ರಾಯರ ಅನುಗ್ರಹ ಯಾಚಿಸಿದ ಅಮೆರಿಕನ್ನಡಿಗರು

ಶ್ರೀಹರಿವಾಯುಗುರುಗಳ ಪಾದಪೂಜೆಯ ಜತೆಗೆ ಇತರ ಸಾಂಪ್ರದಾಯಿಕ ಪೂಜಾದಿಗಳನ್ನು ಪೇಜಾವರ ಶ್ರೀಗಳ ಶಿಷ್ಯೋತ್ತಮರಲ್ಲೊಬ್ಬರಾದ ಹರೀಶ್ ಬೈಪಡ್ಡಿತ್ತಾಯ ಅವರು ಶಾಸ್ತ್ರೋಕ್ತವಾಗಿ ನೆರವೇರಿಸಿದವರು. ಹರೀಶ್ ಮತ್ತು ಗೋಪಿನಾಥ ಗಲಗಲಿ ಅವರಿಂದ ಈ ಸಂದರ್ಭದಲ್ಲಿ ಪ್ರವಚನ ಏರ್ಪಡಿಸಲಾಗಿತ್ತು. ನಿಷ್ಕಲ್ಮಷ ಮನಸ್ಸಿನಿಂದ ರಾಯರ ಸ್ಮರಣೆ ಮಾಡುವ ಭಕ್ತರಿಗೆ ಐಹಿಕ ಮತ್ತು ಪಾರಮಾರ್ಥಿಕ ಫಲಗಳು ಪ್ರಾಪ್ತವಾಗುವುವು ಎಂದು ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದ ಸಂಸ್ಕೃತ ವಿದ್ವಾನ್ ಗೋಪೀನಾಥ ಗಲಗಲಿ ಅವರು ನುಡಿದರು.
ಪ್ರವಚನಗಳ ನಂತರ ರಾಯಚೂರು ಶೇಷಗಿರಿ ದಾಸ್ ಅವರಿಂದ ಹರಿದಾಸ ಕೀರ್ತನೆಗಳನ್ನು ಆಧರಿಸಿದ ಭಕ್ತಿನಾಮ ಸಂಕೀರ್ತನ ನಡೆಯಿತು. ಪಕ್ಕವಾದ್ಯದಲ್ಲಿ ಸ್ಥಳೀಯರೇ ಆದ ರಾಮನ್ (ವೇಣುವಾದನ) ಮತ್ತು ಸಾಮ್ರಾಟ್ (ತಬಲ) ಭಕ್ತಿ ಸಂಗೀತಕ್ಕೆ ಮಾಧುರ್ಯ ತುಂಬಿದರು. ಮಧ್ವರ ತತ್ವ ಮೀಮಾಂಸೆಗಳನ್ನು ಅಮೆರಿಕಾದಲ್ಲಿ ಪಸರಿಸಲು ಸದಾ ಉತ್ಸುಕರಾಗಿರುವ ಪೂರ್ವ ಕರಾವಳಿಯ ಜಯಕೃಷ್ಣ ನೆಲಮಂಗಲ, ನರಹರಿ ಮತ್ತು ವಾಸು ಮೂರ್ತಿ ಆರಾಧನೆಯಲ್ಲಿ ಪಾಲ್ಗೊಂಡಿದ್ದರು. ಪೂಜೆಯ ನಂತರ ಗಲಗಲಿ ಅವರು ಭಕ್ತಗಣಕ್ಕೆ ಫಲ ಮಂತ್ರಾಕ್ಷತೆ ವಿತರಿಸಿದರು.
ಬಹುತೇಕ ಕಾವೇರಿ ಕನ್ನಡ ಸಂಘದ ಸದಸ್ಯ ಕುಟುಂಬಗಳೇ ಪಾಲ್ಗೊಂಡಿದ್ದ ಸಮುದಾಯ ಕಾರ್ಯಕ್ರಮದಲ್ಲಿ ಕಾವೇರಿಯ ಅಧ್ಯಕ್ಷ ಗುರು ನಾಗರಾಜ್, ಸದಸ್ಯರಾದ ವಿಜಯೇಂದ್ರ, ಫಲ್ಗುಣ, ಅನಿಲ್ ಕುಮಾರ್, ರಾಮಮೂರ್ತಿ, ರಾಘವೇಂದ್ರ, ಅಕ್ಕದ ಸದಸ್ಯ ಸಂಜಯ್ ರಾವ್ ಮತ್ತು ಕಾವೇರಿಯ ಮಾಜಿ ಅಧ್ಯಕ್ಷೆ ಮೀನಾ ರಾವ್, ಶ್ರೀವತ್ಸ ಜೋಶಿ, ಸಹನಾ ಜೋಶಿ, ಕೃಷ್ಣಮೂರ್ತಿ ಜೋಯಿಸ್ ಮುಂತಾದವರು ಪಾಲ್ಗೊಂಡಿದ್ದರು. ದೇವಸ್ಥಾನಕ್ಕೆ ದಾರಿ.
ಇದೇ ವೇದಿಕೆಯಿಂದ ಮಾತನಾಡಿದ ಕಾವೇರಿಯ ಸಕ್ರಿಯ ಸದಸ್ಯೆ ಶರ್ಮಿಳಾ ಮೂರ್ತಿ ಬರಲಿರುವ ಕಾವೇರಿ ಕಾರ್ಯಕ್ರಮಗಳನ್ನು ಪ್ರಕಟಿಸಿದರು. ಸೆ. 18ರಂದು ಕಾವೇರಿ ಆಶ್ರಯದಲ್ಲಿ ಗಣೇಶ ಹಬ್ಬ ಆಚರಿಸಲಾಗುತ್ತಿದೆ. ಮೆಕ್ ಲೀನ್ ನಲ್ಲಿರುವ ಲ್ಯಾಂಗ್ಲೀ ಪ್ರೌಢಶಾಲೆಯಲ್ಲಿ ಅಂದು ಸಂಜೆ 4ರಿಂದ 8ರವರೆಗೆ ಏರ್ಪಡಿಸಲಾಗಿರುವ ಸಿದ್ಧಿ ವಿನಾಯಕ ಉತ್ಸವದಲ್ಲಿ ಹಿರಿಯರಿಗೆ ಮತ್ತು ಕಿರಿಯರಿಗೆ ಒಪ್ಪುವ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ಕನ್ನಡ ಕಲಿಯೋಣ ಮಕ್ಕಳ ಪ್ರಾರ್ಥನೆಯಿಂದ ಆರಂಭವಾಗುವ ಕಾರ್ಯಕ್ರಮದಲ್ಲಿ ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಭಾತ್ ಕಲಾವಿದರಿಂದ ಕಿಂದರ ಜೋಗಿ ಮತ್ತು ಮಹಿಷಾಸುರ ಮರ್ದಿನಿ ನೃತ್ಯರೂಪಕಗಳ ಪ್ರದರ್ಶನ ಇರುತ್ತದೆ. ಹೆಚ್ಚಿನ ವಿವರಗಳಿಗೆ ಅಧ್ಯಕ್ಷ ಗುರು ನಾಗರಾಜ್ ಅವರನ್ನು [email protected] ವಿಳಾಸದ ಮುಖಾಂತರ ಸಂಪರ್ಕಿಸಬಹದು ಎಂದು ಶರ್ಮಿಳಾ ಹೇಳಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications