ಗುರುಹರಿಗೆ ಸಂಧ್ಯಾರವಿ ಗುರುವಂದನೆ

ಅವರು ಬಂದ ಕ್ಷಣದಿಂದ ಪ್ರಾರಂಭವಾಗುವ ನಮ್ಮ ಸಂಭಾಷಣೆ ಎಡೆತಡೆಯಿಲ್ಲದೆ ಸಾಗುವುದು. ಒಂದು ಕ್ಷಣವೂ ಸುಮ್ಮನೆ ಇರುವುದಿಲ್ಲ, ಬೇಸರದ ಸುಳಿವೇ ಇಲ್ಲ. ಹರಿಹರೇಶ್ವರ ಅವರು ವಿವಿಧ ವಿಷಯಗಳಲ್ಲಿ ಹೊಂದಿದ್ದ ಅಗಾಧವಾದ ಜ್ಞಾನದಿಂದ ನಮ್ಮ ಸಂಭಾಷಣೆಗಳು ಶಾಲೆಯಲ್ಲಿ ಕುಳಿತು ಗುರುಗಳೊಂದಿಗೆ ಆತ್ಮೀಯವಾಗಿ ಮಾತನಾಡುತ್ತಿರುವಂತೆ ಇರುತ್ತಿತ್ತು. ಏಕವ್ಯಕ್ತಿ ವಿಶ್ವವಿದ್ಯಾಲಯ ಎಂದು ಕರೆಯುವುದು ಇಂಥವರಿಗೇ.
ಕಳೆದ ಗುರುವಾರ ನಮ್ಮನ್ನಗಲಿದ ಶಿಕಾರಿಪುರ ಹರಿಹರೇಶ್ವರ ತಾವು ಓದಿದ ಪ್ರತಿಯೊಂದು ಪುಸ್ತಕವನ್ನೂ ಪತ್ನಿ ನಾಗಲಕ್ಷ್ಮಿಯವರೊಡನೆ ಹಂಚಿಕೊಳ್ಳುತ್ತಿದ್ದರು. ಸಾಹಿತ್ಯ, ನಿರೂಪಣೆ, ಪದಬಳಕೆ ಬಗೆಗೆ ಅವರವರಲ್ಲಿ ಚರ್ಚೆ ಸಾಗುತ್ತಿತ್ತು. ಹರಿ ಅವರೇ ಹೇಳಿದಂತೆ ತಾವು ಬರೆಯುವ ಪ್ರತಿಯೊಂದು ಬರಹವನ್ನೂ ನಾಗಲಕ್ಷ್ಮಿ ವಿಮರ್ಶಿಸುತ್ತಿದ್ದರು. ಅವರದ್ದು ಅನುರೂಪ, ಅಪರೂಪದ ದಾಂಪತ್ಯ. ಇಬ್ಬರ ಆಸೆ, ಆಸಕ್ತಿಗಳು ಒಂದೇ ಆದ್ದರಿಂದ ಜೀವನ ಸುಗಮ, ಸರಾಗ, ಸ್ನೇಹಮಯ. ಅವರಿಬ್ಬರ ಹೆಸರೂ ಅನುರೂಪವಾಗಿಯೇ ಇದೆ, ಅವರು ಹರಿ ಆದರೆ ಇವರು ಲಕ್ಷ್ಮಿಯಾಗುತ್ತಾರೆ, ಅವರು ಹರೇಶ್ವರರಾದರೆ, ಇವರು ನಾಗ!
ಹರಿ ನಾಗಲಕ್ಷಿಯವರದ್ದು ಕೊಡುವ ಕೈ. ಇವರು ಇಲ್ಲಿ, ಅಂದರೆ ಅಮೇರಿಕಾದಲ್ಲಿ ಇದ್ದಾಗ ಮಾಡಿದ ಕನ್ನಡ ಪರ ಕೆಲಸಗಳು ಅನೇಕ. ಅಮೆರಿಕನ್ನಡ ಪತ್ರಿಕೆ ಪ್ರಾರಂಭಿಸುವುದರ ಮೂಲಕ 1980ರ ದಶಕದಲ್ಲಿ ಅಮೇರಿಕಾದಾದ್ಯಂತ ಮನೆಮಾತಾಗಿದ್ದರು. ಕನ್ನಡವೇ ಕಾಣದ, ಕೇಳದ ಈ ಪರಿಸರದಲ್ಲಿ, ಆ ಸಮಯದಲ್ಲಿ ನನ್ನಂತಹ ಕನ್ನಡಪ್ರೇಮಿಗಳಿಗೆ ಅಮೆರಿಕನ್ನಡ ಮರುಭೂಮಿಯಲ್ಲಿ ಸಿಕ್ಕ ಓಯಸಿಸ್ನಂತೆ ಇತ್ತು.
ನನ್ನ ಗುರು, ನಮಗೆಲ್ಲ ಗುರು : ಅವರು ಕ್ಯಾಲಿಫೋರ್ನಿಯಾಗೆ ಬಂದ ಮೇಲಂತೂ ನನ್ನ ಬರವಣಿಗೆಗೆ ಅವರಿಂದ ತುಂಬು ಹೃದಯದ ಬೆಂಬಲ ದೊರಕಿತು. ಪ್ರತಿವಾರ ಒಂದಲ್ಲ ಒಂದು ಕಾರ್ಯಕ್ರಮ ಹೂಡುತ್ತಿದ್ದರು. ಅವರು ಹೋಮ್ವರ್ಕ್ ಕೊಟ್ಟು ನನ್ನ ಕನ್ನಡದ ಬರವಣಿಗೆಗೆ ಪ್ರೋತ್ಸಾಹವಿತ್ತರು. ಹೀಗೆ ಇಲ್ಲಿನ ಕನ್ನಡಿಗರಿಗೆ ಕನ್ನಡ ಸಾರುವುದಕ್ಕೆ, ಬೆಳೆಸುವುದಕ್ಕೆ ಹರಿ ಊರುಗೋಲಾಗಿದ್ದರು. ಅವರು ಮೈಸೂರಿಗೆ ಮರಳಿದ ಮೇಲೆ ಊರುಗೋಲು ಖಂಡಾಂತರದ ಸೇತುವೆಯಾಯಿತು.
ನಾನು ಮೈಸೂರಿನಿಂದ ನಿಮ್ಮ ಕನ್ನಡಪರ ಕಾರ್ಯಕ್ರಮಗಳಿಗೆ ಹೇಗೆ ಸಹಾಯ ಮಾಡಲಿ? ಎನ್ನುವುದು ಅವರು ಪ್ರತಿಸಲಿ ನನ್ನೊಡನೆ ಮಾತನಾಡಿದಾಗ ಕೇಳುವ ಪ್ರಶ್ನೆ! ನನ್ನ ಸಣ್ಣಕಥೆಗಳ ಸಂಗ್ರಹ ಬೆಳಕು ಕಾಣುವುದಕ್ಕೆ ಈ ದಂಪತಿಗಳೇ ಕಾರಣ. ಹಲವಾರು ವರುಷಗಳಿಂದ ಬರೆದಿದ್ದ ಕಥೆಗಳು ಒಂದು ಪುಸ್ತಕವಾಗಿ ಹೊರಹೊಮ್ಮಿತು. ಉತ್ತರ ಕ್ಯಾಲಿಫೋರ್ನಿಯಾದಿಂದ ನಾನು ಕಳಿಸಿದ ಕಥೆಗಳನ್ನು ಮೂರು ವಾರಗಳಲ್ಲಿ ಅಚ್ಚು ಮಾಡಲು, ಪ್ರಕಟಗೊಳಿಸಲು ಸಿದ್ಧಗೊಳಿಸಿ, ಪುಸ್ತಕ ಬಿಡುಗಡೆಯ ಕಾರ್ಯಕ್ರಮವನ್ನೂ ಅಚ್ಚುಕಟ್ಟಾಗಿ ಮಾಡಿಬಿಟ್ಟರು.
ಅಧ್ಯಯನಶೀಲ : ಹರಿಯವರು ಯಾವ ವಿಷಯವನ್ನೇ ತೆಗೆದುಕೊಂಡರೂ ಅದನ್ನು ಆಮೂಲಾಗ್ರವಾಗಿ ಓದಿ, ಸಂಶೋಧಿಸಿ, ಅದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದರು. ಗುಬ್ಬಿ ಕುರಿತೇ ಇರಲಿ ಅಥವಾ ಮಹಾಲಕ್ಷ್ಮಿ ಬಗ್ಗೆಯೇ ಇರಲಿ. ವೇದ, ವೇದಾಂತ, ಜಾನಪದ, ಸಾಹಿತ್ಯಲೋಕದಲ್ಲಿ ಎಲ್ಲೆಲ್ಲಿ ಅದರ ಉಲ್ಲೇಖನವಿರುತ್ತದೋ ಅದೆಲ್ಲವು ಹರಿಯವರಿಗೆ ಕರತಲಾಮಲಕ. ಅವರೇ ಬರೆದಿರುವ ಅನೇಕ ಪುಸ್ತಕಗಳಲ್ಲಿರುವ ಟಿಪ್ಪಣಿಗಳಿಂದ ಇದು ನಮಗೆ ತಿಳಿದು ಬರುತ್ತದೆ. ಹರಿಯವರು ಹಲವಾರು ವಿಷಯಗಳ ಕುರಿತು 20ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
ಹರಿಯವರ ಕನ್ನಡ ಪ್ರೀತಿಗೆ ಇನ್ನೊಂದು ಉದಾಹರಣೆಯೆಂದರೆ ಅವರೇ ಹಣ ಕೊಟ್ಟು ಇತರರ ಪುಸ್ತಕಗಳನ್ನು ಪ್ರಕಟಿಸುವುದು. ಕನ್ನಡದಲ್ಲಿ ಬರೆಯುವವರಿಗೆ ಇವರು ಈ ರೀತಿ ಪ್ರೋತ್ಸಾಹಿಸುವುದಲ್ಲದೆ, ಓದುವವರಿಗೆ ಬಿಟ್ಟಿ ಪುಸ್ತಕಗಳನ್ನು ಕೊಟ್ಟು ಓದುವಂತೆ ಕೋರಿಕೊಳ್ಳುತಿದ್ದರು! ಬಂದೆಡೆಯೆಲ್ಲ ಅವರು ಬರಿಯ ಕೈಯಲ್ಲಿ ಬರುವ ವ್ಯಕ್ತಿಯಲ್ಲ. ಇತರರಿಗೆ ಕೊಡುವುದಕ್ಕೆ ಕೃತಿಗಳು ಜೋಳಿಗೆಯಲ್ಲಿ ಸದಾ ಇರುತ್ತಿದ್ದವು.
ಹರಿ ದಂಪತಿಗಳು ತಾಯ್ನಾಡಿಗೆ ಮರಳಿದ ಮೇಲೆ ಅನೇಕ ರೀತಿಯಲ್ಲಿ ಸಮಾಜಸೇವೆಯನ್ನು ಜತೆಜತೆಯಾಗಿ ಮಾಡುತ್ತಿದ್ದರು. ಅವರ ನೆರವಿನಿಂದ ಅನೇಕರು ಶಾಲಾ ಕಾಲೇಜುಗಳಲ್ಲಿ ಅಧ್ಯಯನ ಮುಂದುವರೆಸಲು ಸಾಧ್ಯವಾಗಿದೆ. ಅನ್ನದಾನ, ವಸ್ತ್ರದಾನ, ವಿದ್ಯಾದಾನ ನೀಡುವ ಅನೇಕ ಕಾರ್ಯಕ್ರಮಗಳಿಗೆ ತಮ್ಮ ತನು, ಮನ, ಧನವನ್ನು ಮುಡಿಪಾಗಿಟ್ಟಿದ್ದರು. ತಾಯ್ನಾಡಿಗೆ ಒಂದು ನಿರ್ದಿಷ್ಟ ಉದ್ದಿಶ್ಯವಿಟ್ಟುಕೊಂಡು ವಾಪಸ್ಸು ಹೋಗಿದ್ದರು. ಉದ್ದೇಶ ಸ್ಪಷ್ಟ, ಶ್ರದ್ಧೆ ಅಚಲ, ಫಲಿತಾಂಶ ಸಾರ್ಥಕತೆ.
ಹರಿ ಮತ್ತು ನಾಗಲಕ್ಷ್ಮಿ ಅವರ ವೈವಾಹಿಕ ಜೀವನಕ್ಕೆ ಇದೇ ಆಗಸ್ಟ್ ಗೆ 40 ವರ್ಷ ತುಂಬುತ್ತದೆ. ಆ ದಿವಸಕ್ಕಾಗಿ ಅವರ ಮಕ್ಕಳು ಸುಮನಾ ಮತ್ತು ನಂದಿನಿ ಹಾಗೂ ನಾವೆಲ್ಲ ಸೇರಿ ಹರಿ ನಾಗೂ ಅವರಿಗೆ ಸರ್ ಪ್ರೈಸ್ ಮಾಡುವ ಯೋಜನೆ ಹಾಕಿಕೊಂಡಿದ್ದೆವು. ನಮಗೆ ಆ ಪುಣ್ಯ ಇಲ್ಲದಂತಾಯಿತು. ಹರಿಯನ್ನು ವಿಧಿ ಕರೆಸಿಕೊಂಡಿತು. ಅನ್ಯ ಮಾರ್ಗವಿಲ್ಲ. ಹಾಗಂತ ಪತ್ನಿ ನಾಗು ಅವರಾಗಲೀ, ನನ್ನಂಥ ಹರಿ ಅಭಿಮಾನಿಗಳಾಗಲೀ ಅನಾಥರಾದೆವೆಂದು ಭಾವಿಸಬೇಕಿಲ್ಲ. ಬದುಕಿರುವವರೆಗೂ ಭಾವನಾತ್ಮಕ ನೆಲೆಯಲ್ಲಿ ಒಟ್ಟಿಗೇ ಇರುವ ನೇಮವನ್ನು ತಾವು ತೊರೆಯುವುದಿಲ್ಲ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications