ರಾಜ್ಯೋತ್ಸವ ನಿಮಿತ್ತ ಒಂದಾದ ಅಡಿಲೈಡ್ ಕನ್ನಡಿಗರು

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಪುಟಾಣಿಗಳು, ಆ ಪುಟಾಣಿಗಳ ಅಮ್ಮ-ಅಪ್ಪಂದಿರು, ಕಾರ್ಯಕ್ರಮ ಆಯೋಜಿಸಿದವರು, ಪ್ರಾಯೋಜಕರು ಹೀಗೆ ಎಲ್ಲರೂ ಸಂಭ್ರಮದಿಂದ ಓಡಾಡುತ್ತಿದ್ದುದು ಶುರುವಾಗಿದ್ದು ಸರಿ ಸಂಜೆ 5.30ಕ್ಕೆ. ಅಲ್ಲಿಂದ ಸುಮಾರು 3 ಗಂಟೆಗಳ ಕಾಲ ನಿರಂತರ ಮನರಂಜನೆ. ಕೃಷ್ಣಪ್ರಸಾದ್ ಹಾಗೂ ಸಂಗಡಿಗರು ಮೊದಲಿಗೆ ಕನ್ನಡ ನಾಡಗೀತೆ ಹಾಡಿದರು ಹಾಗೂ ಪ್ರಮುಖ ಪ್ರಾಯೋಜಕರಾದ ANZ ಬ್ಯಾಂಕಿನ ಕನ್ವಲ್ ಸಿಂಗ್ ಅವರ ಜ್ಯೋತಿ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೀಪ ಬೆಳಗುವಿಕೆಯ ಸಂದರ್ಭದಲ್ಲಿ ಪುಟಾಣಿ ದಿಶಾ 'ಹಚ್ಚೇವು ಕನ್ನಡದ ದೀಪ' ಎಂದು ಸುಂದರವಾಗಿ ಹಾಡಿದ್ದು ಜನರ ಸೆಳೆಯಿತು.
ಅಡಿಲೈಡ್ ಕನ್ನಡ ಸಂಘದ ಅಧ್ಯಕ್ಷರಾದ ಮಂಜುನಾಥ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಭಿಕರ ಸಹಕಾರ ಹಾಗೂ ಕಾರ್ಯಕಾರಿಣಿ ಸದಸ್ಯರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹೇಗೆ ಆಯೋಜಿತವಾಯಿತು ಎಂದು ವಿವರಿಸಿದರು. ಕುಮಾರಿ ಸೃಜಲಾ ಹಾಗೂ ಕುಮಾರ್ ವೈಭವ್ ಕ್ರಮವಾಗಿ 'ವಿಶ್ವ ವಿನೂತನ' ಹಾಗೂ 'ನಾವಾಡುವ ನುಡಿಯೇ ಕನ್ನಡ ನುಡಿ' ಹಾಡುಗಳನ್ನು ಹಾಡಿ ಮನ ರಂಜಿಸಿದರು. ಇದರ ಮಧ್ಯೆಯೇ ಅಪುರ್ವಾ ಹಾಗೂ ನಿತ್ಯಾ ತಮ್ಮ 'ಹಕ್ಕಿಯ ಹೆಗಲೇರಿ ಬಂದವಗೆ' ಸೆಮಿ ಕ್ಲಾಸಿಕಲ್ ಡಾನ್ಸ್ ಪ್ರದರ್ಶಿಸಿದರು.
ರೂಪ ಹಾಗೂ ಸಂಗಡಿಗರು ಶಂಕರ್ ಮಹಾದೇವನ್ ರವರ 'ಗಣೇಶ ಧೀಮಹಿ' ಸುರುಳಿಗೆ ಸುಂದರವಾಗಿ ನರ್ತಿಸಿದರು. ಅಡಿಲೈಡ್ ನ ಕನ್ನಡ ಬಳಗದ ಮಹಿಳೆಯರಿಂದ ನಡೆದ ಈ ನೃತ್ಯ ಸಂಯೋಜನೆ ಸಭಿಕರಿಂದ ಶ್ಲಾಘಿಸಲ್ಪಟ್ಟಿತು. ಗಣೇಶನ ಬೆನ್ನಲ್ಲೇ ಬಂದದ್ದು ರಘು ಹಾಗೂ ವಿನುತಾ ಸಂಯೋಜಿಸಿದ ನೃತ್ಯ ಪ್ರದರ್ಶನ 'ಶಂಕರ ಶಶಿಧರ'. ತುಂಬಾ ಸ್ಪಷ್ಟವಾಗಿ ಗೋಚರಿಸಿದ ಮಾತೆಂದರೆ ಈ ಸಲ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯ್ಕೆ ಹಾಗೂ ಗುಣಮಟ್ಟ ಕಳೆದೆರಡು ವರ್ಷಗಳಿಗೆ ಹೋಲಿಸಿದರೆ ಉತ್ತಮವಾಗಿತ್ತು. ಹಾಡುಗಾರರಾದ ಉಮೇಶ್ ನಾಗಸಂದ್ರಾ, ಸುನಿಲ್ ಮತ್ತು ವೀಣಾ ಶೇಖರ್ ಅವರು 'ಅವರು ತರವಲ್ಲ ತಗಿ ನಿನ್ನ ತಂಬೂರಿ ಸ್ವರ', 'ಕನ್ನಡದ ಮಕ್ಕಳೆಲ್ಲ ಒಂದಾಗಿ ಬನ್ನಿ' ಹಾಗೂ 'ನಧೀಂ ಧೀಂ ತನ' ಹಾಡುಗಳನ್ನ ಕರಾಓಕೆ ಶೈಲಿಯಲ್ಲಿ ಸುಂದರವಾಗಿ ಹಾಡಿದರು. ಜನಪದ ನೃತ್ಯವಾದ 'ಬೇಡಗರ ನಂಜುಂಡ' ನೃತ್ಯವನ್ನು ವಿನಯ ರೈ ಅವರ ಸಂಯೋಜನೆಯಲ್ಲಿ ಕುಮಾರಿ ಅಶ್ವಿನಿ, ಅಪೂರ್ವಾ, ಹಾಗೂ ನಿತ್ಯಾ ನೆರವೇರಿಸಿಕೊಟ್ಟರು.
ಇದೆಲ್ಲ ಜಾನಪದ, ಸಾಂಸ್ಕೃತಿಕದ ಮಾತಾದರೆ, ಆಧುನಿಕ ಜಗತ್ತಿನ ಧೂಮ್ ಧಡಾಕಾ ಹಾಡುಗಳು ಹಾಗೂ ನೃತ್ಯಗಳೂ ಪ್ರದರ್ಶಿಸಲ್ಪಟ್ಟವು. ಯುವ ಜನಾಂಗದ ಇಷ್ಟದ ಪ್ರಕಾರ ಸೂಪರ್ ಹಿಟ್ ಹಾಡುಗಳಾದ 'ನಿದ್ದೆ ಬಂದಿಲ್ಲ', 'ಬಿಂದಾಸ್' ಹಾಡುಗಳಿಗೆ ಪುಟಾಣಿಗಳಾದ ಭೂಮಿಕ, ಸೃಜಲ, ಗೌತಮಿ, ಅನುಜ, & ರೋಹನ್ ಹೆಜ್ಜೆ ಹಾಕಿ ತಮ್ಮ ಮೋಹಕ ನಡೆಗಳಿಂದ ಆಕರ್ಷಿಸಿದವು. ನಂತರ ಕನ್ನಡ ಚಲನಚಿತ್ರದ ಇನ್ನೊಂದು ಸೂಪರ್ ಹಿಟ್ ಹಾಡಾದ 'ನಾ ಸೂಪರು ರಂಗ' ಹಾಗೂ ಕೆಲ ಫ್ಯೂಶನ್ ಹಾಡುಗಳಿಗೆ ಅಡಿಲೈಡ್ ನ ಪುಟಾಣಿಗಳು ಹೆಜ್ಜೆ ಹಾಕಿ ಮನ ರಂಜಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಕೊನೆಯಲ್ಲಿ ಮಂಜುನಾಥ್ & ಚಂದ್ರಶೇಖರ್ ಅವರು ಭಾಗವಹಿದ ಮಕ್ಕಳಿಗೆ ನೆನಪಿನ ಕಾಣಿಕೆಗಳನ್ನು ಕೊಟ್ಟು ಗೌರವಿಸಿದರು. ಶಿವಾನಂದ್ ತೋಟಗಿ ಅವರು ವಂದನಾರ್ಪಣೆ ಮಾಡಿದರು. ಎಲ್ಲರೂ ಸವಿಯಾದ ಭೋಜನ ಸವಿದು, ತಮ್ಮ ತಮ್ಮ ಮನೆಗಳಿಗೆ ಹೊರಟು ನಿಂತಾಗ ಸುಮಾರು ರಾತ್ರಿ 11 ಗಂಟೆ. ರಾಜ್ಯೋತ್ಸವದ ನಿಮಿತ್ತ ಎಲ್ಲಾ ಕನ್ನಡಿಗರು ಒಂದೆಡೆ ಸೇರಿ ಮನರಂಜನೆಯನ್ನೂ ಮಾಡಿಕೊಂಡು, ತಮ್ಮ ಮಿತ್ರ ವೃಂದವನ್ನು ಭೇಟಿಯೂ ಆಗಿ, ತಮ್ಮ ಬಿಡುವಿಲ್ಲದ ದೈನಂದಿನ ಕೆಲಸದ ಮಧ್ಯೆ ಸ್ವಲ್ಪ ಕಾಲ ಸುಧಾರಿಸಿಕೊಂಡು ವಿಹರಿಸುತ್ತಿದು ಕಂಡು ಬಂದಿದ್ದು ಮಾತ್ರ ಹೌದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications