ಪಾರ್ಥಸಾರಥಿಯವರಿಗೆ ಕೊಲರಾಡೋ ಕನ್ನಡ ಪ್ರಶಸ್ತಿ

2011ರ ಡಿಸೆಂಬರ್ 9ರಂದು ಡೆನ್ವರ್ನ ನಾದ ಕೊಲರಾಡೋ ಸಭಾಂಗಣದಲ್ಲಿ ನಡೆದ ಹರಿದಾಸ ವಂದನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪಾರ್ಥಸಾರಥಿಯವರಿಗೆ ನೀಡಲಾಯಿತು. ಪ್ರಶಸ್ತಿಯು ಒಂದು ಲಕ್ಷದ ಐವತ್ತು ಸಾವಿರದ ಒಂದು ರೂಪಾಯಿಗಳ ಮೌಲ್ಯದ ಚೆಕ್, ಪ್ರಶಸ್ತಿ ಫಲಕ, ಶಾಲು ಹಾಗೂ ಫಲತಾಂಬೂಲಗಳನ್ನೊಳಗೊಂಡಿದೆ. ಕೊಲರಾಡೋ ಕನ್ನಡ ಕೂಟದ ಸಂಸ್ಥಾಪಕರಾದ ಡಾ. ಪ್ರಭಾಕರ ರಾವ್ ಅವರು ಪ್ರಶಸ್ತಿ ಫಲಕ ನೀಡಿ, ಪ್ರಸ್ತಾವನ ಭಾಷಣ ಮಾಡಿದರು.
ಶೇಕ್ಸ್ಪಿಯರ್, ಪೈಥಾಗರಸ್, ವಡ್ಸ್ವರ್ತ್, ಎಮರ್ಸನ್ ಮುಂತಾದ ಪಾಶ್ಚಾತ್ಯ ಧೀಮಂತರ ವಿಚಾರ ಸರಣಿಗಳನ್ನು ಶತಮಾನಗಳಿಂದಲೂ ವ್ಯವಸ್ಥಿತವಾಗಿ ಭಾರತದಲ್ಲಿ ಪ್ರಚುರಪಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಹಾಗೂ ಭಾರತದ ಶ್ರೇಷ್ಠ ಸಾಧಕರ ಚಿಂತನೆ, ಸಾಧನೆಗಳನ್ನು ಪಾಶ್ಚಾತ್ಯ ಜಗತ್ತಿಗೆ ವ್ಯಾಪಕವಾಗಿ ಪರಿಚಯಿಸಬೇಕಾದ ಅಗತ್ಯ ಇಂದು ಬಹಳಷ್ಟಿದೆ. ಈ ಕೆಲಸವನ್ನು ಅರಳುಮಲ್ಲಿಗೆ ಪಾರ್ಥಸಾರಥಿಯವರು ಎರಡು ದಶಕಗಳಿಂದಲೂ ಅತ್ಯಂತ ಪರಿಣಾಮಕಾರಿಯಾಗಿ ಮಾಡುತ್ತಿದ್ದಾರೆ ಎಂದು ಪ್ರಶಂಶಿಸಿದರು.
ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ದಾಸ ಸಾಹಿತ್ಯ, ಭಾಗವತ ಹಾಗೂ ವಿಷ್ಣು ಸಹಸ್ರನಾಮಗಳನ್ನು ಜಗತ್ತಿನ ಮೂವತ್ತಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ಪಸರಿಸುತ್ತಿದ್ದಾರೆ. ಇವರು ಬರೆದಿರುವ ಇಂಗ್ಲಿಷ್ ಭಾಷೆಯ ವಿಷ್ಣು ಸಹಸ್ರನಾಮವು ಈಗಾಗಲೇ 13ಕ್ಕೂ ಹೆಚ್ಚು ದೇಶಗಳಲ್ಲಿ ಬಿಡುಗಡೆಯಾಗಿ, ವಿಶ್ವಮಟ್ಟದ ಮನ್ನಣೆಗಳಿಸಿದೆ. ನಲವತ್ತೈದು ಕನ್ನಡ ಗ್ರಂಥಗಳನ್ನು ರಚಿಸಿ, ಮೂವತ್ತೈದು ಧ್ವನಿ ಮುದ್ರಿಕೆಗಳನ್ನು ಹೊರತಂದು, ಸಾವಿರಾರು ಪ್ರವಚನ, ಉಪನ್ಯಾಸಗಳನ್ನು ಜಗತ್ತಿನಾದ್ಯಂತ ನಿರಂತರವಾಗಿ ನಡೆಸಿಕೊಂಡು ಬಂದಿರುವ ಪಾರ್ಥಸಾರಥಿಯವರಿಗೆ ಪ್ರಶಸ್ತಿ ನೀಡುವ ಮೂಲಕ ಕೊಲರಾಡೋ ಕನ್ನಡ ಕೂಟವು ಅವರನ್ನು ಗೌರವಿಸುತ್ತಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಾರ್ಥಸಾರಥಿಯವರು, ಕೊಲರಾಡೋ ಕನ್ನಡ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸಿ, ಹರಿದಾಸರು ಸಂಗೀತ, ಸಾಹಿತ್ಯದ ಮೂಲಕ ಸಾಮಾಜಿಕ ಬದುಕಿಗೆ ನೀಡಿದ ಗಮನಾರ್ಹ ಕೊಡುಗೆಗಳ ಬಗ್ಗೆ ಮಾತನಾಡಿದರು. ವಿಶೇಷವಾಗಿ ಪುರಂದರದಾಸರ ಕೊಡುಗೆಯ ಬಗ್ಗೆ ಹೇಳುತ್ತ, ಒಬ್ಬ ವ್ಯಕ್ತಿ ಬರೆದ ಒಂದು ಹಾಡನ್ನು ಐದು ಶತಮಾನಗಳ ಕಾಲ ಕೋಟ್ಯಂತರ ಜನ ಹೇಳುತ್ತ ಸಾಂಸ್ಕೃತಿಕ ಸವಿ ಸವಿದಿದ್ದರೆ ಅದು ಪುರಂದರ ದಾಸರ ಭಾಗ್ಯದ ಲಕ್ಷ್ಮೀ ಬಾರಮ್ಮ ಎನ್ನುವ ಹಾಡು ಎಂದು ಹೇಳಿ, ಪುರಂದರ ದಾಸರ ಸಾಧನೆಯನ್ನು, ಅವರ ಅನೇಕ ಪದಗಳನ್ನು ಸಭೆಗೆ ಪರಿಚಯಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications