ಅಮೆರಿಕಾದಲ್ಲಿ ಮನತಣಿಸಿದ ಹೇಮಂತ ಗಾನ

ಜನವರಿ 22, ಶನಿವಾರದಂದು ಕನೆಕ್ಟಿಕಟ್ನಲ್ಲಿರುವ ಶ್ರೀ ಸ್ವಾಮಿ ಸತ್ಯನಾರಾಯಣ ದೇವಸ್ಥಾನದ ಆಡಿಟೋರಿಯಮ್ನಲ್ಲಿ ನಡೆದ ಈ ಗಾನ ಸಂಜೆಗೆ ನೂರಾರು ಹೊರನಾಡ ಕನ್ನಡಿಗರು ತಮ್ಮ ಪರಿವಾರ ಸಮೇತ ತೀವ್ರ ಚಳಿಯಲ್ಲೂ (-20 ಡಿಗ್ರಿ ಸೆಲ್ಸಿಯಸ್) ಉತ್ಸಾಹದಿಂದ ಭಾಗವಹಿಸಿದ್ದು ನೋಡಿದರೆ ಕನ್ನಡದ ಅಭಿಮಾನ ಎದ್ದು ಕಾಣುತ್ತಿತ್ತು!
ಯಶವಂತ್ ಗಡ್ಡಿಯವರು ಹೇಮಂತ ಗಾನದ ಬಗ್ಗೆ ವಿವರಣೆ ಕೊಡುತ್ತ ಎಲ್ಲರನ್ನು ಸ್ವಾಗತಿಸಿದ ಮೇಲೆ.. ಶ್ರುತಿ ನಾಗರಾಜ್ ಅವರು ಹಾಡಿದ ಕನ್ನಡ ಭಕ್ತಿ ಗೀತೆಯೊಂದಿಗೆ ಈ ಗಾನ ಸಂಜೆ ಸರಿಯಾಗಿ 5 ಗಂಟೆಗೆ ಪ್ರಾರಂಭವಾಯಿತು. ನಂತರ ಸಮೂಹ ಗಾನ "ಜೈ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ" ಕೇಳಿಬರುತ್ತಿದ್ದಂತೆ ಸಭಿಕರೆಲ್ಲ ಎದ್ದು ನಿಂತು ತಾವೂ ಹಾಡತೊಡಗಿದರು. [ಚಿತ್ರಪಟ ನೋಡಿರಿ]
ಈ ಬಾರಿಯ ವಿಶೇಷವೇನೆಂದರೆ.. ಹಾಡು ಹೇಳಲು ಮಕ್ಕಳಿಗೂ ಹಾಗೂ ದೊಡ್ಡವರಿಗೂ ಸಮಾನ ಅವಕಾಶ ಕಲ್ಪಿಸಿಕೊಟ್ಟಿದ್ದು. ಮಕ್ಕಳ ಹಾಡು ಆದಮೇಲೆ ದೊಡ್ಡವರ ಹಾಡು.. ಹೀಗೆ ಸರಿಸಮನಾಗಿ ನಡೆದ ಈ ಸಮಾರಂಭದಲ್ಲಿ ಮಕ್ಕಳೂ ನಾವೇನೂ ಕಡಿಮಯಿಲ್ಲ ಎಂಬಂತೆ ಅಚ್ಚ ಕನ್ನಡದಲ್ಲಿ ಶುಶ್ರಾವ್ಯವಾಗಿ ಹಾಡಿದ್ದು ಎಲ್ಲರ ಮನಸೆಳೆಯಿತು.
6ರ ಪೋರ ಮಾ| ಕಶ್ಯಪ್ ಹಾಡಿದ (ಬಾಲನಟ ಪುನೀತ್ ರಾಜಕುಮಾರ್ ಅವರ) "ಕಾಣದಂತೆ ಮಾಯವಾದನು... ನಮ್ಮ ಶಿವ ಕೈಯ ಕೊಟ್ಟು ಓಡಿಹೋದನು" ನಂತರ 3 ವರ್ಷದ ಮಾ| ಅನಿಕೇತ್ (ಈಗಿನ ಪವರ್ ಸ್ಟಾರ್ ಪುನೀತ್ ರವರ ) "ಶಿವ ಅಂತಾ ಹೋಗುತ್ತಿದ್ದೆ ರೋಡಿನಲಿ... ಮೈ ತುಂಬಾ ಸಾಲ ಇತ್ತು ಲೈಫಿನಲಿ... ಅರ್ಧ ಟ್ಯಾಂಕು ಪೆಟ್ರೋಲ್ ಇತ್ತು ಬೈಕಿನಲಿ" ಅಂತ ಹಾಡತೊಡಗಿದಾಗ ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಸಂತೋಷಪಟ್ಟರು.
ಹೀಗೆ ಸಾಲು ಸಾಲಾಗಿ ಹಳೆಯ ಹಾಗು ಹೊಸ ಕನ್ನಡ ಸಿನೆಮಾ ಗೀತೆಗಳ ಜೊತೆಗೆ ಮಲ್ಲಿ ಸಣ್ಣಪ್ಪನವರಿಂದ ಹನುಮಂತನ ಮೇಲಿನ ಭಕ್ತಿಗೀತೆ, ಕನ್ನಡ ಭಾಷೆಗೆ ಅನುವಾದಮಾಡಿದ ಎಆರ್ ರೆಹಮಾನ್ ರ ಸಮೂಹ ಗಾನ "ಜೈ ಹೋ", ಪ್ರದೀಪರಿಂದ ಡಾ. ರಾಜ್ ರವರ "ಬೆಳ್ಳಿ ಮೂಡಿತೋ ಕೋಳಿ ಕೂಗಿತೊ", ಶ್ರುತಿ ನಾಗರಾಜ್ ಅವರಿಂದ ಅಮೃತವರ್ಷಿಣಿಯ "ತುಂತುರು".. ನಂತರ ಡ್ಯುಯೆಟ್ ಹಾಡುಗಳ ಸರದಿ .. ವಿಜಯ-ಶಿವಕುಮಾರ್, ಶ್ರೀವಿದ್ಯಾ-ಪ್ರಶಾಂತ್, ಸೌಮ್ಯ-ಸುಂದರೇಶ್, ಅನಿತಾ - ಕೃಷ್ಣಮೂರ್ತಿ, ಪ್ರಮೀಳ-ರಾಜೇಶ್, ಆಶಾ-ಯಶವಂತ್... ಡ್ಯುಯೆಟ್ ಹಾಡುಗಳನ್ನು ಹಾಡಿದ್ದು ಎಲ್ಲರ ಮನಸೆಳೆದವು!
ಹೀಗೆ ಸರಿಸುಮಾರು 4 ಗಂಟೆಗಳ ತನಕ ನಡೆದ ಈ ಗಾನ ಸಂಜೆ ಎಲ್ಲರ ಕಿವಿ, ಮನ ತಣಿಸಿದ್ದಲ್ಲದೆ ಎಲ್ಲರಲ್ಲೂ ಗುಪ್ತವಾಗಿ ಅಡಗಿದ್ದ ಹಾಡುವ ಕಲೆಯನ್ನು ಹೊರಹೊಮ್ಮಿಸಿದ್ದಂತು ಅಕ್ಷರಶ: ನಿಜ. ಈ ಸವಿಯಾದ ಸಂಗೀತ ಸಂಜೆಯ ಜೊತೆಗೆ ರುಚಿಯಾದ ಊಟ ಮಾಡಿ ಹೊಯ್ಸಳ ಕನ್ನಡ ಕೂಟದವರಿಗೆ ಧನ್ಯವಾದಗಳನ್ನು ಹೇಳಿ ಮೆಲ್ಲಗೆ ಮನದಲ್ಲೇ "ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು" ಅಂತ ಹಾಡುತ್ತ ಹೊರಟಾಗ ಹತ್ತರ ಮೇಲಾಗಿತ್ತು!
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications