ಶ್ರೇಷ್ಠವಾದದ್ದು ಪಾರ್ಲಿಮೆಂಟ್ ಅಲ್ಲ ಸಂವಿಧಾನ

ಸರಕಾರ ಜನರಿಂದ ಚುನಾಯಿಸಲ್ಪಟ್ಟ ಪಾರ್ಲಿಮೆಂಟ್ ಪರಮಶ್ರೇಷ್ಠ ಮತ್ತು ಕಾನೂನನ್ನು ಮಾಡುವದು ಕೇವಲ ಪಾರ್ಲಿಮೆಂಟ್ನ ಕೆಲಸ. ಕೆಲವು ಸ್ವಘೋಷಿತ ಸಿವಿಲ್ ಸೊಸೈಟಿಯ ಪ್ರತಿನಿಧಿಗಳದ್ದಲ್ಲ ಎಂದು ಪದೇ ಪದೇ ಹೇಳುತ್ತ ಅಣ್ಣಾ ಹಜಾರೆಯವರ ಆಂದೋಲನವನ್ನು ಕಡೆಗಾಣಿಸುವ ಪ್ರಯತ್ನ ಮಾಡುತ್ತಿದೆ. ಆದರೆ ನಿವೃತ್ತ ಅಟಾರ್ನಿ ಜನರಲ್ ಸೊಲಿ ಸೊರಾಬ್ಜಿ ಅವರ ಪ್ರಕಾರ, ಪರಮ ಶ್ರೇಷ್ಠವಾದದ್ದು ಸಂವಿಧಾನ. ಪಾರ್ಲಿಮೆಂಟ್ ಅಲ್ಲ, ಸಂವಿಧಾನ We the people ಎಂದು ಆರಂಭವಾಗುತ್ತದೆ. ಆದ್ದರಿಂದ ಜನರಿಗಾಗಿ ಮಾಡಲ್ಪಟ್ಟ ನೀತಿ ಸಂಹಿತೆಯಾದ ಸಂವಿಧಾನ ಕೂಡ ಜನರ ಆಶೋತ್ತರಗಳನ್ನು ಕಡೆಗಾಣಿಸುವದನ್ನು ಸಹಿಸುವದಿಲ್ಲ ಎಂದು ತಿಳಿಯಬಹುದು. ಕರ್ನಾಟಕದ ಪ್ರಖ್ಯಾತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕೂಡ ಅಣ್ಣಾ ಹಜಾರೆಯವರ ಆಂದೋಲನ ಸಂವಿಧಾನಕ್ಕನುಗುಣವಾಗಿದೆ ಮತ್ತು ಅದಕ್ಕೆ ಅವರ ಬೆಂಬಲವಿದೆ ಎಂದು ಹೇಳಿದ್ದಾರೆ.
ಸಂವಿಧಾನ ಜನಮನದ ಪಾಲನೆ ಮತ್ತು ರಕ್ಷಣೆಗಾಗಿ ಮಾಡಲ್ಪಟ್ಟಿದೆ. ಆ ಸಂವಿಧಾನದ ರಕ್ಷಕರೇ ಭಕ್ಷಕರಾದಾಗ, ಅದೇ ಜನಮನ ಸರಕಾರದ ಕಿವಿ ಹಿಡಿದು ಸರಿದಾರಿಗೆ ಕರೆದೊಯ್ಯುವದು ಹೇಗೆ ತಪ್ಪು? ಭ್ರಷ್ಟಾಚಾರವನ್ನು ಮಟ್ಟ ಹಾಕುವ ಯಾವ ಮಂತ್ರದಂಡವೂ ತಮ್ಮಲ್ಲಿಲ್ಲ ಎಂಬ ಅಸಹಾಯಕತೆಯನ್ನು ಪ್ರದರ್ಶಿಸುವ ಸರಕಾರ ಜನರೆಲ್ಲ ಒಪ್ಪುವಂತಹ ವಿಕಲ್ಪವನ್ನು ಮುಂದಿಟ್ಟಾಗ ಅದನ್ನು ಪರಾಮರ್ಶಿಸುವ ಗೋಜಿಗೂ ಹೋಗದೆ ಸಾರಾಸಗಟಾಗಿ ನಿರಾಕರಿಸುತ್ತಿದೆಯೇಕೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ದೊರಕದಿರುವದರಿಂದ ಮತ್ತು ಅಣ್ಣಾ ಹಜಾರೆ ಮಾತ್ರ ಒಂದು ವೈಕಲ್ಪಿಕ ಶಕ್ತಿಯಾಗಿ ಕಾಣಿಸುತ್ತಿರುವದರಿಂದ ಅವರಿಗೆ ಇಂತಹ ಅಭೂತ ಪೂರ್ವ ಜನ ಬೆಂಬಲ ದೊರಕುತ್ತಿದೆ.
ಕೆಲವು ರಾಜಕೀಯ ನೇತಾರರು ಅಣ್ಣಾ ಹಜಾರೆ ಅವರ ಆಂದೋಲನ ವಿಪಕ್ಷ ಮತ್ತು ಅವರ ಸಹಯೋಗಿ ಸಂಸ್ಥೆಗಳಿಂದ ಏರ್ಪಟ್ಟ ರಾಜಕೀಯ ತಂತ್ರ ಎಂದು ಬಣ್ಣಿಸಿ ಈ ಜನಾಂದೋಲನಕ್ಕೆ ರಾಜಕೀಯದ ಕೆಸರೆರಚಲು ಪ್ರಯತ್ನಿಸಿದ್ದಾರೆ. ಆದರೆ ಆಂದೋಲನದಲ್ಲಿ ಭಾಗವಹಿಸುತ್ತಿರುವ ಎಲ್ಲಾ ತರಹದ ಸಾಮಾನ್ಯ ಜನರನ್ನು ನೋಡಿದಾಗ ಈ ಹೇಳಿಕೆ ಅದೆಷ್ಟು ಸುಳ್ಳು ಎಂದು ಅರಿವಾಗುತ್ತದೆ. ಸಣ್ಣ ಕೂಸೊಂದನ್ನು ಎತ್ತಿಕೊಂಡು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ಮಹಿಳೆಯೊಬ್ಬಳು ನಮ್ಮಈ ಹೋರಾಟ ನಮಗಾಗಿ ಅಲ್ಲ. ಜನ ಲೋಕಪಾಲ ಕಾನೂನಿನಿಂದ ಸದ್ಯದಲ್ಲಿಯೇ ಮಹತ್ವದ ಬದಲಾವಣೆಯಾಗುತ್ತದೆ ಎಂದೇನು ನಾನು ಆಶಿಸಿಲ್ಲ. ಆದರೆ ಈಗ ಆರಂಭವಾದ ಈ ಹೋರಾಟ, ನಮ್ಮ ಮಕ್ಕಳ ಭವಿಷ್ಯದಲ್ಲಿ ಮಹತ್ವದ ಬದಲಾವಣೆ ತರುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದು ಜನತೆಯ ಸದ್ಯದ ಮನೋಸ್ಥಿತಿಯನ್ನು ಎತ್ತಿ ತೋರಿಸುತ್ತದೆ.
ಮಹಿಳೆ ಹೇಳಿದಂತೆ ಈ ಆಂದೋಲನದಿಂದ ಅಥವಾ ಜನಲೋಕಪಾಲ ಕಾನೂನಿನಿಂದ ಯಾವದೇ ತಕ್ಷಣದ ಬದಲಾವಣೆ ಆಗಲಿಕ್ಕಿಲ್ಲ. ಆದರೆ ಹೊರಾಟ ದಶಕಗಳಿಂದ ಸತಾಯಿಸಲ್ಪಟ್ಟ, ತುಳಿಯಲ್ಪಟ್ಟ ಮತ್ತು ನಿರ್ಲಕ್ಷ್ಯಕ್ಕೊಳಗಾದ ಜನರ ಆಕ್ರೋಶದ ಪ್ರತೀಕವಾಗಿದೆ. ಈ ಹೋರಾಟ ತನ್ನ ಸದ್ಯದ ಗುರಿಯನ್ನು ತಲುಪಲೇಬೇಕು. ಗುರಿ ತಲುಪಿ ಅಲ್ಲಿಗೆ ನಿಲ್ಲುವಂತಿಲ್ಲ. ಸದಾ ಕಾಲ ಆಳುವ ಜನಪ್ರತಿನಿಧಿಗಳ ಮತ್ತು ಸರಕಾರಿ ಉದ್ಯೋಗಿಗಳ ಮೇಲೆ ಕಣ್ಣಿಡುವ ಒಂದು ನೀತಿ ಸಂಹಿತೆ, ಪ್ರಣಾಳಿಕೆ ಮತ್ತು ಅದನ್ನು ಜಾರಿಗೊಳಿಸುವ ಮಾಧ್ಯಮದ ಉಪಸ್ಥಿತಿ ಅತ್ಯಗತ್ಯ. ಆದರೆ ಈ ಹೋರಾಟ ನಿಂತು ಹೋದರೆ ನಾವೊಂದು ಅರಾಜಕ ದೇಶ(Banana Republic)ವಾಗಿ ಮಾರ್ಪಟ್ಟು, ನಮ್ಮ ಮುಂದಿನ ಪೀಳಿಗೆಗಳ ಭವಿಷ್ಯ ಅತ್ಯಂತ ಕರಾಳವಾಗುವುದರಲ್ಲಿ ಸಂಶಯವಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications