ಬಸವೇಶ್ವರ ಪ್ರತಿಮೆಗೆ ಪಾಕಿಸ್ತಾನಿಗಳ ಬೆಂಬಲ

ಭಯೋತ್ಪಾದನೆಯ ಬೇಗುದಿಯಲ್ಲಿ ಬೇಯುತ್ತಿರುವ ಈ ಪರಿಸ್ಥಿತಿಯಲ್ಲಿ, ಎರಡೂ ದೇಶಗಳ ಸಂಬಂಧ ವೃದ್ಧಿಯಾಗುವ ಕುರುಹು ಅನ್ಯ ದೇಶದಲ್ಲಿ ಮೊಳಕೆಯೊಡೆದಿದೆ. ಇಬ್ಬರ ಬಾಂಧವ್ಯವನ್ನು ಬೆಸೆದಿರುವುದು 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ ಜಗಜ್ಯೋತಿ ಬಸವೇಶ್ವರ.
ಲಂಡನ್ ನ ಹೌಸ್ ಆಫ್ ಪಾರ್ಲಿಮೆಂಟ್ ಎದುರಿಗೆ ಸ್ಥಾಪಿಸಲಾಗುತ್ತಿರುವ ಬಸವಣ್ಣನ ಪುತ್ಥಳಿಗೆ ಲಂಡನ್ ನಲ್ಲಿರುವ ಪಾಕಿಸ್ತಾನಿಗಳ ಸಮೂಹ ತುಂಬು ಹೃದಯದ ಬೆಂಬಲ ನೀಡಿದೆ. ಇದರಿಂದಾಗಿ ಕನ್ನಡಿಗರ ಮತ್ತು ಭಾರತೀಯರ ಹೃದಯ ತುಂಬಿಬಂದಂತಾಗಿದೆ.
ತೋಹಾ ಕುರೇಶಿ ಅವರ ನೇತೃತ್ವದಲ್ಲಿ ಲ್ಯಾಂಬೆತ್ ನ ಮೇಯರ್ ಕನ್ನಡಿಗ ಡಾ. ನೀರಜ್ ಪಾಟೀಲ್ ಅವರನ್ನು ಭೇಟಿ ಮಾಡಿದ ಪಾಕಿಸ್ತಾನಿ ನಾಗರಿಕರು ತಮ್ಮ ಬೆಂಬಲ ಪತ್ರವನ್ನು ಸರ್ವರ ಸಮ್ಮುಖದಲ್ಲಿ ನೀಡಿ ಅಚ್ಚರಿ ನೀಡಿದರು. ಪುತ್ಥಳಿಯನ್ನು ವಾಕ್ಸ್ ಹಾಲ್ ಸ್ಪ್ರಿಂಗ್ ಗಾರ್ಡನ್ ನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕುರೇಶಿ ಅವರು, "ಪಾಕಿಸ್ತಾನ ಮತ್ತು ಭಾರತಕ್ಕೆ ಬಸವೇಶ್ವರ ಎಂದಿಗೂ ಪ್ರಸ್ತುತ. 1948ಕ್ಕೂ ಹಿಂದೆ ಎರಡೂ ರಾಷ್ಟ್ರಗಳು ಒಂದಾಗಿದ್ದಾಗ, ಪ್ರಜಾಪ್ರಭುತ್ವವನ್ನು ಸ್ಥಾಪಿಸಲು ಶ್ರಮಿಸಿದ ನಿಸ್ವಾರ್ಥ ವ್ಯಕ್ತಿಯ ಪ್ರತಿಮೆ ಸ್ಥಾಪನೆಯಾಗುತ್ತಿರುವುದು ಬಹಳ ಮಹತ್ವದ್ದು. ಪ್ರತಿಮೆ ಸ್ಥಾಪನೆಗೆ ಬೆಂಬಲ ನೀಡುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯ" ಎಂದರು.
ಭಯೋತ್ಪಾದನೆ ವಿರುದ್ಧ ನಡೆಸಿದ ಚಳವಳಿ ಮತ್ತು ಸೇವೆಗಾಗಿ ಕುರೇಶಿ ಅವರು 2010ರ ಜನವರಿಯಲ್ಲಿ ರಾಣಿ ಎಲಿಜಬೆತ್ ರಿಂದ ಗೌರವಕ್ಕೆ ಪಾತ್ರರಾಗಿದ್ದರು. ಪ್ರಸ್ತುತ, ಲ್ಯಾಂಬೆತ್ ಕೌನ್ಸಿಲ್ ನಿಂದ ಅನುಮತಿಗಾಗಿ ಬಸವಣ್ಣನ ಪ್ರತಿಮೆ ಕಾದಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications