ಹಾಲಿವುಡ್ ಬೆಟ್ಟದ ಕೆಳಗೆ ಕನ್ನಡ ಕಲರವ

ದಕ್ಷಿಣ ಕ್ಯಾಲಿಫೋರ್ನಿಯಾದ ಕರ್ನಾಟಕ ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಕನ್ನಡಿಗರು ಭಾಗವಹಿಸಿದ್ದರು. ಈ ಬಾರಿಯ ವಿಶೇಷವೆಂದರೆ ಪೂರ್ಣ ಕಾರ್ಯಕ್ರಮ ಮಕ್ಕಳಿಂದ ಪೂರ್ಣ ಕನ್ನಡದಲ್ಲಿ ನಡೆದಿದ್ದು ಹಾಗೂ 125ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದು. ಅಲ್ಲದೇ ಕಾರ್ಯಕ್ರಮ “ಕರ್ನಾಟಕ ಚಾರಿತ್ರಿಕ, ಸಾಂಸ್ಕೃತಿಕ ಹಾಗೂ ಸ್ವಾಭಾವಿಕ ಮೈಲಿಗಲ್ಲು" ಎಂಬ ವಿಷಯದ ಆಧಾರದ ಮೇಲೆ ನಡೆಯಿತು.
ಮಕ್ಕಳು ತಲಕಾಡು, ಮೈಸೂರು, ಮಲೆನಾಡು, ಕೊಡಗು, ಚಿತ್ರದುರ್ಗ, ಹಾಸನ, ಕರಾವಳಿ ಪ್ರಾಂತಗಳ ಬಗ್ಗೆ ಕಾರ್ಯಕ್ರಮ ನಡೆಸಿಕೊಟ್ಟರಲ್ಲದೇ, ಜಾನಪದ ಹಾಡುಗಳಿಂದ ಜಾನಪದ ಲೋಕಕ್ಕೆ ಕರೆದುಕೊಂಡು ಹೋಗಿದ್ದರು. ಹೊಯ್ಸಳ ಸಾಮ್ರಾಜ್ಯದ ಪೂರ್ಣ ಇತಿಹಾಸವನ್ನೇ ಮಕ್ಕಳಿಂದ ಮಾಡಿಸಿ ಸೈ ಎನಿಸಿಕೊಂಡವರು ಶ್ರೀಧರ್ ರಾಜಣ್ಣನವರು. ವಾಣಿ ಶಿರೂರ್ ಅವರು ನೃತ್ಯ ಸಂಯೋಜಿಸಿ ಮಕ್ಕಳಿಂದ ನೃತ್ಯ ಮಾಡಿಸಿದ ಕರಾವಳಿ ಪ್ರಾಂತ್ಯದ ಕಾರ್ಯಕ್ರಮ ಜನರ ಮೆಚ್ಚುಗೆಗೆ ಪಾತ್ರವಾದರು. ತಲಕಾಡಿನ ಕಥೆಯನ್ನು ನಾಟಕದ ಮೂಲಕ ಹೇಳುವುದರಲ್ಲಿ ಯಶಸ್ವಿ ಆದವರು ಅನು ಮೇಲುಕೋಟೆ ಅವರು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನನ್ನು ರಂಗದ ಮೇಲೆ ತಂದವರು ವ್ಯಾಲಿ ಮಕ್ಕಳು.
ರಾಜ್ಯೋತ್ಸವದ ಈ ಸಂದರ್ಭದಲ್ಲಿ ಮಕ್ಕಳಿಗೋಸ್ಕರ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರಬಂಧ, ಕಲೆ ಹಾಗೂ ಕವಿತಾ ಸ್ಪರ್ಧೆಗಳಲ್ಲಿ ಮಕ್ಕಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದರು. ಹಲವಾರು ಕಲಾಕೃತಿಗಳು ಸದಸ್ಯರ ಮೆಚ್ಚುಗೆ ಪಡೆಯಿತು. ವಲ್ಲೀಶ ಶಾಸ್ತ್ರಿ ಹಾಗೂ ಪ್ರತಿಭಾ ಲಕ್ಷ್ಮಣ್ ಕಾರ್ಯಕ್ರಮದ ಋವಾರಿ ವಹಿಸಿ ನಡೆಸಿದ ಯಶಸ್ವಿ ಕಾರ್ಯಕ್ರಮದ ನಿರೂಪಣ ಕಾರ್ಯ ಮಕ್ಕಳಿಂದ ಕನ್ನಡದಲ್ಲೇ ನಡೆಯಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications