ಬೆಂಗಳೂರಿನಲ್ಲಿ ನಾವಿಕದ ಅಮೆರಿಕನ್ನಡೋತ್ಸವ

ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ವಿಷಯ ಪ್ರಕಟಿಸಿದರು. ನಾವಿಕ (ನಾರ್ತ್ ಅಮೆರಿಕ ವಿಶ್ವ ಕನ್ನಡಿಗರ ಆಗರ) ಅಮೆರಿಕದಲ್ಲಿ ಸ್ಥಾಪನೆಗೊಂಡ ಒಂದು ಲಾಭ ರಹಿತ ಸಂಸ್ಥೆಯಾಗಿದ್ದು, ವಿಶ್ವದೆಲ್ಲೆಡೆಯ ಕನ್ನಡಿಗರ ಮತ್ತು ಕನ್ನಡ ಸಂಘಟನೆಗಳ ಆಶೋತ್ತರಗಳನ್ನು ಒಂದು ಸೂರಿನಡಿ ತರುವುದೇ ಸಂಸ್ಥೆಯ ಉದ್ದೇಶವಾಗಿದೆ ಎಂದು ಹೇಳಿದರು.
ಕನ್ನಡ ಭಾಷೆ, ಸಂಸ್ಕ್ರತಿ ಮತ್ತು ಕರ್ನಾಟಕ ಪರಂಪರೆಯನ್ನು ತಾಯ್ನೆಲದಿಂದ ದೂರವಿರುವ ಮುಂದಿನ ಪೀಳಿಗೆಗೆ ಪರಿಚಯಿಸುವ ಮತ್ತು ಉಳಿಸಿ ಬೆಳೆಸುವ ಮಹತ್ವಾಕಾಂಕ್ಷೆಯಿಂದ ಆರಂಭಗೊಂಡ ಸಂಸ್ಥೆ ನಾವಿಕ.ನಾವಿಕದ ಮೊದಲನೇ ಸಮ್ಮೇಳನ ಯಶಸ್ವಿಯಾಗಿದ್ದು ನಮ್ಮ ಉತ್ಸಾಹ ಹೆಚ್ಚುವಂತೆ ಮಾಡಿದೆ ಎಂದು ಬಾಬು ಸಂಸ್ಥೆಯ ಬಗ್ಗೆ ವಿವರಿಸಿದರು. ಅಮೆರಿಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವಾರು ಯಶಸ್ವಿ ಕನ್ನಡಿಗರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ನುಡಿದರು.
ಅಮೆರಿಕದಲ್ಲಿ ನೆಲೆಸಿರುವ ಪೋಷಕರುಗಳಿಗೆ ತಮ್ಮ ಮಕ್ಕಳ ಸಾಧನೆಯನ್ನು ತಾಯ್ನೆಲದಲ್ಲಿ ತೋರ್ಪಡಿಸಬೇಕು ಎಂಬ ಹಂಬಲ ಯಾವತ್ತಿನಿಂದಲೂ ಇದೆ. ಉದ್ದೇಶಿತ 'ಅಮೆರಿಕನ್ನಡೋತ್ಸವ' ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಒದಗಿಸಲಿದೆ. ಈಗಾಗಲೇ ಸಾಕಷ್ಟು ಮಕ್ಕಳು ಕರ್ನಾಟಕದಲ್ಲಿ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಬಾಬು ಸಂತಸ ವ್ಯಕ್ತಪಡಿಸಿದರು.
ಅಮೆರಿಕದಲ್ಲಿರುವ ಕನ್ನಡಿಗರ ಭಾವನೆಗಳನ್ನು ಹೊರಗೆಡಹುವ ನಿಟ್ಟಿನಲ್ಲಿ ಅನೇಕ ಗೋಷ್ಠಿ ಹಾಗೂ ಕಾರ್ಯಕ್ರಮಗಳನ್ನು ಅಮೆರಿಕೋತ್ಸವದಲ್ಲಿ ಪ್ರತಿಬಿಂಬಿಸಲು ನಿರ್ಧರಿಸಲಾಗಿದೆ. ಕನ್ನಡ ನಾಡಿನ ಕಲೆಯನ್ನು ಅಮೆರಿಕದಲ್ಲಿ ಭಿತ್ತರಿಸುತ್ತಿರುವ ಅನೇಕ ಸಾಧಕರ ಕಲಾ ಪ್ರದರ್ಶನ, ಕರ್ನಾಟಕದ ಸುಧಾರಣೆಗೆ ಅಮೆರಿಕಾದಲ್ಲಿ ನೆಲೆಸಿದ ಕನ್ನಡಿಗರ ವಿವಿಧ ಯೋಜನೆಗಳು, ಕರ್ನಾಟಕದ ಮತ್ತು ಅಲ್ಲಿ ನೆಲೆಸಿರುವವರ ನಡುವಿನ ವಾಣಿಜ್ಯ-ವ್ಯವಹಾರದ ಅವಕಾಶಗಳು, ಹೊರಗುತ್ತಿಗೆ, ಅಮೆರಿಕದಲ್ಲಿರುವ ಕಲಾ ಪ್ರಕಾರಗಳಲ್ಲಿ ಸಾಧನೆ ಮಾಡಿರುವ ಕನ್ನಡಿಗರು ಮುಂತಾದ ವಿಷಯಗಳ ಕುರಿತಾದ ಗೋಷ್ಠಿ ಹಾಗೂ ಪ್ರದರ್ಶನಗಳೂ ಕೂಡ ಉತ್ಸವದಲ್ಲಿ ಕಾಣಸಿಗುತ್ತದೆ.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಸರ್ಕಾರದ ಎನ್ಆರ್ಐ ಫೋರಮ್ನ ಉಪಾಧ್ಯಕ್ಷರಾದ ಗಣೇಶ್ ಕಾರ್ನಿಕ್, ಕಾರ್ಯಕ್ರಮದ ಕರ್ನಾಟಕ ಸಂಚಾಲಕರಾದ ರಂಗಕರ್ಮಿ, ಹಾಸ್ಯ ಕಲಾವಿದ ಯಶವಂತ ಸರದೇಶಪಾಂಡೆ ಉಪಸ್ಥಿತರಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications