ಅಮೆರಿಕದ ನಾಗಭೂಷಣ ಮೂಲ್ಕಿಗೆ ಮೂರು ಪ್ರಶಸ್ತಿ

ಗ್ರಾಮಾಂತರ ಬುದ್ಧಿಜೀವಿಗಳ ಬಳಗ ಮತ್ತು ಸಾಹಿತ್ಯ ಹಾಗು ಸಂಸ್ಕೃತಿ ಸಂಸ್ಥೆ, ಮೈಸೂರು, ಕರ್ನಾಟಕ, ಬೆಳ್ಳಿ ಹಬ್ಬದ ಅಂಗವಾಗಿ ನಡೆಸಲಾದ ರಾಜ್ಯ ಮಟ್ಟದ ಕವನ ಸಂಕಲನ ಸ್ಪರ್ಧೆಯಲ್ಲಿ ಡಾ. ನಾಗಭೂಷಣ ಮೂಲ್ಕಿ ಅವರ ಮೊದಲ ಕವನ ಸಂಕಲನ "ಭಾವ ತರಂಗ"ಕ್ಕೆ ರಾಜ್ಯ ಪ್ರಶಸ್ತಿಯಾದ "ಡಾ. ಎಚ್ಕೆ ಕಾವ್ಯ ಪ್ರಶಸ್ತಿ" ನೀಡಲಾಗಿದೆ.
ಇವೇ ಸಂಸ್ಥೆ ಬೆಳ್ಳಿ ಹಬ್ಬದ ಪ್ರಯುಕ್ತ ವರ ಕವಿ ದ.ರಾ. ಬೇಂದ್ರೆ ಅವರ ನೆನಪಿನಲ್ಲಿ ನಡೆಸಲಾಗುವ 200ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ರಾಜ್ಯ ಮಟ್ಟದ ಕವನ ಸ್ಪರ್ಧೆಯಲ್ಲಿ ಡಾ. ನಾಗಭೂಷಣ ಮೂಲ್ಕಿ ಅವರ ಕವನಕ್ಕೆ ರಾಜ್ಯ ಪ್ರಶಸ್ತಿಯಾದ "ವರ ಕವಿ ದ.ರಾ. ಬೇಂದ್ರೆ ಕಾವ್ಯ ಪುರಸ್ಕಾರ" ನೀಡಲಾಗಿದೆ.
ಕನ್ನಡ ಸಾಹಿತ್ಯ ಮತ್ತು ಸಂಸೃತಿ ಸಮ್ಮೇಳನ ಕರ್ನಾಟಕ ಜಾಗೃತಿ ವೇದಿಕೆ , ಹೈದರಾಬಾದ್ ಕರ್ನಾಟಕ ಸಾಂಸ್ಕೃತಿಕ ಕಲಾ ಕೇಂದ್ರ ಮತ್ತು ನಾಗರಿಕ ವೇದಿಕೆ, ಬೆಂಗಳೂರು, ಕರ್ನಾಟಕ, ಜಂಟಿಯಾಗಿ ನಡೆಸುವ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಕನ್ನಡ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಾಗಿ ಕೊಡಲಾಗುವ "ಶ್ರೀ ರಾಘವೇಂದ್ರ ಸದ್ಭಾವನ ಪ್ರಶಸ್ತಿ "ಯನ್ನು ಡಾ. ನಾಗಭೂಷಣ ಮೂಲ್ಕಿ ಅವರಿಗೆ ನೀಡಲಾಗಿದೆ.
"ಭಾವ ತರಂಗ" ಕವನ ಸಂಕಲನವು ಅಮೇರಿಕದ ಚಿಕಾಗೊದಲ್ಲಿ 2008ನೇ ಇಸವಿಯಲ್ಲಿ ನಡೆದ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಬಿಡುಗಡೆಯಾಗಿತ್ತು. ಅಲ್ಲದೆ, ಜೂನ್, 2009ನೇ ಇಸವಿಯಲ್ಲಿ ಬೆಂಗಳೂರಿನಲ್ಲಿ ಮತ್ತು ಮೈಸೂರಿನಲ್ಲಿ ಬಿಡುಗಡೆಯಾಗಿತ್ತು. "ಉಷಾರಾಗ ದೀಪಿಕಾ" ಮತ್ತು "ಉಷಾ ಬಸವ ವೈಭವ" ಸ್ವರಚಿತ ಕವನಗಳ ಧ್ವನಿಮುದ್ರಿಕೆಯ ನಿರ್ದೇಶನ ಮತ್ತು ಪ್ರಕಾಶನ 2009ರಲ್ಲಿ ಮಾಡಿರುತ್ತಾರೆ.
ಡಾ. ನಾಗಭೂಷಣ ಮೂಲ್ಕಿ ಅವರಿಗೆ ದಟ್ಸ್ ಕನ್ನಡದ ಹಾರ್ದಿಕ ಶುಭಾಶಯಗಳು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications