ನ.5ರಂದು ಅಬುಧಾಬಿಯಲ್ಲಿ ಕನ್ನಡ ರಾಜ್ಯೋತ್ಸವ

ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ಆರಂಭಗೊಂಡು ಸಂಜೆ 6 ಗಂಟೆಗೆ ಸಮಾರೋಪಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿಗಳಾದ ಬಿ.ಆರ್.ಶೆಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಭಾರತದ ರಾಯಭಾರಿ ಎಂ.ಕೆ. ಲೋಕೇಶ್ ಪಾಲ್ಗೊಳ್ಳಲಿದ್ದಾರೆ.
ಖ್ಯಾತ ಹಾಸ್ಯ ಕಲಾವಿದ ಪ್ರಾಣೇಶ್ (ಗಂಗಾವತಿ ಬೀಚಿ ) ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿದ್ದು ತಮ್ಮ ನಗೆಭರಿತ ಹಾಸ್ಯ ಚಟಾಕಿಗಳಿಂದ ಯು.ಎ.ಇ.ಯಲ್ಲಿನ ಅನಿವಾಸಿ ಕನ್ನಡಿಗರನ್ನು ರಂಜಿಸಲಿದ್ದಾರೆ. ಖ್ಯಾತ ಮಿಮಿಕ್ರಿ ಕಲಾವಿದ ಬೆಂಗಳೂರಿನ ನರಸಿಂಹ ಜೋಷಿ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಸಮೂಹ ನೃತ್ಯ ಮತ್ತು ಸಮೂಹ ಗಾಯನದ ಜೊತೆಗೆ ಇತರ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿದ್ದು ಆಸಕ್ತರು ತಮ್ಮ ಹೆಸರನ್ನು ಅನಂತ್ (050 – 7891843)ಅಥವಾ ಮನೋಹರ್ (050 – 5212079) ಅವರಲ್ಲಿ ನೊಂದಾಯಿಸಬೇಕಾಗಿ ಅವರು ಕೋರಿದ್ದಾರೆ.
ಪ್ರತಿಭಾ ಪುರಸ್ಕಾರ : ಯು.ಎ.ಇ.ಯಲ್ಲಿನ ಯುವ ಪ್ರತಿಭೆಗಳನ್ನು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು 10 ಮತ್ತು 12ನೇ ತರಗತಿಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು, ಕ್ರೀಡೆ ಮತ್ತು ಇತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮ ಶಾಲಾ ಕಾಲೇಜನ್ನು ಪ್ರತಿನಿಧಿಸಿ ಪದಕಗಳನ್ನು ಪಡೆದಿರುವಂತಹ ವಿದ್ಯಾರ್ಥಿಗಳು ತಮ್ಮ ವಿವರಗಳ ಕುರಿತಾದ ಮಾಹಿತಿಯನ್ನು ಈ ವಿಳಾಸಕ್ಕೆ [email protected] ಮೇಲ್ ಮಾಡಬೇಕಾಗಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : ಸರ್ವೋತ್ತಮ ಶೆಟ್ಟಿ – 50-6125464
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications