ಬಸವೇಶ್ವರ ಪ್ರತಿಮೆಗೆ ಪಾಕಿಸ್ತಾನಿಗಳ ಬೆಂಬಲ

ಭಯೋತ್ಪಾದನೆಯ ಬೇಗುದಿಯಲ್ಲಿ ಬೇಯುತ್ತಿರುವ ಈ ಪರಿಸ್ಥಿತಿಯಲ್ಲಿ, ಎರಡೂ ದೇಶಗಳ ಸಂಬಂಧ ವೃದ್ಧಿಯಾಗುವ ಕುರುಹು ಅನ್ಯ ದೇಶದಲ್ಲಿ ಮೊಳಕೆಯೊಡೆದಿದೆ. ಇಬ್ಬರ ಬಾಂಧವ್ಯವನ್ನು ಬೆಸೆದಿರುವುದು 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ ಜಗಜ್ಯೋತಿ ಬಸವೇಶ್ವರ.
ಲಂಡನ್ ನ ಹೌಸ್ ಆಫ್ ಪಾರ್ಲಿಮೆಂಟ್ ಎದುರಿಗೆ ಸ್ಥಾಪಿಸಲಾಗುತ್ತಿರುವ ಬಸವಣ್ಣನ ಪುತ್ಥಳಿಗೆ ಲಂಡನ್ ನಲ್ಲಿರುವ ಪಾಕಿಸ್ತಾನಿಗಳ ಸಮೂಹ ತುಂಬು ಹೃದಯದ ಬೆಂಬಲ ನೀಡಿದೆ. ಇದರಿಂದಾಗಿ ಕನ್ನಡಿಗರ ಮತ್ತು ಭಾರತೀಯರ ಹೃದಯ ತುಂಬಿಬಂದಂತಾಗಿದೆ.
ತೋಹಾ ಕುರೇಶಿ ಅವರ ನೇತೃತ್ವದಲ್ಲಿ ಲ್ಯಾಂಬೆತ್ ನ ಮೇಯರ್ ಕನ್ನಡಿಗ ಡಾ. ನೀರಜ್ ಪಾಟೀಲ್ ಅವರನ್ನು ಭೇಟಿ ಮಾಡಿದ ಪಾಕಿಸ್ತಾನಿ ನಾಗರಿಕರು ತಮ್ಮ ಬೆಂಬಲ ಪತ್ರವನ್ನು ಸರ್ವರ ಸಮ್ಮುಖದಲ್ಲಿ ನೀಡಿ ಅಚ್ಚರಿ ನೀಡಿದರು. ಪುತ್ಥಳಿಯನ್ನು ವಾಕ್ಸ್ ಹಾಲ್ ಸ್ಪ್ರಿಂಗ್ ಗಾರ್ಡನ್ ನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕುರೇಶಿ ಅವರು, "ಪಾಕಿಸ್ತಾನ ಮತ್ತು ಭಾರತಕ್ಕೆ ಬಸವೇಶ್ವರ ಎಂದಿಗೂ ಪ್ರಸ್ತುತ. 1948ಕ್ಕೂ ಹಿಂದೆ ಎರಡೂ ರಾಷ್ಟ್ರಗಳು ಒಂದಾಗಿದ್ದಾಗ, ಪ್ರಜಾಪ್ರಭುತ್ವವನ್ನು ಸ್ಥಾಪಿಸಲು ಶ್ರಮಿಸಿದ ನಿಸ್ವಾರ್ಥ ವ್ಯಕ್ತಿಯ ಪ್ರತಿಮೆ ಸ್ಥಾಪನೆಯಾಗುತ್ತಿರುವುದು ಬಹಳ ಮಹತ್ವದ್ದು. ಪ್ರತಿಮೆ ಸ್ಥಾಪನೆಗೆ ಬೆಂಬಲ ನೀಡುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯ" ಎಂದರು.
ಭಯೋತ್ಪಾದನೆ ವಿರುದ್ಧ ನಡೆಸಿದ ಚಳವಳಿ ಮತ್ತು ಸೇವೆಗಾಗಿ ಕುರೇಶಿ ಅವರು 2010ರ ಜನವರಿಯಲ್ಲಿ ರಾಣಿ ಎಲಿಜಬೆತ್ ರಿಂದ ಗೌರವಕ್ಕೆ ಪಾತ್ರರಾಗಿದ್ದರು. ಪ್ರಸ್ತುತ, ಲ್ಯಾಂಬೆತ್ ಕೌನ್ಸಿಲ್ ನಿಂದ ಅನುಮತಿಗಾಗಿ ಬಸವಣ್ಣನ ಪ್ರತಿಮೆ ಕಾದಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications