ಏ.23ರಂದು ದುಬೈ ಕನ್ನಡ ಸಾಹಿತ್ಯ ಸಮ್ಮೇಳನ

ದುಬೈನಲ್ಲಿರುವ ಜೆಮ್ ಪ್ರೈವೇಟ್ ಶಾಲೆಯ ಆದಿಕವಿ ಪಂಪ ಸಭಾಂಗಣದಲ್ಲಿ ನಡೆಯುತ್ತಿರುವ ಸಮ್ಮೇಳನದ ಅಧ್ಯಕ್ಷತೆಯನ್ನು ಕನ್ನಡದ ಹಿರಿಯ ಕವಿ ಚನ್ನವೀರ ಕಣವಿಯವರು ವಹಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ಯುಎಇ ಕನ್ನಡಿಗ ಬಿಆರ್ ಶೆಟ್ಟಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಬೆಳಿಗ್ಗೆ 8.30ರಿಂದ ಸಂಜೆ 7ರವರೆಗೆ ನಡೆಯುತ್ತಿರುವ ಸಂಭ್ರಮಾಚರಣೆಯಲ್ಲಿ ಸರಕಾರಿ ಅಧಿಕಾರಿಗಳು, ಕರ್ನಾಟಕದ ಕಲಾವಿದರು, ಸಾಹಿತಿಗಳು ಭಾಗವಹಿಸುತ್ತಿದ್ದಾರೆ. ಅರಬ್ ಸಂಯುಕ್ತ ಸಂಸ್ಥಾನದಲ್ಲಿರುವ ವಿವಿಧ ಕನ್ನಡ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕದಿಂದ ಆಗಮಿಸಿರುವ ಕಲಾವಿದರಿಂದ ಸಂಗೀತ ರಸದೌತಣವನ್ನೂ ಬಡಿಸಲಾಗುತ್ತಿದೆ.
ಸಮ್ಮೇಳನಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಮನು ಬಳಿಗಾರ್, ಸರಕಾರದ ಅನಿವಾಸಿ ಭಾರತೀಯರ ಸಮಿತಿಯ ಉಪಾಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದುಬೈನ ಉದ್ಯಮಿ ಜಫರುಲ್ಲಾ ಖಾನ್ ಭಾಗವಹಿಸುತ್ತಿದ್ದಾರೆ.
ವಿಶೇಷ ಆಮಂತ್ರಿತರಾಗಿ ವಿಜಯ ಕರ್ನಾಟಕ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್, ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ, ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ, ಸಾಹಿತಿ ಮತ್ತು ಸಂಘಟಕ ಜರಗನಹಳ್ಳಿ ಶಿವಶಂಕರ್, ರಂಗಕರ್ಮಿ ವೆಂಕಟರಾಜು ಮತ್ತು ಗಾಯಕ ಶಶಿಧರ ಕೋಟೆ ಭಾಗವಹಿಸುತ್ತಿದ್ದಾರೆ. ಶಶಿಧರ ಕೋಟೆ ಮತ್ತು ತಂಡದವರು ದುಬೈ ಕನ್ನಡಿಗರನ್ನು ಸಂಗೀತದಿಂದ ರಂಜಿಸಲಿದ್ದಾರೆ.
ಸಮ್ಮೇಳನಕ್ಕೆ ಪ್ರವೇಶ ಉಚಿತವಾಗಿದ್ದು ಕನ್ನಡ ಬಂಧುಮಿತ್ರರು ಸಂಸಾರಸಮೇತರಾಗಿ ಬಂದು ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಬೇಕೆಂದು ಧ್ವನಿ ಪ್ರತಿಷ್ಠಾನದ ಪರವಾಗಿ ಪ್ರಕಾಶ್ ರಾವ್ ಪಯ್ಯಾರ್ ಕೋರಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications