ಹಾಲಿವುಡ್ ಬೆಟ್ಟದ ಕೆಳಗೆ ಕನ್ನಡ ಕಲರವ

ದಕ್ಷಿಣ ಕ್ಯಾಲಿಫೋರ್ನಿಯಾದ ಕರ್ನಾಟಕ ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಕನ್ನಡಿಗರು ಭಾಗವಹಿಸಿದ್ದರು. ಈ ಬಾರಿಯ ವಿಶೇಷವೆಂದರೆ ಪೂರ್ಣ ಕಾರ್ಯಕ್ರಮ ಮಕ್ಕಳಿಂದ ಪೂರ್ಣ ಕನ್ನಡದಲ್ಲಿ ನಡೆದಿದ್ದು ಹಾಗೂ 125ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು. ಅಲ್ಲದೇ ಕಾರ್ಯಕ್ರಮ “ಕರ್ನಾಟಕ ಚಾರಿತ್ರಿಕ, ಸಾಂಸ್ಕೃತಿಕ ಹಾಗೂ ಸ್ವಾಭಾವಿಕ ಮೈಲಿಗಲ್ಲು" ಎಂಬ ವಿಷಯದ ಆಧಾರದ ಮೇಲೆ ನಡೆಯಿತು.
ಮಕ್ಕಳು ತಲಕಾಡು, ಮೈಸೂರು, ಮಲೆನಾಡು, ಕೊಡಗು, ಚಿತ್ರದುರ್ಗ, ಹಾಸನ, ಕರಾವಳಿ ಪ್ರಾಂತಗಳ ಬಗ್ಗೆ ಕಾರ್ಯಕ್ರಮ ನಡೆಸಿಕೊಟ್ಟರಲ್ಲದೇ, ಜಾನಪದ ಹಾಡುಗಳಿಂದ ಜಾನಪದ ಲೋಕಕ್ಕೆ ಕರೆದುಕೊಂಡು ಹೋಗಿದ್ದರು. ಹೊಯ್ಸಳ ಸಾಮ್ರಾಜ್ಯದ ಪೂರ್ಣ ಇತಿಹಾಸವನ್ನೇ ಮಕ್ಕಳಿಂದ ಮಾಡಿಸಿ ಸೈ ಎನಿಸಿಕೊಂಡವರು ಶ್ರೀಧರ್ ರಾಜಣ್ಣನವರು. ವಾಣಿ ಶಿರೂರ್ ಅವರು ನೃತ್ಯ ಸಂಯೋಜಿಸಿ ಮಕ್ಕಳಿಂದ ನೃತ್ಯ ಮಾಡಿಸಿದ ಕರಾವಳಿ ಪ್ರಾಂತ್ಯದ ಕಾರ್ಯಕ್ರಮ ಜನರ ಮೆಚ್ಚುಗೆಗೆ ಪಾತ್ರವಾದರು. ತಲಕಾಡಿನ ಕಥೆಯನ್ನು ನಾಟಕದ ಮೂಲಕ ಹೇಳುವುದರಲ್ಲಿ ಯಶಸ್ವಿ ಆದವರು ಅನು ಮೇಲುಕೋಟೆ ಅವರು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನನ್ನು ರಂಗದ ಮೇಲೆ ತಂದವರು ವ್ಯಾಲಿ ಮಕ್ಕಳು.
ರಾಜ್ಯೋತ್ಸವದ ಈ ಸಂದರ್ಭದಲ್ಲಿ ಮಕ್ಕಳಿಗೋಸ್ಕರ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರಬಂಧ, ಕಲೆ ಹಾಗೂ ಕವಿತಾ ಸ್ಪರ್ಧೆಗಳಲ್ಲಿ ಮಕ್ಕಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದರು. ಹಲವಾರು ಕಲಾಕೃತಿಗಳು ಸದಸ್ಯರ ಮೆಚ್ಚುಗೆ ಪಡೆಯಿತು. ವಲ್ಲೀಶ ಶಾಸ್ತ್ರಿ ಹಾಗೂ ಪ್ರತಿಭಾ ಲಕ್ಷ್ಮಣ್ ಕಾರ್ಯಕ್ರಮದ ಋವಾರಿ ವಹಿಸಿ ನಡೆಸಿದ ಯಶಸ್ವಿ ಕಾರ್ಯಕ್ರಮದ ನಿರೂಪಣ ಕಾರ್ಯ ಮಕ್ಕಳಿಂದ ಕನ್ನಡದಲ್ಲೇ ನಡೆಯಿತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications