ಕುವೈತ್ ಕನ್ನಡಿಗರಿಂದ ಕನ್ನಡ ರಾಜ್ಯೋತ್ಸವ

ರಾಜ್ಯೋತ್ಸವದ ವಿಶೇಷ ಆಕರ್ಷಣೆಯಾಗಿ ಕೂಟದ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಈ ಎಲ್ಲ ಚಟುವಟಿಕೆಗಳನ್ನು ವಿಜಯನಗರ ಸಾಮ್ರಾಜ್ಯದ ವೈಭವವನ್ನು ನೆನಪಿಸಿಕೊಡುವ ನಿರೂಪಣಾ ಮಾಲಿಕೆಯ ಹಂದರದಲ್ಲಿ ಪೋಣಿಸಿ ಪ್ರಸ್ತುತ ಪಡಿಸಲಾಗುವುದು. ಕಾರ್ಯಕ್ರಮಗಳಲ್ಲಿ ನೂರಕ್ಕೂ ಅಧಿಕ ಚಿಣ್ಣರು ಹಾಗೂ ಹಿರಿಯ ಸದಸ್ಯರು ಭಾಗವಹಿಸಲಿದ್ದಾರೆ.
ಕನ್ನಡ ನಾಡಿನ ವಿಶ್ವವಿಖ್ಯಾತ ಯಕ್ಷಿಣಿ, ಮಾತನಾಡುವ ಗೊಂಬೆ ಮತ್ತು ಕಲೆ/ನೆರಳು (ಶಾಡೊ ಪ್ಲೇ) ಮುಂತಾದವುಗಳಲ್ಲಿ ಸಿದ್ಧಹಸ್ತರಾದ ಉದಯ್ ಜಾದೂಗರ್ ಅವರ ಕಾರ್ಯಕ್ರಮ ಎಲ್ಲವಯಸ್ಸಿನ ಮತ್ತು ಎಲ್ಲ ಭಾಷೆಯವರ ಆಕರ್ಷಣೆಯಾಗಲಿದೆ. ಉದಯ್ ರವರು ಬಾಲ್ಯದಿಂದಲೇ ಜಾದೂ ಮತ್ತು ಯಕ್ಷಿಣಿಯಲ್ಲಿ ಆಸಕ್ತರಾಗಿದ್ದು ಈ ವಿದ್ಯೆಯನ್ನು ಭಾರತದ ಪ್ರಖ್ಯಾತ ಜಾದೂಗಾರರಿಂದ ಕರಗತ ಮಾಡಿಕೊಂಡು ನಾಡಿನ ಹೆಸರನ್ನು ವಿಶ್ವದೆಲ್ಲೆಡೆ ಪ್ರಸಿದ್ಧಿಗೊಳಿಸಿದ್ದಾರೆ. ಇವರು ಇಗಾಗಲೇ ಎಂಟು ಸಾವಿರಕ್ಕೂ ಅಧಿಕ ವೇದಿಕೆಗಳ ಮೇಲೆ ಭಾರತ ಹಾಗೂ ಹೊರದೇಶಗಳಲ್ಲಿ ಪ್ರದರ್ಶನ ನೀಡಿ ಅನೇಕ ಪ್ರಶಸ್ತಿ, ಗೌರವಗಳಿಗೆ ಪಾತ್ರರಾಗಿದ್ದಾರೆ.
ಇವರು ನಾಟಕ ಹಾಗೂ ಚಲನಚಿತ್ರಗಳಲ್ಲಿ ಪಾತ್ರವಹಿಸಿದ್ದು ಇವರು ನಿರ್ವಹಿಸಿದ “ಗುರುಗೋವಿಂದ ಭಟ್ಟ"ನ ಪಾತ್ರ ದೂರದರ್ಶನದ ಧಾರಾವಾಹಿ “ಈಶ್ವರ ಅಲ್ಲಾ ನೀನೇ ಎಲ್ಲಾ" ಸಕಲ ಕನ್ನಡಿಗರ ಮನೆ ಮಾತಾಗಿದೆ. ಉದಯ್ ರವರು ಈಗಾಗಲೇ ಹತ್ತಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದು ಇವುಗಳು ಮ್ಯಾಜಿಕ್, ಹಾಸ್ಯ, ಸೊಡಕು ಹಾಗೂ ವ್ಯಕ್ತಿತ್ವ ವಿಕಾಸ ವಿಷಯಗಳನ್ನೊಳಗೊಂಡಿವೆ. ಕಲಾತ್ಮಕ ಚಲನ ಚಿತ್ರವಾದ “ಯುದ್ಧ ಮತ್ತು ಸ್ವಾತಂತ್ರ್ಯ" ವನ್ನು ನಿರ್ಮಾಣಮಾಡಿ “ದರೋಡೆ" ಎಂಬ ಚಲನ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಕುವೈತ್ ಕನ್ನಡ ಕೂಟ 26 ವರ್ಷಗಳಿಂದ ಕುವೈತಲ್ಲಿ ಅಸ್ತಿತ್ವದಲ್ಲಿದ್ದು ನಿರಂತರವಾಗಿ ದೇಶದ ಮತ್ತು ವಿಶೇಷತಃ ಕನ್ನಡ ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳನ್ನು ಯುವ ಪೀಳಿಗೆಗೆ ಮನದಟ್ಟು ಮಾಡುವುದರ ಜೊತೆಗೆ ಕುವೈತಿನ ಜನರಲ್ಲಿ ನಮ್ಮ ಸಂಸ್ಕೃತಿಯ ಪರಿಚಯವನ್ನೂ ನೀಡುತ್ತಿದೆ. ಕುವೈತ್ ಕನ್ನಡ ಕೂಟವು 2007ರಲ್ಲಿ ವಿಶ್ವ ಕನ್ನಡ ಸ್ಮಮೇಳನ ಹಾಗೂ 2009ರಲ್ಲಿ ರಜತ ಮಹೋತ್ಸವವನ್ನು ವಿಜೃಂಬಣೆಯಿಂದ ಆಚರಿಸಿತ್ತು.
ಕುವೈತ್ ಕನ್ನಡ ಕೂಟದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೂಟದ ಅಂತರ್ಜಾಲ ತಾಣವನ್ನು ಸಂಪರ್ಕಿಸಿ.
ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications