ತೆಂಗಿನಕಾಯಿಗೆ ಸಬ್ಸ್ಟಿಟ್ಯೂಟ್ ಜುಟ್ಟು!

ಮಿನ್ನೆಸೊಟಾದಲ್ಲಿರುವ ಶ್ರೀಲಕ್ಷ್ಮೀ ಹೊನ್ನವಳ್ಳಿ ಅದೆಲ್ಲ ಸಮಸ್ಯೆಯೇ ಬೇಡ ಅಂತ ಭಾರತದಿಂದ ಬೆಳ್ಳಿಯ ಹೂಗಳು, ಬೆಳ್ಳಿಯ ವೀಳ್ಯದೆಲೆ (ಬೆಳ್ಳಿಯ ತೆಂಗಿನಕಾಯಿ ಸಹ?) ತಂದಿಟ್ಟುಕೊಂಡಿದ್ದಾರಂತೆ. ಒಂದೆಡೆ ಭಕ್ತಿಯೂ ಆಯ್ತು, ಮತ್ತೊಂದೆಡೆ ರೀಯೂಸ್/ರೀಸೈಕ್ಲಿಂಗ್ ಮಂತ್ರದ ಪರಿಪಾಲನೆಯೂ ಆದಂತಾಯ್ತು! ಟೆಕ್ಸಸ್ನಲ್ಲಿರುವ ಮೀನಾ ಭಾರದ್ವಾಜ್ ಅವರಂತೂ ತೆಂಗಿನಕಾಯಿ ಬಳಸೋದೇ ಇಲ್ಲ. ಸತ್ಯನಾರಾಯಣ ವ್ರತಕಥೆಯ ವೇಳೆ ಒಂದೊಂದು ಅಧ್ಯಾಯದ ನಂತರ ಒಂದೊಂದು ತೆಂಗಿನಕಾಯಿ ಒಡೆದು ಕೊಲೆಸ್ಟ್ರಾಲ್ ಹೆಚ್ಚಿಸಿಕೊಳ್ಳುವುದೇಕೆ ಅಂತ ತೆಂಗಿನಕಾಯಿ ಬದಲಿಗೆ ಕಿತ್ತಳೆ, ಸೇಬು ಹಣ್ಣಿನ ನೈವೇದ್ಯ ಮಾಡ್ತಾರಂತೆ.
ಇವೆಲ್ಲಕ್ಕಿಂತಲೂ ಹೃದಯಸ್ಪರ್ಶಿಯಾದ ಒಂದು ಸಬ್ಸ್ಟಿಟ್ಯೂಟ್ ಸಂಸ್ಕೃತಿ ಅನುಭವ ಬರೆದಿದ್ದಾರೆ ಗುರುಭೀಮ ಜೋಯಿಸ್. ನಾಲ್ಕು ವರ್ಷಗಳ ಹಿಂದೆ ನನ್ನ ತಾಯಿ ತೀರಿಕೊಂಡರು. ಉತ್ತರಕ್ರಿಯೆ ವಿಧಿಗಳನ್ನೆಲ್ಲ ಪೂರೈಸಿ ನಾನು ಟಾಂಜಾನಿಯಾಕ್ಕೆ ಹಿಂದಿರುಗುವಾಗ ನಮ್ಮಪ್ಪ ಹೇಳಿದ್ದರು- ಪ್ರತಿ ತಿಂಗಳು ಮಾಸಿಕ ಮಾಡುವುದು ಹೇಗೆ ಅಂತ ಚಿಂತೆ ಮಾಡಬೇಡ. ಅಲ್ಲೇ ಆಕಳಿಗೆ ಸ್ವಲ್ಪ ಬೆಲ್ಲ ಮತ್ತು ಅಕ್ಕಿ ತಿನ್ನಲು ಮುಂದಿಟ್ಟು ನೀನು ಪ್ರದಕ್ಷಿಣೆ ಮಾಡು. ಅಷ್ಟು ಸಾಕು. ನನಗೂ ಸ್ವಲ್ಪ ನೆಮ್ಮದಿ ಅನಿಸ್ತು. ಆದರೆ ಅದು ಎಷ್ಟು ಕಷ್ಟಕರ ಎಂದು ಇಲ್ಲಿಗೆ ಬಂದಮೇಲೆ ತಿಳಿಯಿತು. ಆಕಳನ್ನು ಹುಡುಕುವುದೇ ಒಂದು ಯಜ್ಞ. ಒಂದು ಹುಲ್ಲುಗಾವಲಿದೆ, ಅಲ್ಲಿ ದನಗಳು ಮೇಯುವದನ್ನು ನೋಡಿದ್ದೇವೆ, ಆದರೆ ನೀನು ಅಕ್ಕಿಬೆಲ್ಲ ಇಟ್ಟು ಪ್ರದಕ್ಷಿಣೆ ಮಾಡೋದನ್ನು ಸ್ಥಳಿಯರು ನೋಡಿದರೆ ನೀನು ಪೋಲಿಸ್ ಸ್ಟೇಷನ್ ಪ್ರದಕ್ಷಿಣೆ ಮಾಡಬೇಕಾಗಿ ಬರುತ್ತೆ ಜಾಗ್ರತೆ! ಅಂತ ಹೆದರಿಸಿದರು ನನ್ನ ಕೆಲ ಸ್ನೇಹಿತರು/ಸಹೋದ್ಯೋಗಿಗಳು. ಬೇರೇನೂ ಮಾಡಲಾಗದೆ ಅಲ್ಲೇ ಕೃಷ್ಣನಗುಡಿ ಹುಂಡಿಯಲ್ಲಿ ಕಾಣಿಕೆ ಸಲ್ಲಿಸಿ ಸುಮ್ಮನಾದೆ.
ನನಗೆ ಶರಪಂಜರ ಚಿತ್ರದ ಹಾಡಿನ ಸಾಲುಗಳು ನೆನಪಾಗ್ತಿವೆ. ಮುತ್ತುಗದ ಹೂವು ಮಲ್ಲಿಗೆಯೇ, ಅತ್ತಿಯ ಹಣ್ಣು ಅಂಜೂರವೇ... ಬೆಟ್ಟದ ಕಾಳ್ಗಿಚ್ಚು ದೀಪವೇ ಬಿರುಗಾಳಿ ಕೆಂಧೂಳಿ ಧೂಪವೇ... ಮೋಹದಾ ವೇಷ ಭಕ್ತಿಯೇ ಸವಿಯಾದುದೆಲ್ಲ ನೈವೇದ್ಯವೇ... ಅಂದಹಾಗೆ, ಕನ್ನಡನಾಡಿನಲ್ಲಿದ್ದುಕೊಂಡು ನೀವು ಸಹ ಯಾವ ಥರದಲ್ಲಾದರೂ ಈರೀತಿಯ ಸಬ್ಸ್ಟಿಟ್ಯೂಟ್ ಸಂಸ್ಕೃತಿಯನ್ನು ಅನುಸರಿಸುತ್ತೀರಾ? ಸ್ವಾರಸ್ಯಕರವಿದ್ದರೆ ಬರೆದು ತಿಳಿಸುತ್ತೀರಾ?
(ಸ್ನೇಹಸೇತು : ವಿಜಯ ಕರ್ನಾಟಕ (ಪರಾಗಸ್ಪರ್ಶ ಅಂಕಣ))
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications