ಕನ್ನಡಿಗರೆಲ್ಲರೂ ಓದಲೇಬೇಕಾದ ಅಪೂರ್ವ ಕಾದಂಬರಿ

ಸಾಮ್ರಾಜ್ಯದಲ್ಲಿ ಶಾಂತಿ ನೆಲೆಸಿದ್ದಾಗ ತನ್ನಷ್ಟಕ್ಕೆ ತಾನು ಮರವೊಂದರ ಮೇಲೆ ವಿರಾಜಮಾನವಾಗಿರುವ ಗರುಡ, ಆಡಳಿತಕ್ಕೆ ಯಾವುದೇ ವಿಪತ್ತು ಬಂದೆರಗಲಿರುವುದನ್ನು ಮುಂದಾಗಿ ಗ್ರಹಿಸಿ ತಲ್ಲಣಗೊಳ್ಳುತ್ತಾ, ಆಕ್ರಮಣಕಾರಿ ವರ್ತನೆಯನ್ನು ತೋರುತ್ತಾ ರಾಜಧಾನಿಯಲ್ಲಾಗುವ ಪರಿವರ್ತನೆಯ ಭವಿಷ್ಯ ಸೂಚಿಯಾಗಿ ಕಾಣಿಸಿಕೊಳ್ಳುವ ತಂತ್ರವನ್ನು ಲೇಖಕರು ಕಾದಂಬರಿಯುದ್ದಕ್ಕೂ ಅನುಸರಿಸಿದ್ದಾರೆ. ಶಾಂತಿಪ್ರಿಯ ರಾಜನಾದ ಅಮೋಘವರ್ಷನು ರಾಷ್ಟ್ರಕೂಟ ಸಾಮ್ರಾಜ್ಯದ ಸಾರ್ವಭೌಮತೆಗೆ ಧಕ್ಕೆಯೊದಗುವ ಸಂದರ್ಭದಲ್ಲಿ ಅನಿವಾರ್ಯವಾಗಿ ಕದನಗಳನ್ನು ಕೈಗೊಳ್ಳಬೇಕಾಗುತ್ತದೆ. ಆ ಯುದ್ಧಗಳಲ್ಲಿ ಅವನು ಅನುಸರಿಸಿರುವ ಯುದ್ಧತಂತ್ರಗಳ ಬಗೆಗಿನ ವಿವರಣೆ ಕಾದಂಬರಿಯಲ್ಲಿ ಸೊಗಸಾಗಿ ಮೂಡಿಬಂದಿದೆ.
ಕರ್ನಾಟಕದ ಪ್ರಸಿದ್ಧ ಇತಿಹಾಸಕಾರರಾಗಿರುವ ಸೂರ್ಯನಾಥ್ ಕಾಮತ್ ಅವರು ಈ ಕಾದಂಬರಿಗೆ ಮುನ್ನುಡಿ ಬರೆದಿದ್ದಾರೆ. ಕಾದಂಬರಿಯಲ್ಲಿ ಉಲ್ಲೇಖಿಸಿರುವ ಕೆಲವು ಐತಿಹಾಸಿಕ ವಿವರಗಳ ಬಗೆಗೆ ತಮಗಿರುವ ಭಿನ್ನಾಭಿಪ್ರಾಯವನ್ನು ನಯವಾಗಿ ತೋರಿಸಿಕೊಟ್ಟಿರುವ ಕಾಮತ್, "ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಪ್ರಕಾಶ್ ಹೇಮಾವತಿಯವರು, ಇತಿಹಾಸ ಅಧ್ಯಾಪಕರಿಗೂ ತಿಳಿದಿರದ ಹೊಸ ಅಂಶಗಳನ್ನು ಲೇಖಕರು ಇಲ್ಲಿ ಹೇಳಿದ್ದು ಮೆಚ್ಚಿಗೆಯ ವಿಷಯ. ಅರವತ್ತನಾಲ್ಕು ವರ್ಷ ಆಳಿದ ವೀರನೂ, ವಿದ್ವಾಂಸನೂ, ಧಾರ್ಮಿಕನೂ, ಪಂಡಿತಾಶ್ರಯನೂ, ಜನಪರ ರಾಜನೂ ಆದ ಚಕ್ರವರ್ತಿಯ ಸಾಧನೆಯನ್ನು ಈ ಕೃತಿಯಲ್ಲಿ ಸೆರೆಹಿಡಿವ ಯತ್ನ ಬಹುಮಟ್ಟಿಗೆ ಯಶಸ್ವಿಯಾಗಿದೆ. ಲೇಖಕರು ವಿದೇಶದಲ್ಲಿ ಇದ್ದು ಮಾಡಿದ ಸಾಧನೆ ಇದು!" ಎಂದು ತುಂಬು ಹೃದಯದಿಂದ ಶ್ಲಾಘಿಸಿದ್ದಾರೆ.
ಒಟ್ಟಿನಲ್ಲಿ, ಐತಿಹಾಸಿಕ ಕಾದಂಬರಿಗಳು ಅಪರೂಪವಾಗುತ್ತಿರುವ ಈ ಹೊತ್ತಿನಲ್ಲಿ, ಇತಿಹಾಸದಲ್ಲಿ ತನ್ನ ಹೆಜ್ಜೆಗುರುತುಗಳನ್ನು ಶಾಶ್ವತವಾಗಿ ಉಳಿಸಿಹೋಗಿರುವ ಕನ್ನಡದ ಹೆಮ್ಮೆಯ ದೊರೆ ಅಮೋಘವರ್ಷನ ಕುರಿತು ಈ ಕಾದಂಬರಿ ಹೊರಬಂದಿರುವುದು ಕನ್ನಡಿಗರೆಲ್ಲರಿಗೂ ಸಂತೋಷದ ವಿಷಯವೇ ಸರಿ. "ಅಂಗ, ವಂಗ, ಮಗಧ, ಮಾಳವ ಮತ್ತು ವೆಂಗಿ ಅರಸರಿಂದ ಅತಿಶಯಧವಳ ಎನ್ನುವ ಬಿರುದಾಂಕಿತನಾಗಿ ಪೂಜಿಸಲ್ಪಡುತ್ತಿದ್ದು, ಕನ್ನಡನಾಡು, ನುಡಿ, ಸಾಹಿತ್ಯ ಮೇರು ಶೃಂಗದಲ್ಲಿ ರಾರಾಜಿಸುವುದಕ್ಕೆ ಭದ್ರಬುನಾದಿ ರೂಪಿಸಿದ ಕನ್ನಡ ಕುಲ ಚಕ್ರವರ್ತಿ, ರಟ್ಟ ಮಾರ್ತಾಂಡ ಅಮೋಘವರ್ಷ ನೃಪತುಂಗ ದೇವನಿಗೆ" ಅರ್ಪಣೆಯಾಗಿರುವ ಈ ಕಾದಂಬರಿಯನ್ನು, ಕನ್ನಡಿಗರೆಲ್ಲರೂ ಓದಿ ಆನಂದಿಸಿ, ತಮ್ಮ ದಿವ್ಯ, ಭವ್ಯ ಪರಂಪರೆಯ ಬಗ್ಗೆ ಹೆಮ್ಮೆಪಡುವಂತಾಗಲಿ ಎಂದು ಹಾರೈಸುತ್ತೇನೆ.
ಕಾದಂಬರಿ : ಅಮೋಘವರ್ಷ
ಲೇಖಕರು : ಪ್ರಕಾಶ್ ಹೇಮಾವತಿ
ಪ್ರಕಾಶನ : ಐಬಿಎಚ್ ಪ್ರಕಾಶನ
ಬೆಲೆ : ನೂರು ರೂಪಾಯಿಗಳು
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications