ಕನ್ನಡನಾಡಿನ ಚಿನ್ನದ ರಾಜ - ಅಮೋಘವರ್ಷ ನೃಪತುಂಗ

ಅಮೋಘವರ್ಷ ನೃಪತುಂಗ! - ಈ ಹೆಸರಿನಲ್ಲಿಯೇ ಕನ್ನಡಿಗರ ಮೈನವಿರೇಳಿಸುವ ದಿವ್ಯ ಶಕ್ತಿಯಿದೆ! ಕನ್ನಡಿಗರ ಸಾಹಸ, ಸಾಮರ್ಥ್ಯ, ಸಹನೆ, ಸೌಹಾರ್ದ, ಸಂಸ್ಕೃತಿಗೆ ಸಂಕೇತವಾಗಿ ನಿಲ್ಲುತ್ತದೆ ಈ ಧೀರ ದೊರೆಯ ಸುಂದರ ಹೆಸರು! ಈತನ ಕನ್ನಡ ಪ್ರೇಮ ಅಪಾರ. ತರಾಸು ಅವರು ಚಿತ್ರದುರ್ಗದ ಇತಿಹಾಸವನ್ನು ತಮ್ಮ ಕಾದಂಬರಿಗಳಿಂದ ಕಣ್ಣೆದುರು ನಿಲ್ಲಿಸಿದಂತೆ, ಕನ್ನಡ ಮಣ್ಣಿನ ಹೆಮ್ಮೆಯ ಮಗನಾದ "ಅಮೋಘವರ್ಷ" ಬಾಳಿಬದುಕಿದ ಬಗೆಯನ್ನು ಯಾರಾದರೂ ಕಾದಂಬರಿಯಾಗಿಸಿದ್ದಾರೆಯೇ ಎಂದು ಕುತೂಹಲದಿಂದ ಅರಸುತ್ತಿದ್ದ ನನ್ನ ಪ್ರಯತ್ನಕ್ಕೆ ಈವರೆಗೆ ಫಲ ದೊರಕಿರಲಿಲ್ಲ. ಈ ಕುರಿತು ಯಾವುದಾದರೂ ಕಾದಂಬರಿ ಈ ಹಿಂದೆ ಬಂದಿದೆಯೇ ಇಲ್ಲವೋ ತಿಳಿಯದು. ಆದರೆ, ಹಲವಾರು ಉತ್ತಮ ನಾಟಕಗಳನ್ನು ನಿರ್ದೇಶಿಸಿ, 'ಕರ್ನಾಟಕದ ರಾಜಮನೆತನಗಳು" ಎನ್ನುವ ಲೇಖನಮಾಲೆಯನ್ನು ವಿದ್ಯಾರಣ್ಯ ಕನ್ನಡಕೂಟದ 'ಸಂಗಮ" ಪತ್ರಿಕೆಯಲ್ಲಿ ಪ್ರಕಟಿಸಿ, ಶಿಕಾಗೊ ಕನ್ನಡಿಗರೆಲ್ಲರಿಗೂ ಚಿರಪರಿಚಿತರಾಗಿರುವ ಪ್ರಕಾಶ್ ಹೇಮಾವತಿಯವರು ಆ ಬಗ್ಗೆ ಕಾದಂಬರಿಯೊಂದನ್ನು ಹೊರತರುವ ಪ್ರಯತ್ನದಲ್ಲಿದ್ದಾರೆಂದು ತಿಳಿದಾಗ ಬಹಳ ಸಂತೋಷವಾಗಿತ್ತು. ಇದೀಗ ಪ್ರಕಾಶ್ ಹೇಮಾವತಿಯವರ ಬಹುವರ್ಷಗಳ ಅಧ್ಯಯನ, ಆಶಯಗಳ ಫಲವೇ 'ಅಮೋಘವರ್ಷ" ಕಾದಂಬರಿಯ ರೂಪದಲ್ಲಿ ಹೊರಬಂದಿದೆ. ಐಬಿಎಚ್ ಪ್ರಕಾಶನದವರು ಈ ಪುಸ್ತಕವನ್ನು ಪ್ರಕಟಿಸಿದ್ದಾರೆ.
ರಾಷ್ಟ್ರಕೂಟ ಅರಸನಾದ ಮೂರನೆಯ ಗೋವಿಂದನ ಮರಣದೊಂದಿಗೆ ಪ್ರಾರಂಭವಾಗುವ ಕಾದಂಬರಿ, ನಂತರ ಹಂತಹಂತವಾಗಿ ರಾಜ್ಯದಲ್ಲೇಳುವ ಬಂಡಾಯ, ಹದಿನಾಲ್ಕು ವರ್ಷದ ಬಾಲಕ ಅಮೋಘವರ್ಷನಿಗೆ ಅನಿವಾರ್ಯವಾಗುವ ಪಟ್ಟಾಭಿಷೇಕ, ರಾಜ್ಯಾಡಳಿತ, ರಾಜ್ಯವನ್ನು ಬಲಪಡಿಸಲು ನಡೆಯುವ ಕಾಳಗ, ಯುವರಾಜನ ವಿವಾಹ.... ಹೀಗೆ ಹಂತಹಂತವಾಗಿ ನೃಪತುಂಗ ದೊರೆಯ ಧೀರೋದಾತ್ತ ವ್ಯಕ್ತಿತ್ವವನ್ನು ನಮ್ಮ ಕಣ್ಣುಗಳೆದುರು ಕಟೆಯುತ್ತಾ ಹೋಗುತ್ತದೆ. ಪ್ರತಿ ಅಧ್ಯಾಯಕ್ಕೂ ಸೂಕ್ತ ಹೆಸರು ನೀಡಿ ಮಾಡಿರುವ ವಿಂಗಡಣೆ ನಮ್ಮ ಓದನ್ನು ಸುಗಮಗೊಳಿಸುತ್ತದೆ. ಕಾಲದ ಕರಿತೆರೆಯಲ್ಲಿ ಮುಚ್ಚಿಹೋಗಿರುವ ಇತಿಹಾಸವನ್ನು ಕಾಗದಕ್ಕಿಳಿಸುವುದು ಬಹಳ ಕಷ್ಟದ ಕೆಲಸ. ಎಂದೋ ನಡೆದ ಘಟನೆಗಳನ್ನು ಕಲ್ಪನೆಯ ಎಳೆಯಲ್ಲಿ ಸೇರಿಸಿ, ಹೆಣೆಯಬೇಕಾಗುತ್ತದೆ. ಸಿಕ್ಕಿಲ್ಲದ, ತೊಡರಿಲ್ಲದ ಸುಸೂತ್ರ ಓದನ್ನು ಓದುಗರಿಗೆ ಒದಗಿಸುವ ಚಾತುರ್ಯ ಲೇಖಕನಿಗೆ ಇರಬೇಕಾಗುತ್ತದೆ. ಕೆಲವೊಮ್ಮೆ ಕಲ್ಪನೆಗಳ ಬಣ್ಣವೇ ಹೆಚ್ಚಾಗಿ ಸೇರಿ ನೈಜ ಚಿತ್ರವೇ ಮಸುಕಾಗುವ ಸಾಧ್ಯತೆಗಳಿರುತ್ತವೆ. ಆದರೆ ಈ ಕಾದಂಬರಿಯಲ್ಲಿ ಕಲ್ಪನೆಗಿಂತ ಇತಿಹಾಸಕ್ಕೆ ಒತ್ತುಕೊಟ್ಟಿರುವುದನ್ನು ಗಮನಿಸಬಹುದು. [ಓದಲೇಬೇಕಾದ ಕಾದಂಬರಿ...]
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications