಿದ್ದ ಸಂಗೀತ ಹುಡುಗರ ಶ್ರಮಕ್ಕೆ ಸಹಕಾರಿಯಾಗಿರಲಿಲ್ಲ.
"ಅಪಾರ ಕೀರ್ತಿ ಗಳಿಸಿ ಮೆರೆವ ಕರ್ನಾಟಕ"ವನ್ನು ನೀಹಾರಿಕಾ ಮತ್ತು ಪೃಥ್ವಿ ವರ್ಣಿಸಿದ ಮೇಲೆ "ಹಿಮಗಿರಿ ತನಯೆ ಹೇಮಲತೆ"ಗೆ ನಾಟ್ಯಾರ್ಚನೆ. ನಾಲ್ಕು ಪುಟ್ಟ ಪೋರಿಯರಿಗೆ "ಯಾಕ್ ಹಿಂಗಾಡ್ತಾರೋ ಈ ಹುಡುಗರು" ಎಂದು ಛೇಡಿಸುವುದನ್ನು ಕಲಿಸಿದ್ದು ಸುಶ್ಮಾ ರಂಗಸ್ವಾಮಿ. ಬಾಲ ದತ್ತ ಕನ್ನಡ ಶಾಲೆಯ ಮಕ್ಕಳಿಂದ ಪುಣ್ಯಕೋಟಿಯ ನೃತ್ಯನಾಟಕ ಮತ್ತು "ಸರ ಸರ" ಹಾಡು. ಮಕ್ಕಳಿಗೆ ಉತ್ತಮವಾಗಿ ತರಬೇತಿ ಕೊಟ್ಟದ್ದು ಚೈತ್ರಾ ಶ್ರೀಧರ್.
ಸಂಧ್ಯಾ ಹೊನ್ನವಳ್ಳಿ ಅವರು ಪುಟ್ಟ ಮಕ್ಕಳಿಗೆ ಕಲಿಸಿದ ಘಲ್ಲು ಘಲ್ಲೆನುತಾ ಕೋಲಾಟ ಬಹಳ ಚಂದ. ರೂಪ ಉಪಾಧ್ಯ ಮತ್ತು ಶುಭ ಶ್ರೀವತ್ಸರ ಮುಂದಾಳತ್ವದಲ್ಲಿ ಮೂಡಿ ಬಂದ "ಮುಂಜಾನೆದ್ದು ಕುಂಬಾರಣ್ಣ" ಮೋಹಕ ನೃತ್ಯ. 10-12 ವರ್ಷದ ಮಕ್ಕಳ ಉಡಿಗೆ-ತೊಡಿಗೆ ಲಯಬದ್ಧ ಜಾನಪದ ನೃತ್ಯಕ್ಕೆ ಪೂರಕವಾಗಿತ್ತು. ನಂತರ ರೇಖಾ ಮಂಜುನಾಥ್, ರಾಜಶ್ರೀ ಜೋಶಿ ಅವರು ಸಣ್ಣ ಮಕ್ಕಳಿಗೆ ಕಲಿಸಿದ ಛಮಕ್-ಛಮಕ್ ಚಿತ್ರಗೀತೆಗಳ ಡ್ಯಾನ್ಸ್ ಮೆಡ್ಲೇ. ಅರಳು ಮಲ್ಲಿಗೆ ಕನ್ನಡ ಶಾಲೆಯ ಮಕ್ಕಳು ಅಭಿನಯಿಸಿದ, ಪ್ರಕೃತಿ ಮತ್ತು ಸಮತೋಲನವನ್ನು ವಿವರಿಸಿದ ಮೂಕನೃತ್ಯ ವಿಭಿನ್ನ ಹಾಗೂ ವಿಶಿಷ್ಟ; ಪರಿಕಲ್ಪನೆ ಮತ್ತು ನಿರ್ದೇಶನ ರೂಪಾ ಶ್ರೀನಿವಾಸ್.
"ಹಚ್ಚೇವು ಕನ್ನಡದ ದೀಪ" ಎಂದು ಕನ್ನಡಾಂಬೆಗೆ ಧೂಪಾರತಿ. ತಲೆ ಮೇಲೆ,ಕೈಯಲ್ಲಿ ದೀಪಗಳನ್ನು ಹೊತ್ತು ಸಮತೋಲನ ಕಾಪಾಡಿಕೊಂಡು ಮಾಡಿದ ಕ್ಲಿಷ್ಟಕರ ಭಂಗಿಗಳ ನೃತ್ಯ ಎಲ್ಲರ ಪ್ರಶಂಸೆ ಗಳಿಸಿತು. ಎಲ್ಲಾ ಭರತನಾಟ್ಯ ಕಾರ್ಯಕ್ರಮಗಳಿಗೂ ತರಬೇತಿ ಕೊಟ್ಟವರು ಭರತನಾಟ್ಯ ಗುರು ಮಮತಾ ದೀಪಕ್. ಗತಿಸಿದ ವಿಷ್ಣುವರ್ಧನ್ ಸ್ಮರಣೆಗಾಗಿ ನಾಗರಹಾವು ಚಿತ್ರದ "ಕನ್ನಡ ನಾಡಿನ ವೀರ ರಮಣಿಯ" ಪ್ರಸ್ತುತಿ ಅರಳು ಮಲ್ಲಿಗೆ ಕನ್ನಡ ಶಾಲೆಯ ಮಕ್ಕಳಿಂದ. ಕಲಿಸಿದ್ದು ಜಯಶ್ರೀ ಮೂರ್ತಿ.
ಸ್ನೇಹಾ ಮತ್ತು ಸಂಗೀತ ಕುರದ ಸುಶ್ರಾವ್ಯವಾಗಿ ರಾಮನಾಮ ಸಂಕೀರ್ತನೆ ಹಾಡಿದರು. ಪುಟಾಣಿ ಸುಹೃತ ಭೂಷಣ್ "ಕಂಡೇ ಕಂಡೇ ಗೋವಿಂದನಾ" ಎಂದು ಮೋಹಕವಾಗಿ ನರ್ತಿಸಿದಳು. ನಂತರ ಹುಮ್ಮಸ್ಸಿನ ಮಹಿಳಾಮಣಿಯರ ನರ್ತನದಿಂದ ಮದರಂಗಿಯಲ್ಲಿ ಮನಸಿನ ರಂಗು ಮೂಡಿತು. ಉಡಿಗೆ ತೊಡಿಗೆಯಲ್ಲಿ ಇನ್ನೂ ಸೊಗಸಿದ್ದರೆ ಮತ್ತಷ್ಟು ರಂಗೇರುತ್ತಿತ್ತು. ನೃತ್ಯ ಕಲಿಸಿದವರು ಸುಲತಾ ತಲಗೇರಿ.
ಸಮಯ ಆಗಲೇ ರಾತ್ರಿ 7:30. ಮಕ್ಕಳಿಗೆಲ್ಲಾ ಹಸಿವು. ಅವರಿಗೆ ಪಿಜ್ಜಾ ಮತ್ತು ದೊಡ್ಡವರಿಗೆ ಪಕೋಡದ ವ್ಯವಸ್ಥೆ ಆಗಿತ್ತು. ನಿರೀಕ್ಷೆಗಿಂತ ಹೆಚ್ಚಿನ ಜನ ಆಗಮಿಸಿದ್ದರಿಂದ ಕೊರತೆಯೂ ಆಯಿತು. ವಿರಾಮದ ನಂತರ ಕೃಷ್ಣಮೂರ್ತಿಯವರು ಕಳೆದ 2 ವರ್ಷಗಳ ಚಟುವಟಿಕೆಯನ್ನು ಛಾಯಾಚಿತ್ರಗಳ ಮೂಲಕ ತೋರಿಸಿದರು. ನಂತರ ಹೊರಹೋಗುತ್ತಿರುವ ಸಮಿತಿಯ ಅಧ್ಯಕ್ಷ ಮಧು ಶಾಸ್ತ್ರಿ ಅವರ ಸುದೀರ್ಘ ಭಾಷಣ. ಹೊಸ ಸಮಿತಿ ಅಧ್ಯಕ್ಷೆ ರಾಜಶ್ರೀ ರಮೇಶ್ ಮತ್ತು ಇತರ ಸದಸ್ಯರ ಪರಿಚಯ. ಭಾಷಣ ಸ್ವಲ್ಪ ಚಿಕ್ಕದಿದ್ದರೆ ಚೆನ್ನಿತ್ತು. ಪ್ರಾಯೋಜಕರಿಗೆ, ಸ್ವಯಂಸೇವಕರಿಗೆ, ಸದಸ್ಯರಿಗೆ, ಪ್ರೇಕ್ಷಕರಿಗೆ ವಂದನಾರ್ಪಣೆ ಸಲ್ಲಿಸಿದ ಬಳಿಕ ಮತ್ತೆ ಕಾರ್ಯಕ್ರಮಗಳು ಆರಂಭ.
ಮಲ್ಲಿಕಾ ಮೋರೊ ನಿರ್ದೇಶನದಲ್ಲಿ "ಜಲ್ಲೆ ಕಬ್ಬು" ಹಾಡಿಗೆ ಮೂಡಿ ಬಂದದ್ದು ಮನಸೂರೆಗೊಂಡ ಜಾನಪದ ನೃತ್ಯ. ನರ್ತಿಸಿದವರ ಹೊಂದಾಣಿಕೆ, ಹಾವ ಭಾವ, ವಸ್ತ್ರವಿನ್ಯಾಸ, ಕೇಶಾಲಂಕಾರ ಎಲ್ಲವೂ ಸೊಗಸೋ ಸೊಗಸು. ಹಾಡಿನ ಭಾವ ಮೊಗದಲ್ಲಿತ್ತು, ನೃತ್ಯದ ಸಂತಸ ನಡೆಯಲ್ಲಿತ್ತು. ನಂತರ 5 ವರ್ಷದ ಹಿಂದೆ ಯಶಸ್ವಿಯಾಗಿ ಪ್ರದರ್ಶಿಸಿದ "ಬೀಗರ ಕಲಹ" ನಾಟಕದ ಮುಂದುವರೆದ ಭಾಗ. 5 ವರ್ಷದ ಹಿಂದೆ ಪುಷ್ಪಾ-ಶ್ರೀನಿ ಮದುವೆಯಲ್ಲಿ ನಡೆದ ಬೀಗರ ಕಲಹ, ಈಗ ಪುಷ್ಪನ ಸೀಮಂತದಲ್ಲೂ ಮುಂದುವರೆಯಿತು. ಉಮಾ ಸರ್ವೇಶ್ ರಚನೆ-ನಿರ್ದೇಶನದ ಚಿಕ್ಕ ಚೊಕ್ಕ ನಾಟಕ ಪ್ರೇಕ್ಷಕರನ್ನು ನಗಿಸುವಲ್ಲಿ ಸಫಲವಾಯಿತು.
ನಂತರ ಸ್ವಾದಿಷ್ಟ ಭೋಜನದಲ್ಲಿ ಕಾರ್ಯಕ್ರಮ ಮುಕ್ತಾಯ. ಇಲ್ಲಿಯ ಕನ್ನಡಿಗರ ನಡುವೆ ಈಗ ನಡೆಯುತ್ತಿರುವುದು ಕಾರ್ಯಕ್ರಮದ ಬಗ್ಗೆ ಮಾತು-ಕತೆ, ವಿಮರ್ಶೆ, ಮುಂದಿನ ಕಾರ್ಯಕ್ರಮದ ನಿರೀಕ್ಷೆ. ತಮ್ಮೆಲ್ಲಾ ಸ್ವಂತ ಕೆಲಸಗಳ ನಡುವೆ, ಪ್ರತಿಫಲ ನಿರೀಕ್ಷಿಸದೆ ಈ ಸುಂದರ ಸಮೃದ್ಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ ಕಾರ್ಯಕಾರೀ ಸಮಿತಿಗೆ ಅಭಿನಂದನೆಗಳು. ಕಾರ್ಯಕ್ರಮದ ಚಿತ್ರಪಟಗಳಿಗಾಗಿ ಭೇಟಿ ಕೊಡಿ ಮಲ್ಲಿಗೆ ಕನ್ನಡ ಸಂಘ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications