ಲಂಡನ್ನಿನ ಹೆಮ್ಮೆಯ ಕನ್ನಡಿಗ ಕಿಕಿ ತಮ್ಮಯ್ಯ ಇನ್ನಿಲ್ಲ

ಕರ್ನಾಟಕ ರಾಜ್ಯಕ್ಕೆ, ಕೊಡಗಿಗೆ ಹೆಮ್ಮೆ ತರುವಂತಹ ವೀರ ಕನ್ನಡಿಗನ ಸಾಧನೆ ನಿಜಕ್ಕೂ ಅನನ್ಯ. 1964ರಲ್ಲಿ ಬ್ರಿಟನ್ನಿಗೆ ಬಂದ ಅವರು 2000 ಇಸವಿಯಲ್ಲಿ ಪ್ರಪ್ರಥಮ ಭಾರಿಗೆ ಲಂಡನ್ನಿನ ಹ್ಯಾರೋ ಕೌನ್ಸಿಲ್ ಗೆ ಮೇಯರ್ ಆದರು. 20 ವರುಷಗಳ ಕಾಲ ಲೇಬರ್ ಪಕ್ಷದ ಸೋಲಿಲ್ಲದ ಕೌನ್ಸಿಲ್ಲರ್ ಆಗಿದ್ದ ಅವರು, ಇಂಗ್ಲೆಂಡಿನ ಮಾಜಿ ಪ್ರಧಾನಿಗಳಾದ ಟೋನಿ ಬ್ಲೇರ್ ಮೊದಲಾದವರೊಂದಿಗೆ ರಾಜಕೀಯ ಒಡನಾಟ, ಬ್ರಿಟನಿನ ರಾಜಮನೆತನದೊಂದಿಗೆ ನಿಕಟ ಸಂಬಂಧವಿಟ್ಟುಕೊಂಡಿದ್ದರು.
ಕರ್ನಾಟಕದ ರಾಜಕೀಯ ಮುತ್ಸದ್ದಿಗಳಾದ ರಾಮಕೃಷ್ಣ ಹೆಗಡೆ, ಎಂಪಿ ಪ್ರಕಾಶ್ ಮುಂತಾದ ರಾಜಕಾರಣಿಗಳೊಂದಿಗೆ ಒಡನಾಟ ಇಟ್ಟುಕೊಂಡಿದ್ದರು. ಹತ್ತಾರು ಅಂತಾರಾಷ್ಟ್ರೀಯ ಸನ್ಮಾನಗಳು ಸಂದಿದ್ದರೂ ಯಾವುದೇ ಪ್ರಚಾರವನ್ನು ಬಯಸದ, ನಿಗರ್ವಿ, ಸಹೃದಯಿಯಾಗಿದ್ದರು ಕಿಕಿ ತಮ್ಮಯ್ಯನವರು. ಅವರ ಜೀವ ಇಂದು ನಮ್ಮೊಂದಿಗಿಲ್ಲದಿದ್ದರು ಅವರ ವ್ಯಕ್ತಿತ್ವ ನಮ್ಮೊಂದಿಗಿದೆ.
ಜಾತಸ್ಯ ಹಿ ಮರಣಂ ಧ್ರುವಂ. ಆದರೆ ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರಪಂಚದಲ್ಲಿ ದೈಹಿಕವಾಗಿ ಇಲ್ಲದಿದ್ದರೂ ಎಲ್ಲರ ಮನಸ್ಸಿನಲ್ಲೂ ಜೀವಂತವಾಗಿರುತ್ತಾರೆ. ಅಂತಹ ಉತ್ತಮರ ಸಾಲಿಗೆ ಸೇರಿದ ತಮ್ಮಯ್ಯನವರನ್ನು ಕರ್ನಾಟಕ ಸರಕಾರ ಗುರುತಿಸದೆ ಹೋದದ್ದು ನಿಜಕ್ಕೂ ಖೇದನೀಯ. ಇನ್ನಾದರೂ ಕರ್ನಾಟಕ ಸರಕಾರ ಮರಣೋತ್ತರವಾಗಿ ಗೌರವಿಸಬೇಕು ಎಂಬುದು ಎಲ್ಲರ ಆಶಯ.
ಇತ್ತೀಚಿಗೆ, ಸಂಗಮ ಸಮಿತಿಯು ವಿಶ್ವ ಕನ್ನಡ ಸಮ್ಮೇಳನ ಯುರೋಪ್-2011 ಲಂಡನ್ನಿನಲ್ಲಿ ಆಯೋಜಿಸಿದ್ದೇವೆ, ನೀವು ಸಂಗಮ ಸಮಿತಿಯ ಅಧ್ಯಕ್ಷರಾಗಿ ನಮ್ಮನ್ನು ನಿರ್ದೇಶಿಸಬೇಕೆಂದು ಕೇಳಿಕೊಂಡಾಗ ಅವರು ಹೇಳಿದ ಮಾತು "ಕನ್ನಡಕ್ಕಾಗಿ ನನ್ನ ತನು ಮನ ಧನ. ಆದರೆ ಅಂತಹ ದೊಡ್ಡ ಸಾಧನೆಯನ್ನೇನು ನಾನು ಮಾಡಿಲ್ಲ. ನಿಮ್ಮೊಂದಿಗೆ ನಾನು ಅಳಿಲು ಸೇವೆ ಮಾಡುತ್ತೇನೆ. ಅಧ್ಯಕ್ಷರನ್ನಾಗಿ ಬೇರೆಯವರನ್ನು ಮಾಡಿ" ಎಂದು ಸೌಜನ್ಯ ಪೂರ್ವಕವಾಗಿ ಹೇಳಿದ್ದರು.
ನಿಮ್ಮ ಹೆಸರೇ ನಮಗೆ ಶ್ರೀರಕ್ಷೆ, ಗೌರವ, ಸ್ಫೂರ್ತಿ. ಹಾಗಾಗಿ ನೀವೇ ಅಧ್ಯಕ್ಷರಾಗಬೇಕೆಂದು ಹೇಳಿದಾಗ ವಿಶ್ವ ಕನ್ನಡ ಸಮ್ಮೇಳನ ಲಂಡನ್ನಿನಲ್ಲಿ ಆಗಲೇಬೇಕಾದ್ದು. ಎಲ್ಲ ಕನ್ನಡಿಗರನ್ನು ಈ ವಯಸ್ಸಿನಲ್ಲಿ ಕಾಣುವ ಯೋಗ ಬಂದಿದೆ. ನಾನು ಅಧ್ಯಕ್ಷನಾಗಿ ಸಹಕರಿಸುತ್ತೇನೆ ಎಂದು ಅನಾರೋಗ್ಯ ಇದ್ದಾಗ್ಯೂ ಒಪ್ಪಿಕೊಂಡಿದ್ದರು. ಮೊದಲನೇ ಮೀಟಿಂಗ್ ನಮ್ಮ ಮನೆಯಲ್ಲೇ ನಡೆಯಲಿ ಎಂದು ಮಾರ್ಚ್ 27, ಭಾನುವಾರ ಸಂಜೆ ಮೂರು ಘಂಟೆಗೆ ಎಲ್ಲರನ್ನು ಬಹಳ ಆದರದಿಂದ ಬರಮಾಡಿಕೊಂಡು, ಎಲ್ಲರೊಡನೆ ಬೆರೆತು, ಚರ್ಚಿಸಿ ಹುರಿದುಂಬಿಸಿದ್ದರು. ಇಂತಹ ನಿಸ್ವಾರ್ಥವಿರುವ ಕನ್ನಡಿಗರು ಸಿಗುವುದು ನಿಜಕ್ಕೂ ಅಪರೂಪ. ದಿವಂಗತ ತಮ್ಮಯ್ಯನವರ ಗೌರವಾರ್ಥ ಬ್ರಿಟಿಶ್ ಸರಕಾರದ ಹ್ಯಾರೋ ಕೌನ್ಸಿಲ್ ನವರು ಸಿವಿಲ್ ಫ್ಯೂನೆರಲ್ ಸರ್ವಿಸ್ ಏರ್ಪಡಿಸಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications