Get Updates
Get notified of breaking news, exclusive insights, and must-see stories!

ಕತಾರ್ ಕರ್ನಾಟಕ ಪ್ರತಿನಿಧಿ ಅರವಿಂದ ಪಾಟೀಲ

Aravind Patil and Deepa Gopalan Wadhwa
ಬೆಂಗಳೂರು, ಆ. 1 : ಕತಾರ್‌ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಮತ್ತು ಕರ್ನಾಟಕ ರಾಜ್ಯ ನಡುವೆ ಸಾಂಸ್ಕೃತಿಕ ಮತ್ತು ವ್ಯವಹಾರ ಸಂಬಂಧಗಳಿಗೆ ಸೇತುವೆಯಂತೆ ಕಾರ್ಯ ನಿರ್ವಹಿಸುವ ವೇದಿಕೆಯೊಂದನ್ನು ರಚಿಸಲಾಗಿದ್ದು, ಈ ಮೂಲಕ ಕನ್ನಡಿಗರ ಬಹುದಿನಗಳ ಕನಸೊಂದು ನನಸಾದಂತಾಗಿದೆ.

ಕತಾರ್ ಎನ್‌ಆರ್‌ಐ ವೇದಿಕೆಯನ್ನು ಈಚೆಗೆ ದೋಹಾದಲ್ಲಿ ಅನಿವಾಸಿ ಭಾರತೀಯ ವೇದಿಕೆಯ ಉಪಾಧ್ಯಕ್ಷ ಗಣೇಶ್ ಕಾರ್ಣಿಕ್ ಮತ್ತು ಕತಾರ್‌ನಲ್ಲಿರುವ ಭಾರತದ ರಾಯಭಾರಿ ದೀಪಾ ಗೋಪಾಲನ್ ವಾಧ್ವಾ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು. ಭಾರತದ ಖ್ಯಾತ ಉದ್ಯಮಿ ಹಸನ್ ಚೌಗ್ಲೆ ಮುಖ್ಯ ಅತಿಥಿಯಾಗಿದ್ದರು.

ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಈ ವೇದಿಕೆಯ ಮಹತ್ವವನ್ನು ತಿಳಿಸಿ, ಕರ್ನಾಟಕದಲ್ಲಿ ಉದ್ಯಮ ಆರಂಭಿಸಿಲು ಭಾರತೀಯ ಉದ್ಯಮಿಗಳಿಗೆ ಆಹ್ವಾನ ನೀಡಿದರು ಮತ್ತು ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ರಾಜ್ಯ ಸರ್ಕಾರವು ಈ ವೇದಿಕೆಗೆ ನೇಮಿಸಿದ ಪ್ರತಿನಿಧಿ ಅರವಿಂದ ಪಾಟೀಲ ಅವರಿಗೆ ಸಂಪೂರ್ಣ ಸಹಕಾರ ನೀಡಲು ಅವರು ಕನ್ನಡ ಸಂಘಗಳ ಅಧ್ಯಕ್ಷರನ್ನು ಕೋರಿದರು.

ವೇದಿಕೆ ಆರಂಭಿಸಿ ಕ್ರಮವನ್ನು ಶ್ಲಾಘಿಸಿದ ರಾಯಭಾರಿ ದೀಪಾ ಅವರು, ಕತಾರ್‌ಗೆ ಸಂಬಂಧಿಸಿದಂತೆ ಭಾರತದಲ್ಲಿ ನೆರವು ಬೇಕಾದವರಿಗೆ ಈ ವೇದಿಕೆಯ ಬಹಳ ಪ್ರಯೋಜನಕಾರಿ ಎಂದರು. ಹಸನ್ ಚೌಗ್ಲೆ ಅವರು ವೇದಿಕೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರಲ್ಲದೆ, ಕತಾರ್‌ನಲ್ಲಿರುವ ಭಾರತೀಯರಿಗೆ ಗೊತ್ತಿರುವಂತಹ ಅರವಿಂದ ಪಾಟೀಲ ಅವರನ್ನೇ ಕರ್ನಾಟಕದ ಪ್ರತಿನಿಧಿಯಾಗಿ ಆಯ್ಕೆ ಮಾಡಿರುವುದಕ್ಕೆ ಕಾರ್ಣಿಕ್ ಅವರನ್ನು ಅಭಿನಂದಿಸಿದರು. ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿ ದೀಪಕ್ ಶೆಟ್ಟಿ ವಂದಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+