ರಾಜ್ಯೋತ್ಸವ : ನ್ಯೂಜಿಲೆಂಡ್ ಕನ್ನಡಿಗರಿಂದ ರಕ್ತದಾನ

ಪೂಜಾ ಭಗತ್ ಅವರಿಂದ ಪ್ರಾರ್ಥನಾ ನೃತ್ಯ ಹಾಗೂ ಕನ್ನಡ ಭುವನೇಶ್ವರಿಯ ಪೂಜೆಯ ನಂತರ ಎಲ್ಲರನ್ನೂ ಸ್ವಾಗತಿಸಿ ಕೂಟದ ಅಧ್ಯಕ್ಷ ಪ್ರಕಾಶ್ ಬಿರಾದರ್ ಅವರು ಮಾತನಾಡಿದರು. ಅವರು ಕನ್ನಡ ಭಾಷೆ ಮತ್ತು ಸಂಸ್ಕೃತಿಗಳ ಬಗ್ಗೆ ಎಲ್ಲರಲ್ಲೂ ವಿಶೇಷವಾಗಿ ಮಕ್ಕಳಲ್ಲಿ ಅಭಿಮಾನ ಮೂಡಲು ನಾವೆಲ್ಲಾ ಶ್ರಮಿಸೋಣ ಎಂದು ಕರೆಯಿತ್ತರು.
ಕಾರ್ಯಕಾರಿ ಸಮಿತಿಯ ಸದಸ್ಯೆ ಉಷಾ ರವಿಶಂಕರ್ ಅವರು ಕಾರ್ಯಕ್ರಮದ ವಿವರಣೆ ನೀಡಿದರು. 'ಕಾಣದಂತೆ ಮಾಯವಾದನು' ಎಂದು ಹಾಡಿದ ಸಂಜನಾ ಸತ್ಯ ಕುಮಾರ್ ಮತ್ತು 'ಏಳು ಸ್ವರವು ಸೇರಿ ಸಂಗೀತವಾಯಿತು' ಎಂದು ಸ್ವರ ಜೋಡಿಸಿದ ತನ್ವಿ ಕೆಡಿಯಪ್ಪ, ಕೀಬೊರ್ಡ್ ನಲ್ಲಿ 'ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು' ಎಂದು ನುಡಿಸಿದ ಸ್ಕಂದ ದೇಶಪಾಂಡೆ, ಎಲ್ಲರೂ ಚಪ್ಪಾಳೆ ಗಿಟ್ಟಿಸಿದರು. 'ಅಆಇಈ ಕನ್ನಡದ ಅಕ್ಷರ ಮಾಲೆ' ಹಾಡಿಗೆ ಸಮೂಹ ನೃತ್ಯ ಮಾಡಿದ ಹನ್ನೆರಡು ಪುಟಾಣಿಗಳು ಮತ್ತು ಅವರಿಗೆ ತರಬೇತಿ ನೀಡಿದ ಮಂಗಳಾ ಪ್ರಭಾಕರ್, 'ಸಿಂಗಾಪುರದಿಂದ ಬಂದ' ಹಾಡಿಗೆ ನರ್ತಿಸಿದ ವಿನೋದಿನಿ ಹಾಗೂ ರಿತ್ವಿಕ್, ಅಡವಿ ದೇವಿಯ ಕಾಡುಜನಗಳದಿರಿಸು ಧರಿಸಿ ಕುಣಿದ ಮೋನಿಶಾ ಮತ್ತು ಈಶಾ, 'ಸಿಕ್ತಾರೆ ಸಿಕ್ತಾರೆ' [ಜೊತೆ ಜೊತೆಯಲಿ ಚಿತ್ರದ ಹಾಡು] ಎಂದು ಮಿಂಚಿನಂತೆ ಡ್ಯಾನ್ಸ್ ಮಾಡಿದ ಯಶಸ್ ಧರಣೇಂದ್ರ ಹೀಗೆ ಹಲವಾರು ಬಾಲಕಲಾವಿದರಿಗೆ ವೇದಿಕೆಯನ್ನೋದಗಿಸಿತು ನಮ್ಮ ರಾಜ್ಯೋತ್ಸವ.
ಮೈಸೂರಿನ ದಸರಾ ಬೊಂಬೆ ಪ್ರದರ್ಶನ ಕಾರ್ಯಕ್ರಮದ ಒಂದು ಪ್ರಮುಖ ಆಕರ್ಷಣೆಯಾಗಿತ್ತು , ಇದನ್ನು ಅಪಾರ ಆಸಕ್ತಿಯಿಂದ ಸಿಂಗರಿಸಿದ್ದ ಸುಜಾತ ದತ್ತಾತ್ರೇಯ ಮತ್ತು ಕವಿತಾ ವೆಂಕಟ್ ಅವರು ಅಭಿನಂದನಾರ್ಹರು.
ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಕನ್ನಡ ಭುವನೇಶ್ವರಿ, ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವ, ಪುರಂದರ ದಾಸರು, ಟಿಪ್ಪೂ ಸುಲ್ತಾನ್, ತರಕಾರಿ ಮಾರುವ ಹೆಂಗಸು ಹೀಗೆ ಹಲವಾರು ಅಪ್ಪಟ ಕನ್ನಡದ ಪಾತ್ರಧಾರಿ ಚಿಣ್ಣರು ವೇದಿಕೆಯನ್ನೇರಿ ತೀರ್ಪುಗಾರರಾಗಿದ್ದ ಜ್ಯೋತಿ ಶ್ರೀಕಾಂತ್ ಮತ್ತು ವತ್ಸಲಾ ಪ್ರಕಾಶ್ ಅವರಿಗೆ ಸಾಕಷ್ಟು ಶ್ರಮ ನೀಡಿದರು. ಕೃಷ್ಣಾ ನಾಗರಾಜ್ ಮತ್ತು ನಟೇಶ್ ಮಾರಪ್ಪ ಅವರುಗಳು ರಸಪ್ರಶ್ನೆಗಳ ಮೂಲಕ ಸಭಿಕರಿಗೆ ಕರ್ನಾಟಕದ ಇತಿಹಾಸದ ಪರಿಚಯ ಮಾಡಿಸಿದರು.
ಉತ್ತರ ಕರ್ನಾಟಕದ ಗಂಡು ಕನ್ನಡ, ಮಂಗಳೂರು ಕನ್ನಡ ಮತ್ತು ಬೆಂಗಳೂರು ಕನ್ನಡ ಈ ಮೂರು ಭಾಷೆಗಳನ್ನೊಳಗೊಂಡು, ಕರ್ನಾಟಕದ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಛಾಯೆಯಿದ್ದ ಹಾಸ್ಯ ನಾಟಕ ಮತ್ತು ಇನ್ನ್ಯಾವ ನಾಟಕ ಎಲ್ಲರನ್ನೂ ರಂಜಿಸಿತು. ಬಾಲ ಕಲಾವಿದರಾದ ಸುಮಂತ ಮೀನಾಕ್ಷಿ ಮತ್ತು ನಿಧಿ ವಿಜಯ್, ಎಂಎಲ್ಎ ಪಾತ್ರದಲ್ಲಿ ಅರುಣ್ ಕುಲಕರ್ಣಿ, ಅವರ ಶಿಷ್ಯ ವಸಂತ್, ಮಾಜಿ ಎಂಎಲ್ಎ ಆಗಿ ಬಿರಾದರ್, ಹೋಟೆಲ್ ಮಾಲಿಕರಾಗಿ ಸತ್ಯ ಕುಮಾರ್, ಡಾಕ್ಟರ್ ಆಗಿ ವಿಜಯ್ ನರಸಿಂಹ, ಇಂಜಿನೀಯರ್ ಆಗಿ ಸುರೇಶ್ ಅವರುಗಳ ಪ್ರಬುದ್ಧ ಅಭಿನಯದ ಈ ನಾಟಕ ಚುರುಕು ಸಂಭಾಷಣೆಯಿಂದ ಪ್ರೇಕ್ಷಕರ ಮನ ಸೂರೆಗೊಂಡಿತು.
ಕಾರ್ಯದರ್ಶಿ ವಸಂತ ಕುಮಾರ್ ಕೆಂಚಪ್ಪ ಅವರು ರಾಜ್ಯೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ವಂದನೆ ಸಲ್ಲಿಸಿ ಕೂಟದ ಅಭಿವೃದ್ಧಿಗೆ ಸಹಕರಿಸುವಂತೆ ಸದಸ್ಯರಿಗೆ ಮನವಿ ಮಾಡಿದರು. ರಕ್ತದಾನ ಶಿಬಿರವನ್ನು ಆಯೋಜಿಸಿದ್ದ ಶ್ರೀಧರ್ ಹೊನ್ನವಳ್ಳಿ ಮತ್ತು ಕರ್ನಾಟಕ ರಾಜ್ಯೋತ್ಸವದ ಮಹತ್ವವನ್ನು ಪವರ್ ಪಾಯಿಂಟ್ ಮೂಲಕ ತೆರೆಯ ಮೇಲೆ ಪ್ರತಿಬಿಂಬಿಸಿದ ಸುಜಾತ ಬಿರಾದರ್ ಅವರುಗಳನ್ನು ಕೂಟದ ಪರವಾಗಿ ಅಭಿನಂದಿಸಿದರು.
ಯುವ ದಂಪತಿಗಳಾದ ಸುಷ್ಮಾ ಮತ್ತು ಮನು ಅವರು ಉತ್ತಮವಾಗಿ ನಿರೂಪಿಸಿದ ಕೀವಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಾಡಗೀತೆ, ಭಾರತ ಮತ್ತು ನ್ಯೂಜಿಲೆಂಡ್ ರಾಷ್ಟ್ರಗೀತೆಗಳ ಸಾಮೂಹಿಕ ಗಾಯನದೊಂದಿಗೆ ಮುಕ್ತಾಯವಾಯಿತು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications