ಸಾಹಿತ್ಯ ರಂಜನೆ ಚಿಂತನೆಯ 'ಸಂಗಮ'!
ವಿದ್ಯಾರ್ಥಿ ಸಮಾವೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಡಾ ಪುತ್ತೂರಾಯ ಮತ್ತು ಭುವನೇಶ್ವರಿ ಹೆಗಡೆಯವರು ಸಭಿಕರನ್ನು ಹಾಸ್ಯಲೋಕದಲ್ಲಿ ತೇಲಾಡಿಸಿದರು. ರೆಬೆಲ್ ಸ್ಟಾರ್ ಅಂಬರೀಶ್, ಸುಮಲತಾ, ರಮ್ಯ, ದೊಡ್ಡರಂಗೇ ಗೌಡ, ಶ್ರೀನಾಥ್, ಹಂಸಲೇಖ ಮೊದಲಾದವರು ಸ್ಟಾರ್ ನೈಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೇಕ್ಷಕರನ್ನು ರಂಜಿಸಿದರು.
ಎರಡನೆ ದಿನದ ಕಾರ್ಯಕ್ರಮದ ಸಾಹಿತ್ಯ ಘೋಷ್ಠಿಯಲ್ಲಿ ಹಿರಿಯ ಕವಿಗಳಾದ ಪಾವಗಡ ಪ್ರಕಾಶ್ ರವರು ಕರ್ನಾಟಕ ವೈಭವ ಎಂಬ ವಿಚಾರ ಮಂಡನೆ ಮಾಡಿದರು. ದೊಡ್ಡರಂಗೇ ಗೌಡರು ಕನ್ನಡದ ಹಿರಿಮೆಯ ಬಗ್ಗೆ, ಪುತ್ತೂರಾಯರು ಕರ್ನಾಟಕದ ಮೇಲೆ ಜಾಗತೀಕರಣದ ಆಗಿರುವ ಪರಿಣಾಮದ ಕುರಿತು ಚರ್ಚಿಸಿದರು. ಸ್ಪಂದನ ತಂಡದಿಂದ ಹಚ್ಚೇವು ಕನ್ನಡ ದೀಪ ಹಾಡುಗಳು ಕನ್ನಡಿಗರನ್ನು ರೋಮಾಂಚನಗೊಳಿಸಿದವು. ಡಾ ರಮ್ಯ ಮೋಹನ್ ಮತ್ತು ತಂಡ ಸ್ಥಳೀಯ ಪ್ರತಿಭೆಯವರ ಹಾಡುಗಳು ಪ್ರೇಕ್ಷಕರಿಗೆ ಸಂತಸ ತಂದವು. ಡಾ ಬಾಲಕೃಷ್ಣ ಗುರುಜಿಯವರ ಪುನರ್ಜನ್ಮದ ವಿಚಾರ ಪ್ರೇಕ್ಷಕರ ಚಿಂತನೆಗೆ ಆಹಾರವಾಯಿತು. ದೇವಿಕ ರಾವ್ ರವರು ಭರತನಾಟ್ಯ ಮತ್ತು ಡಾ ಬೆನಕ ಕಾರಂತ್ ಮತ್ತು ದೇವಿಕ ಯಕ್ಷಗಾನ ಪ್ರದರ್ಶಿಸಿದರು. ಎರಡನೆ ದಿನ ಕೊನೆಯವರೆಗೆ ಪ್ರೇಕ್ಷಕರು ಕುಳಿತಿದ್ದುದು ಸಮ್ಮೇಳನದ ಯಶಸ್ಸನ್ನು ಪ್ರಕಟಿಸುತ್ತದೆ.
ಕರ್ನಾಟಕದಿಂದ ಬಂದ ಪ್ರತಿಭೆಗಳಾದ ಬದರಿ ಪ್ರಸಾದ್, ದೇವ ಎಲ್ಲ ಪ್ರೇಕ್ಷಕರನ್ನು ಆಕರ್ಷಿಸಿದರು. ಪುಟಾಣಿ ಸಾನಿಯ ಅಯ್ಯರ್ ಎಲ್ಲರ ಮೆಚುಗೆಗೆ ಕಾರಣರಾದರು. ಹಂಸಲೇಖರವರ ಸಾಹಿತ್ಯ ಚಿಂತನೆ ಪ್ರೇಕ್ಷಕರನ್ನು ಚಿಂತನೆಗೆ ದೂಡಿತು. ಒಟ್ಟಿನಲ್ಲಿ ಇಂತಹ ಒಂದು ದೊಡ್ಡ ಸಮ್ಮೇಳನ ಲಂಡನ್ನಿನಲ್ಲಿ ನಡೆದದ್ದು ಕನ್ನಡಿಗರ ಹೆಮ್ಮೆ. ಇಷ್ಟು ಅಲ್ಪಾವಧಿಯಲ್ಲಿ ಇಂತಹ ಕಾರ್ಯಕ್ರಮ ಯಶಸ್ಸು ಸಂಗಮ ಸಂಸ್ಥೆಯ ದೂರ ದೃಷ್ಟಿಯನ್ನು ಪ್ರಕಟಿಸುತ್ತದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್













Click it and Unblock the Notifications