ಹೀಗಿದ್ದರು ನಮ್ಮ ಎಚ್ಚೆನ್ ಮೇಷ್ಟ್ರು

ನಲವತ್ತರ ದಶಕದ ಕೊನೆಯ ಭಾಗದಲ್ಲಿ, ನಮ್ಮ ತಂದೆ ಕೆ.ಟಿ. ಚಂದ್ರಶೇಖರನ್ ನ್ಯಾಷನ್ ಹೈಸ್ಕೂಲು, ಕಾಲೇಜುಗಳ ವಿದ್ಯಾರ್ಥಿಯಾಗಿದ್ದರು. ಅವರಿಗೆ ಎಚ್ಚೆನ್ ಭೌತಶಾಸ್ತ್ರದ ಅಧ್ಯಾಪಕರಾಗಿದ್ದರು. ಎಚ್ಚೆನ್ ವಾಸ ನ್ಯಾಷನಲ್ ಕಾಲೇಜಿನ ಹಾಸ್ಟೆಲಿನಲ್ಲಿಯೇ. ವಿದ್ಯಾರ್ಥಿಗಳಿಗೂ ಎಚ್ಚೆನ್ ರಿಗೂ ಮೊದಲಿನಿಂದಲೂ ಅಚ್ಚುಮೆಚ್ಚು. ಅವರ ರೂಮು ಯಾವಾಗಲೂ ವಿದ್ಯಾರ್ಥಿಗಳಿಂದ ತುಂಬಿರುತ್ತಿತ್ತು. ಎಷ್ಟೋ ಸಲ ಮಧ್ಯಾಹ್ನದ ವೇಳೆ ಮಲಗಿಕೊಳ್ಳಲು ಅವರ ರೂಮಿಗೆ ಹೋಗುತ್ತಿದ್ದೆ ಅಂತ ನಮ್ಮ ತಂದೆ ಹೇಳುತ್ತಾರೆ. ಹೈಸ್ಕೂಲಿನಲ್ಲಿ ಓದುತ್ತಿದ್ದ ಸಮಯದಲ್ಲೇ ನಮ್ಮ ತಂದೆ ಕನ್ನಡ ಕಾದಂಬರಿಗಳನ್ನು ಓದುತ್ತಿದ್ದರು. ತಮ್ಮ ಸಂಗ್ರಹದಲ್ಲಿದ್ದ ಅನಕೃ ಪುಸ್ತಕಗಳನ್ನು ಎಚ್ಚೆನ್ ಮತ್ತಿತರ ಅಧ್ಯಾಪಕರುಗಳಿಗೆ ಓದಲು ಕೊಡುತ್ತಿದ್ದರಂತೆ. ಎಚ್ಚೆನ್ ರ ಪುಸ್ತಕಗಳನ್ನೂ ವಿದ್ಯಾರ್ಥಿಗಳು ಕೊಂಡೊಯ್ಯುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದ ಹಾಗೆ ಒಂದು ಘಟನೆ:
ನ್ಯಾಷನಲ್ ಕಾಲೇಜಾದ ಮೇಲೆ ನಮ್ಮ ತಂದೆ ಕೆಲಸಕ್ಕೆ ಸೇರಿದರು. ಕೆಲವು ವರ್ಷಗಳ ನಂತರ ಒಮ್ಮೆ ಕೆಂಪೇಗೌಡ ಸರ್ಕಲ್ಲಿನಲ್ಲಿದ್ದ ಹಳೆ ಪುಸ್ತಕಗಳ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗ ಸ್ವಾಮಿ ವಿವೇಕಾನಂದರ ಪುಸ್ತಕವೊಂದು ಅವರ ಕಣ್ಣಿಗೆ ಬಿತ್ತು. ಅದನ್ನು ತಿರುವಿಹಾಕುವಾಗ ಮೊದಲ ಪುಟದಲ್ಲಿ ಎಚ್ ನರಸಿಂಹಯ್ಯನವರ ಹಸ್ತಾಕ್ಷರ ಕಾಣಿಸಿತು. ಅರೆರೆ ಇವರ ಪುಸ್ತಕ ಇಲ್ಯಾಕೆ ಬಂತು ಅಂದುಕೊಂಡು ಅದನ್ನು ಕೊಂಡುಕೊಂಡು ನ್ಯಾಷನಲ್ ಕಾಲೇಜಿನ ಎಚ್ಚೆನ್ ರ ರೂಮಿಗೆ ಹೋದರಂತೆ. ಆ ಪುಸ್ತಕವನ್ನು ಕೈಯಲ್ಲಿ ಹಿಡಿದಿದ್ದ ನಮ್ಮ ತಂದೆಯನ್ನು ನೋಡುತ್ತಲೇ ಎಚ್ಚೆನ್ ಸರ್ರನೆ ಸಿಡುಕಿ “ನೀನಾ ಈ ಪುಸ್ತಕವನ್ನು ತಗೊಂಡು ಹೋಗಿದ್ದು? ಇಷ್ಟುದಿನ ಆದಮೇಲೆ ಕೊಡ್ತಾ ಇದೀಯಾ. ಜವಾಬ್ದಾರಿ ಇದೆಯಾ ನಿಂಗೆ..." ಅಂತ ಬಯ್ದರಂತೆ! ಆಗ ನಮ್ಮ ತಂದೆಯೂ ಕೋಪಗೊಂಡು “ಸಾರ್ ನಿಮ್ಮ ಪುಸ್ತಕ ತಗೊಂಡು ಹೋಗಿದ್ದು ನಾನಲ್ಲ. ನಾನು ಇಲ್ಲಿಗೆ ಬಂದೇ ಎಷ್ಟೋ ವರ್ಷಗಳಾಗಿ ಹೋಗಿದೆ" ಅಂತ ಹೇಳಿ ಕೆಂಪೇಗೌಡ ರಸ್ತೆಯಲ್ಲಿ ಹಳೆ ಪುಸ್ತಕಗಳ ಅಂಗಡಿಯಲ್ಲಿ ಆ ಪುಸ್ತಕ ಸಿಕ್ಕ ವಿಚಾರವನ್ನು ತಿಳಿಸಿದಾಗ ಎಚ್ಚೆನ್ ನೊಂದುಕೊಂಡು “ಕೋಪಾ ಮಾಡಿಕೊಳ್ಳಬೇಡಪ್ಪಾ ಚಂದ್ರಶೇಕರಾ... ಈ ಪುಸ್ತಕ ನನಗೆ ತುಂಬಾ ಬೇಕಾಗಿತ್ತು. ಎಷ್ಟೋ ಸಮಯ ಹುಡುಕಿದ್ದೆ. ಸಿಕ್ಕಿರಲಿಲ್ಲ. ಈಗ ನಿನ್ನ ಕೈಯಲ್ಲಿ ನೋಡಿ ನೀನೇ ಅದನ್ನು ಕೊಂಡೊಯ್ದವನು ಅಂದುಕೊಂಡೆ." ಎಂದು ಪುಸ್ತಕದ ಹಣ 2 ರುಪಾಯಿ ಕೊಡಲು ಮುಂದಾದಾಗ, ನಮ್ಮ ತಂದೆ “ಸಾರ್ ನನಗೆ ದುಡ್ಡು ಬೇಡಾ. ನಿಮ್ಮ ಪುಸ್ತಕ ನಿಮಗೆ ತಲುಪಿಸಿದ್ದೇನೆ ಅಷ್ಟೆ" ಅಂದರಂತೆ.
ಎಚ್ಚೆನ್ ಬದುಕಿರುವವರೆಗೂ ನ್ಯಾಷನಲ್ ಕಾಲೇಜಿನ ಹಾಸ್ಟೆಲ್ಲಿನಲ್ಲಿಯೇ ಇದ್ದರು. ಅವರು ಮಲಗುತ್ತಿದ್ದುದು ಒಂದು ಚಾಪೆಯ ಮೇಲೆ. ವಯಸ್ಸಾದ ಮೇಲೆ ಎದ್ದು ಕೂರುವುದಕ್ಕೆ ಅನುಕೂಲವಾಗಲಿ ಅಂತ ಅವರ ಶಿಷ್ಯರೊಬ್ಬರು ಮಂಚವೊಂದನ್ನು ಅವರ ರೂಮಿನಲ್ಲಿ ಹಾಕಿಸಿದರು. ಅಷ್ಟೆ ವ್ಯತ್ಯಾಸ! ಅಂತಹ ಸರಳ ವ್ಯಕ್ತಿಗಳು ಈಗ ಯಾರೂ ಇಲ್ಲ ಅಂತ ನಮ್ಮ ತಂದೆ ಆಗಾಗ ನೆನಪಿಸಿಕೊಳ್ಳುತ್ತಿರುತ್ತಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications