ಏ.9ರಂದು ಮೆಲ್ಬರ್ನ್ ಕನ್ನಡ ಸಂಘದ ರಜತೋತ್ಸವ

25 ವಸಂತಗಳನ್ನು ಕಂಡ ಮೆಲ್ಬರ್ನ್ ಕನ್ನಡ ಸಂಘದ ಇತಿಹಾಸದಲ್ಲಿ ಇದೊಂದು ಹೊಸ ಮೈಲಿಗಲ್ಲು. ಮೆಲ್ಬರ್ನಿನ ಸ್ಪ್ರಿಂಗ್ ವೇಲ್ ನಲ್ಲಿರುವ ಸ್ಪ್ರಿಂಗ್ ವೇಲ್ ಟೌನ್ ಹಾಲ್ ನಲ್ಲಿ ಈ ಕಾರ್ಯಕ್ರಮವನ್ನು ನಡೆಸಲಿದ್ದು, ಸಂಘವು ಇಡೀ ದಿನದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಂಘದ ಅಧ್ಯಕ್ಷೆ ಉಮಾ ಪಾಟೀಲ್ ಹಾಗು ರಜತೋತ್ಸವ ಆಚರಣೆಯ ಅಧ್ಯಕ್ಷರಾದ ಡಾ. ಹನುಮಂತ ರೆಡ್ಡಿಯವರ ಮೇಲ್ವಿಚಾರಣೆಯಲ್ಲಿ ಸಿದ್ಧತೆ ನಡೆದಿದೆ.
ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾ. 'ಮುಖ್ಯಮಂತ್ರಿ' ಚಂದ್ರು, ಖ್ಯಾತ ಸಾಹಿತಿ ಡಾ. ಎಸ್.ಎಲ್. ಭ್ಯೆರಪ್ಪ, ಪ್ರಣಯರಾಜ ಡಾ. ಶ್ರೀನಾಥ್, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಗೂ ಇತರರು ಈ ರಜತೋತ್ಸವಕ್ಕೆ ಅತಿಥಿಗಳಾಗಿ ಆಗಮಿಸಲಿದ್ದು, ವಿಶೇಷ ಅತಿಥಿಗಳಾಗಿ ಸ್ಥಳೀಯ ವಿಕ್ಟೋರಿಯಾದ Planning Minister, Matthew Guy, State Member for South Eastern Metropolitan Region, Inga Peulich, MLC ಮತ್ತು City of Greater Dandenong ಮೇಯರ್ Cr. Roz Blades ರವರು ಪಾಲ್ಗೊಳ್ಳಲಿದ್ದಾರೆ.
ಮೆಲ್ಬರ್ನಿನ ಕನ್ನಡಿಗರಿಗೆ ಸಂಗೀತದ ರಸದೌತಣ ಉಣಿಸಲು ಖ್ಯಾತ ಹಿನ್ನೆಲೆ ಗಾಯಕರಾದ ಜೈಹೋ ಖ್ಯಾತಿಯ ವಿಜಯ್ ಪ್ರಕಾಶ್, ಅರ್ಚನಾ ಉಡುಪ ಮತ್ತು ತಂಡದವರು ಸಹ ಆಗಮಿಸಲಿದ್ದಾರೆ. ಮತ್ತು ಮೆಲ್ಬರ್ನಿನ ಸ್ಥಳೀಯ ಕನ್ನಡ ಕಲಾವಿದರುಗಳು ಸಹ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲಿದ್ದಾರೆ.
ಕಾರ್ಯಕ್ರಮದ ವಿಶೇಷಗಳು
* ಡಾ. ಎಸ್ಎಲ್ ಭೈರಪ್ಪರವರ ಜೊತೆ ಸಾಹಿತ್ಯ ಸಂವಾದ.
* ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರ ಜೊತೆ ಪರಸ್ಪರ ಮಾತುಕತೆ.
* ರಜತೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ
* ಅತಿಥಿಗಳೊಂದಿಗೆ ಸಂವಾದ
* ಮೆಲ್ಬರ್ನಿನ ಸ್ಥಳೀಯ ಕನ್ನಡ ಕಲಾವಿದರ ಕಾರ್ಯಕ್ರಮ
* ಮೆಲ್ಬರ್ನ್ ಕನ್ನಡ ಸಂಘದ ಗ್ರಂಥಾಲಯದಿಂದ ನೆನಪಿನ ಕಾಣಿಕೆಯಾಗಿ ಕನ್ನಡ ಪುಸ್ತಕ
* ಕನ್ನಡ ಗ್ರಂಥಾಲಯದ ಪುಸ್ತಕಗಳ ಪ್ರದರ್ಶನ
ಈ ರಜತೊತ್ಸವದಲ್ಲಿ ಭಾಗವಹಿಸುವವರಿಗೆ ನೊಂದಣಿ ಮತ್ತು ಕಾರ್ಯಕ್ರಮದ ಸಂಪೂರ್ಣ ವಿವರಗಳನ್ನು www.mks.org.au ಪ್ರಕಟಿಸಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications