ಅಮೆರಿಕಾದ ಕನ್ನಡಿಗರನ್ನು ಬೆಚ್ಚಗಾಗಿಸಿದ ಹೇಮಂತ ಗಾನ

ಜನವರಿ 22, ಶನಿವಾರದಂದು ಕನೆಕ್ಟಿಕಟ್ನಲ್ಲಿರುವ ಶ್ರೀ ಸ್ವಾಮಿ ಸತ್ಯನಾರಾಯಣ ದೇವಸ್ಥಾನದ ಆಡಿಟೋರಿಯಮ್ನಲ್ಲಿ ನಡೆದ ಈ ಗಾನ ಸಂಜೆಗೆ ನೂರಾರು ಹೊರನಾಡ ಕನ್ನಡಿಗರು ತಮ್ಮ ಪರಿವಾರ ಸಮೇತ ತೀವ್ರ ಚಳಿಯಲ್ಲೂ (0 ಡಿಗ್ರಿ ಸೆಲ್ಸಿಯಸ್) ಉತ್ಸಾಹದಿಂದ ಭಾಗವಹಿಸಿದ್ದು ನೋಡಿದರೆ ಕನ್ನಡದ ಅಭಿಮಾನ ಎದ್ದು ಕಾಣುತ್ತಿತ್ತು.
ರಘು ಸೋಸಲೆ ಹೇಮಂತ ಗಾನದ ಬಗ್ಗೆ ವಿವರಣೆ ಕೊಡುತ್ತ ಎಲ್ಲರನ್ನು ಸ್ವಾಗತಿಸಿದರು. ಅನಿತಾ ಜೋಯಿಸ್ ಅವರು ಹಾಡಿದ ಶ್ರೀಗಣೇಶ ಸ್ತುತಿಯೊಂದಿಗೆ ಈ ಗಾನ ಸಂಜೆ ಸರಿಯಾಗಿ 4 ಗಂಟೆಗೆ ಪ್ರಾರಂಭವಾಯಿತು. ನಂತರ ಯಶವಂತ್ ಗಡ್ಡಿಯವರು ಹಾಡಿದ ಕನ್ನಡ ನಾಡ ಗೀತೆ "ಜೈ ಭಾರತ ಜನನಿಯ ತನುಜಾತೆ.. ಜಯಹೇ ಕರ್ನಾಟಕ ಮಾತೆ.." ಕೇಳಿಬಂದ ಕೂಡಲೇ ಸಭಿಕರೆಲ್ಲ ಎದ್ದು ನಿಂತು ತಾವೂ ಹಾಡತೊಡಗಿದರು.
ಈ ಹೇಮಂತ ಗಾನದ ವಿಶೇಷವೇನೆಂದರೆ, ಹಾಡು ಹೇಳಲು ಮಕ್ಕಳಿಗೂ ಹಾಗೂ ದೊಡ್ಡವರಿಗೂ ಸಮಾನ ಅವಕಾಶ ಕಲ್ಪಿಸಿಕೊಟ್ಟಿದ್ದು, ಮಕ್ಕಳ ಹಾಡು ಆದಮೇಲೆ ದೊಡ್ಡವರ ಹಾಡು. ಹೀಗೆ ಸರಿಸಮನಾಗಿ ನಡೆದ ಈ ಸಮಾರಂಭದಲ್ಲಿ ಮಕ್ಕಳೂ ನಾವೇನೂ ಕಡಿಮಯಿಲ್ಲಎಂಬಂತೆ ಅಚ್ಚ ಕನ್ನಡದಲ್ಲಿ ಶುಶ್ರಾವ್ಯವಾಗಿ ಹಾಡಿದ್ದು ಎಲ್ಲರ ಮನಸೆಳೆಯಿತು. 7ರ ಪೋರ ಮಾ| ಕಶ್ಯಪ್ ಹಾಡಿದ "ತೇರಾ ಏರಿ ಅಂಬರದಾಗೆ ನೇಸರ ನಗುತಾನೆ" , 9ರ ಕು| ನಿಷಿತ "ಜೋ ಜೋ ಲಾಲಿ ನಾ ಹಾಡುವೆ .." ಅಂತ ಹಾಡತೊಡಗಿದಾಗ ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ ಸಂತೋಷಪಟ್ಟರು.
ನಂತರ ಮೋಹನ್ ತಮ್ಮ ಮಗಳೊಂದಿಗೆ ಹೇಳಿದ ನಮ್ಮ ಆಟೋರಾಜ ಶಂಕರ್ ನಾಗ್ ರವರ ಪ್ರಸಿದ್ದ "ಜೊತೆ ಜೊತೆಯಲಿ ..ಇರುವೆನು ಹೀಗೆ ಎಂದು", ದಿಲೀಪ್ ರವರು ಶುಭಮಂಗಳ ಚಿತ್ರದ "ಹೂವೊಂದು ಬಳಿಬಂದು ತಾಕಿತು ಎನ್ನೆದೆಯ" ಎಂದು ತಮ್ಮ ಪ್ರೀತಿಯ ಮಡದಿಗಾಗಿ ಕೈಯಲ್ಲಿ ಹೆಂಡತಿ ಕೊಟ್ಟ ಪ್ರೀತಿಯ ಗುಲಾಬಿ ಹೂ ಹಿಡಿದು ಸುಶ್ರಾವ್ಯವಾಗಿ ಹೇಳಿದ್ದು ಎಲ್ಲರನ್ನು ಪ್ರೀತಿಯ ಭಾವುಕತೆಯಲ್ಲಿ ತೇಲಿಸಿತು.
ಹೀಗೆ ಸಾಲು ಸಾಲಾಗಿ ಹಳೆಯ ಹಾಗು ಹೊಸ ಕನ್ನಡಗೀತೆಗಳ ಜೊತೆಗೆ ಆಶಾ ಗಡ್ಡಿಯವರಿಂದ ಒಂದು ಭಾವಗೀತೆ "ನಿಂತಲ್ಲೇ ನೀರು ನಿಲ್ಲುವುದಿಲ್ಲ, ಹಳ್ಳ ಸಿಕ್ಕಿದ ಕಡೆ ನಡೆಯುವುದಲ್ಲಾ", "ಅಂಜು ಅವರಿಂದ ಪುರಂದರ ದಾಸರ "ರಾಮ ನಾಮ ಪಾಯಸಕ್ಕೆ, ಕೃಷ್ಣ ನಾಮ ಸಕ್ಕರೆ" ದಾಸರ ಪಾದ, ಅನಿತಾ -ಕೃಷ್ಣಮೂರ್ತಿರವರಿಂದ "ಬೆಳದಿಂಗಳ" , ಮಕ್ಕಳಿಂದ ವಾದ್ಯ ಸಂಗೀತ ಎಲ್ಲರ ಮನಸೆಳೆದವು.
ಜೋ ಕಣ್ಣೂರು ಅವರು ಮಕ್ಕಳಿಗಾಗಿ ನಡೆಸಿಕೊಟ್ಟ ಒಂದು ಚಿಕ್ಕ ಮ್ಯಾಜಿಕ್ ಶೋ ಎಲ್ಲ ಮಕ್ಕಳನ್ನು ಸೆಳೆಹಿಡಿದ ಮೇಲೆ ಕೊನೆಗೆ ವೇಣು ಗುಡೇರ ಹಾಡಿದ "ಕೊಲವೆರಿ ಕೊಲವೆರಿ ಡಿ" ಹಾಡಿಗೆ ಎಲ್ಲರು ಕುಣಿಯಲು ಆರಂಭಿಸಿದ್ದನ್ನು ನೋಡಿ, ಈ ಕೊಲವೆರಿಯಾ ಮ್ಯಾಜಿಕ್ ಅಮೆರಿಕಾವನ್ನು ಬಿಡಲಿಲ್ಲವಲ್ಲ ಅಂತಾ ಅಂದುಕೊಂಡು.
ಎಲ್ಲ ಕನ್ನಡಿಗರು ಮನೆಯಿಂದ ಮಾಡಿ ತಂದಿದ್ದ ವಿವಿದ ಬಗೆಯ ರುಚಿಯಾದ ಊಟ ಮಾಡಿ ಹೊಯ್ಸಳ ಕನ್ನಡ ಕೂಟದವರಿಗೆ ಧನ್ಯವಾದಗಳನ್ನು ಹೇಳಿ ಮನೆ ಕಡೆ ಹೊರಟಾಗ ರಾತ್ರಿ 8ರ ಮೇಲಾಗಿತ್ತು. ಹೀಗೆ ಸರಿಸುಮಾರು 4 ಗಂಟೆಗಳ ತನಕ ನಡೆದ ಈ ಗಾನ ಸಂಜೆ ಎಲ್ಲರ ಕಿವಿ , ಮನ ತಣಿಸಿದ್ದಲ್ಲದೆ ಎಲ್ಲರಲ್ಲೂ ಗುಪ್ತವಾಗಿ ಅಡಗಿದ್ದ ಹಾಡುವ ಕಲೆಯನ್ನು ಹೊರಹೊಮ್ಮಿಸಿದ್ದಂತು ಅಕ್ಷರಶ: ನಿಜ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications