ಪಾರ್ಥಸಾರಥಿಯವರಿಗೆ ಕೊಲರಾಡೋ ಕನ್ನಡ ಪ್ರಶಸ್ತಿ

2011ರ ಡಿಸೆಂಬರ್ 9ರಂದು ಡೆನ್ವರ್ನ ನಾದ ಕೊಲರಾಡೋ ಸಭಾಂಗಣದಲ್ಲಿ ನಡೆದ ಹರಿದಾಸ ವಂದನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪಾರ್ಥಸಾರಥಿಯವರಿಗೆ ನೀಡಲಾಯಿತು. ಪ್ರಶಸ್ತಿಯು ಒಂದು ಲಕ್ಷದ ಐವತ್ತು ಸಾವಿರದ ಒಂದು ರೂಪಾಯಿಗಳ ಮೌಲ್ಯದ ಚೆಕ್, ಪ್ರಶಸ್ತಿ ಫಲಕ, ಶಾಲು ಹಾಗೂ ಫಲತಾಂಬೂಲಗಳನ್ನೊಳಗೊಂಡಿದೆ. ಕೊಲರಾಡೋ ಕನ್ನಡ ಕೂಟದ ಸಂಸ್ಥಾಪಕರಾದ ಡಾ. ಪ್ರಭಾಕರ ರಾವ್ ಅವರು ಪ್ರಶಸ್ತಿ ಫಲಕ ನೀಡಿ, ಪ್ರಸ್ತಾವನ ಭಾಷಣ ಮಾಡಿದರು.
ಶೇಕ್ಸ್ಪಿಯರ್, ಪೈಥಾಗರಸ್, ವಡ್ಸ್ವರ್ತ್, ಎಮರ್ಸನ್ ಮುಂತಾದ ಪಾಶ್ಚಾತ್ಯ ಧೀಮಂತರ ವಿಚಾರ ಸರಣಿಗಳನ್ನು ಶತಮಾನಗಳಿಂದಲೂ ವ್ಯವಸ್ಥಿತವಾಗಿ ಭಾರತದಲ್ಲಿ ಪ್ರಚುರಪಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಹಾಗೂ ಭಾರತದ ಶ್ರೇಷ್ಠ ಸಾಧಕರ ಚಿಂತನೆ, ಸಾಧನೆಗಳನ್ನು ಪಾಶ್ಚಾತ್ಯ ಜಗತ್ತಿಗೆ ವ್ಯಾಪಕವಾಗಿ ಪರಿಚಯಿಸಬೇಕಾದ ಅಗತ್ಯ ಇಂದು ಬಹಳಷ್ಟಿದೆ. ಈ ಕೆಲಸವನ್ನು ಅರಳುಮಲ್ಲಿಗೆ ಪಾರ್ಥಸಾರಥಿಯವರು ಎರಡು ದಶಕಗಳಿಂದಲೂ ಅತ್ಯಂತ ಪರಿಣಾಮಕಾರಿಯಾಗಿ ಮಾಡುತ್ತಿದ್ದಾರೆ ಎಂದು ಪ್ರಶಂಶಿಸಿದರು.
ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ದಾಸ ಸಾಹಿತ್ಯ, ಭಾಗವತ ಹಾಗೂ ವಿಷ್ಣು ಸಹಸ್ರನಾಮಗಳನ್ನು ಜಗತ್ತಿನ ಮೂವತ್ತಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ಪಸರಿಸುತ್ತಿದ್ದಾರೆ. ಇವರು ಬರೆದಿರುವ ಇಂಗ್ಲಿಷ್ ಭಾಷೆಯ ವಿಷ್ಣು ಸಹಸ್ರನಾಮವು ಈಗಾಗಲೇ 13ಕ್ಕೂ ಹೆಚ್ಚು ದೇಶಗಳಲ್ಲಿ ಬಿಡುಗಡೆಯಾಗಿ, ವಿಶ್ವಮಟ್ಟದ ಮನ್ನಣೆಗಳಿಸಿದೆ. ನಲವತ್ತೈದು ಕನ್ನಡ ಗ್ರಂಥಗಳನ್ನು ರಚಿಸಿ, ಮೂವತ್ತೈದು ಧ್ವನಿ ಮುದ್ರಿಕೆಗಳನ್ನು ಹೊರತಂದು, ಸಾವಿರಾರು ಪ್ರವಚನ, ಉಪನ್ಯಾಸಗಳನ್ನು ಜಗತ್ತಿನಾದ್ಯಂತ ನಿರಂತರವಾಗಿ ನಡೆಸಿಕೊಂಡು ಬಂದಿರುವ ಪಾರ್ಥಸಾರಥಿಯವರಿಗೆ ಪ್ರಶಸ್ತಿ ನೀಡುವ ಮೂಲಕ ಕೊಲರಾಡೋ ಕನ್ನಡ ಕೂಟವು ಅವರನ್ನು ಗೌರವಿಸುತ್ತಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಾರ್ಥಸಾರಥಿಯವರು, ಕೊಲರಾಡೋ ಕನ್ನಡ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸಿ, ಹರಿದಾಸರು ಸಂಗೀತ, ಸಾಹಿತ್ಯದ ಮೂಲಕ ಸಾಮಾಜಿಕ ಬದುಕಿಗೆ ನೀಡಿದ ಗಮನಾರ್ಹ ಕೊಡುಗೆಗಳ ಬಗ್ಗೆ ಮಾತನಾಡಿದರು. ವಿಶೇಷವಾಗಿ ಪುರಂದರದಾಸರ ಕೊಡುಗೆಯ ಬಗ್ಗೆ ಹೇಳುತ್ತ, ಒಬ್ಬ ವ್ಯಕ್ತಿ ಬರೆದ ಒಂದು ಹಾಡನ್ನು ಐದು ಶತಮಾನಗಳ ಕಾಲ ಕೋಟ್ಯಂತರ ಜನ ಹೇಳುತ್ತ ಸಾಂಸ್ಕೃತಿಕ ಸವಿ ಸವಿದಿದ್ದರೆ ಅದು ಪುರಂದರ ದಾಸರ ಭಾಗ್ಯದ ಲಕ್ಷ್ಮೀ ಬಾರಮ್ಮ ಎನ್ನುವ ಹಾಡು ಎಂದು ಹೇಳಿ, ಪುರಂದರ ದಾಸರ ಸಾಧನೆಯನ್ನು, ಅವರ ಅನೇಕ ಪದಗಳನ್ನು ಸಭೆಗೆ ಪರಿಚಯಿಸಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications